ಗ್ರಾಮ ಪಂಚಾಯತ್‌ ಕದನ: 4111 ನಾಮಪತ್ರ ಸಲ್ಲಿಕೆ


Team Udayavani, Dec 13, 2020, 5:02 PM IST

ಗ್ರಾಮ ಪಂಚಾಯತ್‌ ಕದನ: 4111 ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅವಧಿ  ಮುಕ್ತಾಯವಾಗಿದ್ದು ಮೂರು ತಾಲೂಕಿನ 112 ಗ್ರಾಪಂನ 1212 ಕ್ಷೇತ್ರಗಳಿಗೆ 4111 ನಾಮಪತ್ರ ಸಲ್ಲಿಕೆಯಾಗಿವೆ.

ಡಿ.12ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು 14ರಂದು ಉಮೇದುವಾರಿಕೆ ಹಿಂಪಡೆಯಲುಕಡೇ ದಿನವಾಗಿರುತ್ತದೆ. ಬಳಿಕವಷ್ಟೇ ಮೊದಲ ಹಂತದ ಚುನಾವಣಾ ಕಣದ ಸ್ಪಷ್ಟ ಚಿತ್ರಣ ಸಿಗಲಿದೆ. 14ರ ಮಧ್ಯಾಹ್ನ 3ರ ಬಳಿಕ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ.

ಎರಡನೇ ಹಂತದಲ್ಲಿ ನಾಲ್ಕು ತಾಲೂಕು ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆಗೆ ಶುಕ್ರವಾರ ನಾಮಪತ್ರಸಲ್ಲಿಕೆ ಆರಂಭವಾಗಿದೆ. ಮೊದಲ ದಿನನಾಲ್ಕು ತಾಲೂಕುಗಳಿಂದ ಒಟ್ಟು 378 ನಾಮಪತ್ರ ಸಲ್ಲಿಕೆಯಾಗಿವೆ. ಶಿಕಾರಿಪುರ,ಸೊರಬ, ಸಾಗರ ಹಾಗೂ ಹೊಸನಗರ ತಾಲೂಕಿನ ಒಟ್ಟು 131 ಗ್ರಾಪಂಗಳ 1,397 ಸ್ಥಾನಗಳಿಗೆ ಡಿ.27ರಂದು ಚುನಾವಣೆ ನಡೆಯಲಿದೆ. ಮೊದಲ ದಿನ ಶಿಕಾರಿಪುರತಾಲೂಕಿನಲ್ಲಿ 77, ಸೊರಬ 92, ಸಾಗರ 114 ಹಾಗೂ ಹೊಸನಗರದಲ್ಲಿ 95 ನಾಮಪತ್ರಗಳ ಸಲ್ಲಿಕೆಯಾಗಿದೆ. ಶಿಕಾರಿಪುರ ತಾಲೂಕಿನ ಮೊದಲ ದಿನವಾದ ಶುಕ್ರವಾರ 77 ನಾಮಪತ್ರಗಳು ಸಲ್ಲಿಕೆಯಾಗಿದ್ದು ಶನಿವಾರ ಇನ್ನೂ ಹೆಚ್ಚಿನ ನಾಮಪತ್ರಗಳು ಸಲ್ಲಿಕೆಯಾಗುವ ಸಾಧ್ಯತೆಗಳಿವೆ.

11 ಸ್ಥಾನಗಳಿಗೆ ಉಮೇದುವಾರಿಕೆಯೇ ಇಲ್ಲ :

ಶುಕ್ರವಾರ ಅಂತ್ಯಗೊಂಡ ಮೊದಲ ಹಂತದ ಗ್ರಾಪಂ ಚುನಾವಣೆಯಲ್ಲಿ 11 ಸ್ಥಾನಗಳಿಗೆ ಯಾರೂ ಉಮೇದುವಾರಿಕೆ ಸಲ್ಲಿಸಿಲ್ಲ. ಈ ಎಲ್ಲ 11 ಸ್ಥಾನಗಳು ಶಿವಮೊಗ್ಗ ತಾಲೂಕಿಗೆ ಒಳಪಟ್ಟಿವೆ. ಭದ್ರಾವತಿ ಹಾಗೂ ತೀರ್ಥಹಳ್ಳಿಯಲ್ಲಿ ಶೇ.100ರಷ್ಟು ಉಮೇದುವಾರಿಕೆಸಲ್ಲಿಕೆಯಾಗಿದೆ. ಹೊಸಹಳ್ಳಿಯ 1 ಸ್ಥಾನ, ಕಡೇಕಲ್‌ 1, ಹೊಳೆಬೆನವಳ್ಳಿ 1, ಶೆಟ್ಟಿಹಳ್ಳಿ 1, ಸೂಗೂರು 1, ಹೊಳಲೂರು 1, ತಮ್ಮಡಿಹಳ್ಳಿ 1, ಕೊಮ್ಮನಾಳು 1, ಕುಂಚೇನಹಳ್ಳಿ 1, ಮುದ್ದಿನಕೊಪ್ಪ 1, ಕೊನಗವಳ್ಳಿ 1 ಸೇರಿ ಒಟ್ಟು 11 ಸ್ಥಾನಗಳಿಗೆ ಉಮೇದುವಾರಿಕೆ ಸಲ್ಲಿಕೆಯಾಗಿಲ್ಲ. ಮೀಸಲಾತಿ ವ್ಯತ್ಯಾಸದಿಂದ ಯಾರೂ ಮುಂದೆ ಬಂದಿಲ್ಲ ಎಂದು ಹೇಳಲಾಗುತ್ತಿದೆ

ಗ್ರಾಪಂ ಚುನಾವಣೆ ಕಂಟ್ರೋಲ್‌ ರೂಂ :

ಗ್ರಾಪಂ ಚುನಾವಣೆ ಅಕ್ರಮಗಳಿಗೆ ಸಂಬಂಧಿ ಸಿ ತಾಲೂಕು ವ್ಯಾಪ್ತಿಯ ದೂರು ಸ್ವೀಕರಿಸಲು ಕಂಟ್ರೋಲ್‌ ರೂಂ ತೆರೆದಿದ್ದು ಯಾವುದೇ ಸಮಯದಲ್ಲಿ (08182-279311) ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ತಹಶೀಲ್ದಾರ್‌ ಎಸ್‌.ಜೆ. ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.