ಶಾಸಕರಿಬ್ಬರಿಗೆ ಪ್ರತಿಷ್ಠೆಯ ಕಣವಾದ ಗ್ರಾಪಂ ಕದನ


Team Udayavani, Dec 15, 2020, 5:37 PM IST

ಶಾಸಕರಿಬ್ಬರಿಗೆ ಪ್ರತಿಷ್ಠೆಯ ಕಣವಾದ ಗ್ರಾಪಂ ಕದನ

ಹೊಸನಗರ: ತಾಲೂಕು ಒಂದಾದರೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಹೋಗಿರುವ ಇಲ್ಲಿ ಸಮಸ್ಯೆಗಳು ಹಲವು. ಗ್ರಾಪಂ ಚುನಾವಣೆ ಇಬ್ಬರು ಶಾಸಕರಿಗೆಪ್ರತಿಷ್ಠೆಯಾಗಿದ್ದರೆ, ವಿಪಕ್ಷಗಳಿಗೆ ಸ್ಥಳೀಯ ಮಟ್ಟದಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಸವಾಲು.

ಹೌದು, ಕಸಬಾ, ಕೆರೆಹಳ್ಳಿ, ಹುಂಚಾ ಮತ್ತು ನಗರ ಸೇರಿ ನಾಲ್ಕು ಹೋಬಳಿ ಹೊಂದಿರುವಹೊಸನಗರ ತಾಲೂಕಿನಲ್ಲಿ ಗ್ರಾಪಂ ಚುನಾವಣೆ2 ನೇ ಹಂತದಲ್ಲಿ ನಡೆಯಲಿದೆ. ಬಿಜೆಪಿ ಮತ್ತುಕಾಂಗ್ರೆಸ್‌ ಸ್ಪರ್ಧೆ ಬಹುತೇಕ ಕಂಡುಬಂದರೆ ಜೆಡಿಎಸ್‌ ನಡೆ ಇನ್ನೂ ನಿಗೂಢವಾಗಿದೆ.

ಸಮಸ್ಯೆಗಳ ಸಾಲು: ವಾರಾಹಿ, ಚಕ್ರಾ ಸಾವೇಹಕ್ಲು ಮತ್ತು ಶರಾವತಿ ಸಂತ್ರಸ್ತರಸಮಸ್ಯೆ ಇಲ್ಲಿಯ ಹಲವು ದಶಕದ ಸಮಸ್ಯೆ.ಇನ್ನು ಭೂಮಿ ಹಕ್ಕಿಗಾಗಿ ಹೋರಾಟನಡೆಯುತ್ತಲೇ ಇದೆ. ನೂತನ ಬಿಜೆಪಿ ಸರ್ಕಾರ ಬಂದ ಮೇಲೆ ಈವರೆಗೆ ಬಗರ್‌ಹುಕುಂ ಸಮಿತಿ ರಚನೆಯಾಗದಿರುವುದು ವಿಪಕ್ಷಗಳಚುನಾವಣಾ ಅಸ್ತ್ರವಾಗಿ ಮಾರ್ಪಾಡಾಗಿದೆ. ಇನ್ನು ನಾಲ್ಕು ಹೋಬಳಿಯಲ್ಲಿ ವಿಭಿನ್ನ ಚಿತ್ರಣ, ವಿಭಿನ್ನ ಸಮಸ್ಯೆಗಳಿದ್ದು ಸ್ಥಳೀಯ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಹರತಾಳು ಹಾಲಪ್ಪ ಹೊಸನಗರ ಕ್ಷೇತ್ರದ ಕೊನೆಯ ಶಾಸಕರು: ಹರತಾಳು ಹಾಲಪ್ಪ ಶಾಸಕರಾಗಿದ್ದೇ ಕೊನೆ. ಅಲ್ಲಿಂದ ಹೊಸನಗರ ವಿಧಾನಸಭಾ ಕ್ಷೇತ್ರ ಮಾನ್ಯತೆಯನ್ನು ಕಳೆದುಕೊಂಡಿದೆ. ಇದೀಗ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪ ಹೊಸನಗರ ತಾಲೂಕಿನ ಕಸಬಾ ಮತ್ತು ಕೆರೆಹಳ್ಳಿಯನ್ನು ಪ್ರತಿನಿಧಿಸುತ್ತಿದ್ದಾರೆ. ಇನ್ನು ನಗರ ಮತ್ತು ಹುಂಚಾ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವ್ಯಾಪ್ತಿಗೆ ಬರುತ್ತದೆ.ಇದೀಗ ಮತ್ತೆ ಹೊಸನಗರ ವಿಧಾನಸಭಾಕ್ಷೇತ್ರದ ಮರುಹುಟ್ಟಿಗಾಗಿ ಗ್ರಾಮಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ.

ಪ್ರಭಾವಿಗಳ ಪ್ರಭಾವ: ಹೊಸನಗರ ತಾಲೂಕು ಎರಡು ಶಾಸಕರ ವ್ಯಾಪ್ತಿಗೆ ಬರುವ ಕಾರಣ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪ ಮತ್ತು ಆರಗ ಜ್ಞಾನೇಂದ್ರ ಅವರ ಪ್ರಭಾವ ಚುನಾವಣೆಮೇಲೆ ಬೀಳಲಿದೆ. ಕೋವಿಡ್ ಸಂಕಷ್ಟದ ಮಧ್ಯೆ ಕೂಡ ಪಂಚಾಯತ್‌ ಮಟ್ಟದಲ್ಲಿ ನೀಡಿರುವ ಕೊಡುಗೆಗಳ ಬಗ್ಗೆ ಮತದಾರರಿಗೆ ತಿಳಿಸುವ ಮೂಲಕ ಅಖಾಡಕ್ಕೆ ಈಗಾಗಲೇ ಧುಮುಕಿದ್ದಾರೆ. ಈ ನಡುವೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹೊಂದಿ ಹುಮ್ಮಸ್ಸಿನಲ್ಲಿರುವ ಬಿಜೆಪಿ ಕಾರ್ಯಕರ್ತರ ಸಂಘಟಿತ ಪ್ರಯತ್ನಕ್ಕೆ ಕೈಹಾಕಿದೆ.

ಕಾಂಗ್ರೆಸ್‌- ಜೆಡಿಎಸ್‌ ಹೊಂದಾಣಿಕೆ ಸಾಧ್ಯವೇ?: ಈಗಾಗಲೇ ಬಹುತೇಕ ಗ್ರಾಪಂಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆದರೆ ಬದಲಾದ ರಾಜಕೀಯದಲ್ಲಿ ಅವುಗಳನ್ನು ಉಳಿಸಿಕೊಳ್ಳುವ ಸವಾಲು ಕಾಂಗ್ರೆಸ್‌ ಎದುರಿಗಿದೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್‌, ಕಾಂಗ್ರೆಸ್‌ ವಕ್ತಾರ ಬೇಳೂರು ಗೋಪಾಲಕೃಷ್ಣ ಈಗಾಗಲೇ ಒಂದು ಹಂತದ ಪಂಚಾಯತ್‌ ಮಟ್ಟದಲ್ಲಿ ಸಭೆ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದ್ದಾರೆ.

ಈ ನಡುವೆ ಜೆಡಿಎಸ್‌ ಸಂಘಟನೆ ತಾಲೂಕಿನಲ್ಲಿ ಹೇಳಿಕೊಳ್ಳುವಂತಿಲ್ಲ.ಹೊಸನಗರ ಪಪಂ ತನ್ನದೇ ಒಂದಷ್ಟು ಹಿಡಿತ ಹೊಂದಿರುವ ಜೆಡಿಎಸ್‌ ನಗರ ಹೋಬಳಿಯಲ್ಲಿ ಕೂಡ ಒಂದಷ್ಟು ಪ್ರಭಾವ ಹೊಂದಿದೆ. ಪಕ್ಷ ಮಟ್ಟದಲ್ಲಿ ಹೊಂದಾಣಿಕೆ ಕಂಡು ಬರದಿದ್ದರೂ ಕೂಡ ಲೋಕಲ್‌ನಲ್ಲಿಅಲ್ಲಲ್ಲಿ ಅಭ್ಯರ್ಥಿಗಳ ನಡುವೆ ಸಹಮತ ಕಂಡುಬಂದಿದೆ.

 

ಕುಮುದಾ ನಗರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.