“ಕೋವಿಡ್’ ವೈದ್ಯರಿಗೆ ರಜೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಸಲಹೆ


Team Udayavani, Dec 15, 2020, 8:59 PM IST

“ಕೋವಿಡ್’ ವೈದ್ಯರಿಗೆ ರಜೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಸಲಹೆ

ಹೊಸದಿಲ್ಲಿ: ಏಳೆಂಟು ತಿಂಗಳಿಂದ ವಿರಮಿಸದೆ ಕೆಲಸ ಮಾಡುತ್ತಿರುವ ವೈದ್ಯರಿಗೆ ಒಂದಷ್ಟು ವಿಶ್ರಾಂತಿ ನೀಡಿ. ಇಲ್ಲದಿದ್ದರೆ ಅವರ ಮಾನಸಿಕ ಆರೋಗ್ಯದ ಮೇಲೆ ಅಡ್ಡಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್‌ ಸರಕಾರಕ್ಕೆ ಸೂಚಿಸಿದೆ.

ದೇಶದಲ್ಲಿ ಮಾರ್ಚ್‌ನಲ್ಲಿ ಕೊರೊನಾ ಕಾಣಿಸಿಕೊಂಡು, ಅನಂತರ ಬಹಳಷ್ಟು ಏರಿಕೆಯಾಗಿದೆ. ಅಂದಿನಿಂದ ಇಂದಿನ ವರೆಗೂ ಜನರ ಜೀವ ಉಳಿಸುವಲ್ಲಿ ವೈದ್ಯರ ಪರಿಶ್ರಮ ಕಡಿಮೆಯೇನಲ್ಲ. ಆದರೆ ಅವರಿಗೇ ವಿಶ್ರಾಂತಿ ನೀಡದಿದ್ದರೆ ಕಷ್ಟ. ಈ ಬಗ್ಗೆ ನಮಗೆ ನೋವುಂಟಾಗಿದೆ. ಹೀಗಾಗಿ ಅವರಿಗೆ ವಿರಾಮ ನೀಡುವ ಬಗ್ಗೆ ಕೇಂದ್ರ ಸರಕಾರ ನಿರ್ಧರಿಸಬೇಕು ಎಂದು ಅಡಿಶನಲ್‌ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಕೋರ್ಟ್‌ ಸೂಚಿಸಿತು.

ಕೊರೊನಾ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಮತ್ತು ಕೊರೊನಾದಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರ ಒದಗಿಸಬೇಕು ಎಂಬ ಮನವಿ ಕುರಿತು ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಸರ್ವೋಚ್ಚ ನ್ಯಾಯಾಲಯವು, ಕೇಂದ್ರ ಸರಕಾರ ಮತ್ತು ಗುಜರಾತ್‌ ಸರಕಾರಗಳ ವಿರುದ್ಧ ಕಿಡಿಕಾರಿತು. ಗುಜರಾತ್‌ನಲ್ಲಿ ಮಾಸ್ಕ್ ಧರಿಸದಿರುವ ವ್ಯಕ್ತಿಗಳಿಂದ 90 ಕೋ.ರೂ. ದಂಡ ಸಂಗ್ರಹಿಸಿರುವ ಬಗ್ಗೆಯೂ ಕಿಡಿಕಾರಿತು.

ಹಿಂದೆಯೂ ವೈದ್ಯರ ಪರ ನಿಂತಿದ್ದ ಕೋರ್ಟ್‌
ಸುಪ್ರೀಂ ಕೋರ್ಟ್‌ ಕೊರೊನಾ ಆರಂಭವಾದ ಮೇಲೆ ಹಲವಾರು ಬಾರಿ ವೈದ್ಯರ ಪರವಾಗಿ ನಿಂತಿದೆ. ಜನರಿಗೆ ಅನ್ವಯವಾಗುವಂಥ ಕ್ವಾರಂಟೈನ್‌ ನಿಯಮ ವೈದ್ಯರಿಗೆ ಅನ್ವಯವಾಗುವುದಿಲ್ಲ. ವೈದ್ಯರಿಗೆ ಸರಿಯಾದ ಸಮಯಕ್ಕೆ ವೇತನ ನೀಡಬೇಕು. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೆದರಿಕೆ ಹಾಕಬಾರದು ಎಂಬಿತ್ಯಾದಿ ಮಹತ್ವದ ಆದೇಶಗಳನ್ನು ಅದು ಹೊರಡಿಸಿತ್ತು.

ಚೀಟಿ ಕೊಡಿ, ಜಾಹೀರಾತು ಬೇಡ
ಆಯುರ್ವೇದ ವೈದ್ಯರ ಬಗ್ಗೆಯೂ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶಹೊರಡಿಸಿದೆ. ಆಯುಷ್‌ ವೈದ್ಯರು ಕೊರೊನಾ ರೋಗಿಗಳಿಗೆ ಸರಕಾರ ಒಪ್ಪಿರುವಂಥ ಟ್ಯಾಬ್ಲೆಟ್‌ಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವಂಥ ಮಾತ್ರೆಗಳನ್ನು ನೀಡಬಹುದು ಎಂದು ಹೇಳಿದೆ. ಆದರೆ ಈ ಮಾತ್ರೆಗಳಿಂದಲೇ ಕೊರೊನಾ ಗುಣಮುಖವಾಗುತ್ತದೆ ಎಂಬ ಜಾಹೀರಾತು ನೀಡುವಂತಿಲ್ಲ ಎಂದು ಸೂಚಿಸಿದೆ.
ಕೇರಳ ಹೈಕೋರ್ಟ್‌ ಆ. 21ರಂದು ಆಯುರ್ವೇದ ವೈದ್ಯರು ಕೊರೊನಾಕ್ಕೆ ಔಷಧಿ ಬರೆದುಕೊಡುವಂತಿಲ್ಲ ಎಂಬ ತೀರ್ಪು ನೀಡಿತ್ತು. ಈ ತೀರ್ಪಿನ ಕೆಲವು ಅಂಶ ಸುಪ್ರೀಂ ಕೋರ್ಟ್‌ ಬದಲಿಸಿದೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.