ರೈತರ ಪ್ರತಿಭಟನೆ: 11 ದಿನ ಒಂದು ಸಾವಿರ ಕಿಲೋ ಮೀಟರ್ ಸೈಕಲ್ ಪ್ರಯಾಣ-ಬಿಹಾರ ಟು ದೆಹಲಿ
ದೆಹಲಿ-ಹರ್ಯಾಣ ಗಡಿಭಾಗದ ಟಿಖ್ರಿ ಪ್ರದೇಶಕ್ಕೆ ಬಂದು ತಲುಪಿರುವುದಾಗಿ ಎಎನ್ ಐ ವರದಿ ಮಾಡಿದೆ.
Team Udayavani, Dec 18, 2020, 11:41 AM IST
ನವದೆಹಲಿ:ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 23ನೇ ದಿನಕ್ಕೆ ಕಾಲಿಟ್ಟಿದ್ದು, ಇನ್ನಷ್ಟು ರೈತರು ಗಡಿ ಭಾಗಕ್ಕೆ ಆಗಮಿಸುತ್ತಿರುವುದಾಗಿ ವರದಿ ತಿಳಿಸಿದೆ.
ಏತನ್ಮಧ್ಯೆ ಗುರುವಾರ(ಡಿಸೆಂಬರ್ 17, 2020)ದಂದು ಬಿಹಾರದ ಸಿವಾನ್ ಪ್ರದೇಶದಿಂದ 60ವರ್ಷದ ಸತ್ಯದೇವ್ ಮಾಂಜಿ ಬರೋಬ್ಬರಿ ಒಂದು ಸಾವಿರ ಕಿಲೋ ಮೀಟರ್ ಸೈಕಲ್ ನಲ್ಲಿ ಪ್ರಯಾಣಿಸಿ ದೆಹಲಿ ಗಡಿಗೆ ಬಂದು ತಲುಪುವ ಮೂಲಕ ರೈತರ ಪ್ರತಿಭಟನೆಗೆ ಕೈಜೋಡಿಸಿರುವುದಾಗಿ ವರದಿ ವಿವರಿಸಿದೆ.
ಸಿವಾನ್ ನಿಂದ ಸೈಕಲ್ ನಲ್ಲಿ ಹೊರಟಿದ್ದ ಮಾಂಜಿ ಬರೋಬ್ಬರಿ 11 ದಿನಗಳ ನಂತರ ದೆಹಲಿಗೆ ಬಂದು ತಲುಪಿದ್ದು, ಕೇಂದ್ರ ಸರ್ಕಾರ ಮೂರು ಹೊಸ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
60ವರ್ಷದ ಸತ್ಯದೇವ್ ರೈತರು ಪ್ರತಿಭಟನೆ ನಡೆಸುತ್ತಿದ್ದ ದೆಹಲಿ-ಹರ್ಯಾಣ ಗಡಿಭಾಗದ ಟಿಖ್ರಿ ಪ್ರದೇಶಕ್ಕೆ ಬಂದು ತಲುಪಿರುವುದಾಗಿ ಎಎನ್ ಐ ವರದಿ ಮಾಡಿದೆ.
ಇದನ್ನೂ ಓದಿ:ಆಲಮೇಲ: ಎರಡು ದೇವಸ್ಥಾನ ಮತ್ತು ಏಳು ಮನೆಗಳಲ್ಲಿ ಕಳ್ಳತನ, ಜನರಲ್ಲಿ ಹೆಚ್ಚಿದ ಆತಂಕ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಪಂಜಾಬ್, ಹರ್ಯಾಣ ರೈತರು ನವೆಂಬರ್ 26ರಿಂದ ರಾಜಧಾನಿ ದೆಹಲಿಯ ವಿವಿಧ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.