“ಸಪ್ತಪದಿ’ ಕಲ್ಯಾಣಕ್ಕೆ ಕೋವಿಡ್ ವಿಘ್ನ

ರಾಯಚೂರಿನ ಮೂರು ದೇಗುಲಗಳಲ್ಲಿ 440ಕ್ಕೂ ಹೆಚ್ಚು ನೋಂದಣಿ,ರದ್ದಾಯ್ತು ವಿವಾಹ

Team Udayavani, Dec 19, 2020, 5:53 PM IST

“ಸಪ್ತಪದಿ’ ಕಲ್ಯಾಣಕ್ಕೆ ಕೋವಿಡ್ ವಿಘ್ನ

ರಾಯಚೂರು: ಸರ್ಕಾರ ಜಾರಿಗೊಳಿಸಿದ್ದ ಸಪ್ತಪದಿ ಹೆಸರಿನ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಕೋವಿಡ್ ಅಡ್ಡಗಾಲುಹಾಕಿದೆ. ಜಿಲ್ಲೆಯ ಮೂರು ಪ್ರಮುಖ ದೇವಸ್ಥಾನಗಳಲ್ಲಿ ನೋಂದಣಿ ಮಾಡಿಸಿದ್ದ ಬಹುತೇಕ ವಿವಾಹಗಳು ರದ್ದಾಗುವ ಮೂಲಕ ಯೋಜನೆಗೆ ಆರಂಭಿಕ ವಿಘ್ನ ಉಂಟಾಗಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈ ವರ್ಷ ಶಾದಿಭಾಗ್ಯದ ಮಾದರಿಯಲ್ಲಿ ಸಪ್ತಪದಿಯೋಜನೆ ಅನುಷ್ಠಾನಗೊಳಿಸಿತ್ತು. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವಂಥ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕವಿವಾಹ ಮಾಡಿಕೊಡುವ ಕಾರ್ಯಕ್ರಮ ಇದಾಗಿತ್ತು. ಕಳೆದ ಬೇಸಿಗೆಯಲ್ಲಿಯೇ ಕಾರ್ಯಕ್ರಮ ಆರಂಭಿಸಿತ್ತು. ಅದಕ್ಕೆ ಜಿಲ್ಲೆಯಲ್ಲೂ ವ್ಯಾಪಕ ಸ್ಪಂದನೆ ಸಿಕ್ಕಿತ್ತು. ಆದರೆ, ಕೋವಿಡ್‌-19 ಹಾವಳಿಯಿಂದ ಕಾರ್ಯಕ್ರಮಕ್ಕೆ ಹಿನ್ನಡೆಯಾಯಿತು.

ಎಲ್ಲ ಮದುವೆಗಳು ರದ್ದು: ಜಿಲ್ಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿ ಹಲವು ದೇವಸ್ಥಾನಗಳಲ್ಲಿದ್ದು, ಅದರಲ್ಲಿ ಮೂರು ಪ್ರಮುಖ ದೇವಸ್ಥಾನಗಳಿವೆ. ಸಿಂಧನೂರಿನ ಅಂಬಾ ಮಠದಲ್ಲಿ 300 ಅರ್ಜಿಗಳುಸಲ್ಲಿಕೆಯಾಗಿದ್ದರೆ, ಲಿಂಗಸುಗೂರು ತಾಲೂಕಿನ ಗುರುಗುಂಟಾ ಅಮರೇಶ್ವರ ದೇವಸ್ಥಾನದಲ್ಲಿ 100 ಹಾಗೂ ತಾಲೂಕಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದಲ್ಲಿ 40ಕ್ಕೂ ಅಧಿಕ ಮದುವೆಗಳು ನೋಂದಣಿಯಾಗಿದ್ದವು. ಆದರೆ, ಇನ್ನೇನು ಶುಭ ಮೂಹೂರ್ತದಲ್ಲಿಮದುವೆ ನಡೆಸಬೇಕು ಎನ್ನುವಷ್ಟರಲ್ಲಿ ಕೋವಿಡ್ ಹಾವಳಿ ಶುರುವಾಗಿ ಲಾಕ್‌ ಡೌನ್‌ ಜಾರಿಗೊಳಿಸಲಾಯಿತು. ಇದರಿಂದ ಜನ ಒಗ್ಗೂಡುವುದಕ್ಕೆ ಸರ್ಕಾರವೇ ನಿಷೇಧಹೇರಿದ್ದರಿಂದ ಸಪ್ತಪದಿ ಕೂಡ ರದ್ದಾಯಿತು.

ಬಹುತೇಕ ಮದುವೆ ಪೂರ್ಣ: ನೋಂದಣಿಯಾಗಿದ್ದ ಬಹುತೇಕ ಮದುವೆಗಳು ಲಾಕ್‌ಡೌನ್‌ ವೇಳೆಯಲ್ಲಿ ಮುಗಿದು ಹೋಗಿವೆ. ಕುಟುಂಬಸ್ಥರುತಮ್ಮಷ್ಟಕ್ಕೆ ತಾವು ಮದುವೆ ಮಾಡಿ ಮುಗಿಸಿದ್ದಾರೆ. ಕೆಲವರು ಮನೆಗಳಲ್ಲಿ, ದೇವಸ್ಥಾನಗಳಲ್ಲಿ, ಸ್ವ-ಗ್ರಾಮಗಳಲ್ಲೇ ಸರಳವಾಗಿ ಮದುವೆ ಮಾಡಿಕೊಂಡಿದ್ದಾರೆ. ಈಚೆಗೆ ಸರ್ಕಾರ ಮತ್ತೆ ಸಪ್ತಪದಿ ಆರಂಭಿಸಲು ಸೂಚನೆ ನೀಡಿದ್ದು, ನೋಂದಣಿ ಮಾಡಿಸಿದವರಿಗೆ ಕರೆ ಮಾಡಿದರೆ ಸ್ಪಂದನೆ ಸಿಗುತ್ತಿಲ್ಲ.

ಮುಂದುವರಿದ ಯೋಜನೆ: ಮೊದಲ

ಪ್ರಯತ್ನಕ್ಕೆ ಕೋವಿಡ್ ಅಡ್ಡಿ ಮಾಡಿದ್ದರೂಜನರಿಂದ ಸಿಕ್ಕ ಸ್ಪಂದನೆ ಸರ್ಕಾರಕ್ಕೂ ಪ್ರೇರಣೆನೀಡಿದೆ. ಹೀಗಾಗಿ ಮುಜರಾಯಿ ಸಚಿವರುಈಚೆಗೆ ಮತ್ತೂಮ್ಮೆ ಸಭೆ ನಡೆಸಿ ಸಪ್ತಪದಿಯೋಜನೆ ಮುಂದುವರಿಸಲು ಸೂಚನೆ ನೀಡಿದ್ದು, ಜನವರಿ, ಫೆಬ್ರವರಿಯಲ್ಲಿ ಆರು ದಿನಗಳನ್ನು ನಿಗದಿ ಮಾಡಿದ್ದಾರೆ. ಈ ಬಗ್ಗೆ ಪ್ರಚಾರ ನಡೆಸಿ ಬಡವರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಏನಿದು ಸಪ್ತಪದಿ?: ಬಡವರು ಮಕ್ಕಳ ಮದುವೆ ಮಾಡಲು ನಾನಾ ಕಷ್ಟ ಪಡುತ್ತಾರೆ.ಸಾಲ ಮಾಡಿ ದುಂದು ವೆಚ್ಚ ಮಾಡುತ್ತಾರೆ.ಅದರ ಬದಲಿಗೆ ಸರ್ಕಾರವೇ ಸಪ್ತಪದಿಯೋಜನೆ ಹೆಸರಿನಲ್ಲಿ ಸಾಮೂಹಿಕವಿವಾಹ ಮಾಡಲು ಮುಂದಾಗಿತ್ತು.ಈ ರೀತಿ ಮದುವೆಯಾದ ವರನಿಗೆ 5 ಸಾವಿರ ರೂ. ವಧುವಿಗೆ 10 ರೂ.ಹಾಗೂ 8 ಗ್ರಾಂ ತಾಳಿಯನ್ನು ಸರ್ಕಾರವೇನೀಡುತ್ತಿತ್ತು. ಇನ್ನು ಮದುವೆಗೆ ಬಂದವರಿಗೆ ಊಟದ ವ್ಯವಸ್ಥೆಯನ್ನು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಯೇ ನೋಡಿಕೊಳ್ಳಬೇಕಿತ್ತು. ಒಂದು ಬಾರಿ

25ರಿಂದ 50 ಮದುವೆಗಳನ್ನು ಮಾಡಲು ಅವಕಾಶವಿತ್ತು. ಅದಕ್ಕಿಂತ ಹೆಚ್ಚು ಮದುವೆ ನೋಂದಣಿಯಾಗಿದ್ದರೆ ಸರ್ಕಾರದ ಗಮನಕ್ಕೆ ತರಬೇಕಿತ್ತು. ಇನ್ನು ಮದುವೆಯಾದಲ್ಲಿ ಸ್ಥಳದಲ್ಲೇ ಸಹಾಯಧನದ ಚೆಕ್‌ ವಿತರಿಸಿದರೆ,ಉಪನೋಂದಣಾಧಿಕಾರಿ ಮದುವೆ ನೋಂದಣಿ ಮಾಡಿ ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಇತ್ತು.

ರಾಜ್ಯ ಸರ್ಕಾರ ಆರಂಭಿಸಿದ್ದ ಸಪ್ತಪದಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿತ್ತು. ಕೋವಿಡ್ ಕಾರಣಕ್ಕೆ ಯಾವ ಮದುವೆಗಳೂ ನಡೆದಿಲ್ಲ. ನೋಂದಣಿ ಮಾಡಿದವರನ್ನು ಸಂಪರ್ಕಿಸಿದ್ದು, ಅವರೆಲ್ಲ ಈಗಾಗಲೇ ಮದುವೆಗಳನ್ನು ಮುಗಿಸಿದ್ದಾರೆ. ಈಗ ಮತ್ತೂಂದು ಸೂಚನೆ ಬಂದಿದ್ದು ಜನವರಿ, ಫೆಬ್ರವರಿಯಲ್ಲಿ ಮತ್ತೆ ಮದುವೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಪ್ರಚಾರ ನೀಡಲಾಗುವುದು.  –ಸೆಲ್ವಮಣಿ, ದತ್ತಿ ಸಹಾಯಕ, ಧಾರ್ಮಿಕ ದತ್ತಿ ಇಲಾಖೆ, ರಾಯಚೂರು

 

-ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.