ಉಜಿರೆ: ಮಗು ಅಪಹರಣ ಪ್ರಕರಣ ಕೃತ್ಯದ ಹಿಂದೆ ಹಣದ ವ್ಯವಹಾರದ ಜಾಡು


Team Udayavani, Dec 22, 2020, 1:32 AM IST

ಉಜಿರೆ: ಮಗು ಅಪಹರಣ ಪ್ರಕರಣ ಕೃತ್ಯದ ಹಿಂದೆ ಹಣದ ವ್ಯವಹಾರದ ಜಾಡು

ಬೆಳ್ತಂಗಡಿ: ಉಜಿರೆ ನಿವಾಸಿ, ಉದ್ಯಮಿ, ನಿವೃತ್ತ ಸೈನಿಕ ಎ.ಕೆ.ಶಿವನ್‌ ಮೊಮ್ಮಗ ಅಪಹರಣ ಪ್ರಕರಣದ ಹಿಂದೆ ಬಹುತೇಕ ಹಣದ ವ್ಯವಹಾರವೇ ಮೂಲ ಕಾರಣ ಎಂಬುದು ಪೊಲೀಸ್‌ ತನಿಖೆಯಲ್ಲಿ ಮೇಲ್ನೋಟಕ್ಕೆ ಖಚಿತ ಪಟ್ಟಿದೆ.

ಪ್ರಕರಣದ ಆರು ಮಂದಿ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ. ವ್ಯವಹಾರದಲ್ಲಿ ಪ್ರಕರಣದ ರೂವಾರಿಗೆ ಬಿಜೋಯ್‌ 1.50 ಕೋ.ರೂ. ನೀಡದೆ ವಂಚನೆ ಎಸಗಿರುವ ಕುರಿತು ಅಪಹರಣಕಾರರು ಬಾಯಿ ಬಿಟ್ಟಿದ್ದಾರೆ. ಆದರೆ ಪ್ರಕರಣದಲ್ಲಿ 8 ಆರೋಪಿಗಳಿದ್ದು ಹಾಸನ ಮೂಲದ ಪ್ರಮುಖ ಆರೋಪಿ ಹಾಗೂ ಬೆಂಗಳೂರಿನ ಚಾಮರಾಜನಗರ ನಿವಾಸಿ ಸೆರೆ ಸಿಕ್ಕ ಬಳಿಕ ಸ್ಪಷ್ಟ ಚಿತ್ರಣ ಹೊರಬರಲಿದೆ.

ಅಪಹರಣ ನಡೆದ ದಿನ ಉಜಿರೆ ಆಟೋ ಚಾಲಕ ನೀಡಿದ ಮಾಹಿತಿಯಂತೆ ಆರಂಭದಲ್ಲಿ ಒಟ್ಟು 5 ಮಂದಿ ಸಂಶಯಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಅವರಿಂದ ಯಾವುದೇ ಸುಳಿವು ಲಭ್ಯವಾಗಿರಲಿಲ್ಲ. ಬಳಿಕ ಚಿಕ್ಕಮಗಳೂರಿನಲ್ಲಿ ಇಬ್ಬರನ್ನು ತನಿಖೆ ತಂಡ ವಶಕ್ಕೆ ಪಡೆದಾಗ ಪ್ರಕರಣದ ಮೂಲ ಆರೋಪಿಗಳ ಪತ್ತೆ ಸಾಧ್ಯವಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಕುರಿತು ಎಸ್‌ಪಿ ಬಿ.ಎಂ. ಲಕ್ಷ್ಮೀಪ್ರಸಾದ್‌ ಮಾಧ್ಯಮದೊಂದಿಗೆ ಮಾತನಾಡಿ, ಆರೋಪಿಗಳು ಘಟನೆ ನಡೆಯುವ 10 ದಿನ‌ ಮುಂಚಿತವಾಗಿ ಧರ್ಮಸ್ಥಳಕ್ಕೆ ಆಗಮಿಸಿ, ಲಾಡ್ಜ್ ಒಂದರಲ್ಲಿ ಉಳಿದುಕೊಂಡು ಪರಿಸ್ಥಿತಿ ಅವಲೋಕನ ಮಾಡುತ್ತಿದ್ದರು. ಘಟನೆಗೆ ಬೆಂಗಳೂರಿನ ಸಂಪರ್ಕ ಇರುವ ಮಾಹಿತಿಯಿದೆ. ಶೀಘ್ರದಲ್ಲಿ ಎಲ್ಲ ಮಾಹಿತಿಗಳು ಹೊರಬೀಳಲಿವೆ ಎಂದು ತಿಳಿಸಿದರು.

ಉಜಿರೆ ಬಾಲಕ ಅಪಹರಣ ಪ್ರಕರಣದ ಬಹುತೇಕ ಮಾಹಿತಿ ಲಭಿಸಿದೆ. ಪ್ರಕರಣ ಸಂಬಂಧ ಇನ್ನೂ ಇಬ್ಬರು ಆರೋಪಿಗಳನ್ನು ಶೀಘ್ರ ಬಂಧಿಸುವ ಸಾಧ್ಯತೆ ಇದೆ. ಮುಖ್ಯ ಆರೋಪಿ ತಲೆಮರೆಸಿಕೊಂಡಿದ್ದು ಶೀಘ್ರದಲ್ಲಿ ಪತ್ತೆ ಕಾರ್ಯ ನಡೆಸಲಾಗುವುದು
– ಬಿ.ಎಂ.ಲಕ್ಷ್ಮೀಪ್ರಸಾದ್‌, ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Bellare: ಆಡನ್ನು ಪೇಟೆಗೆ ಬಿಟ್ಟ ಮಾಲಕರಿಗೆ ದಂಡ

1

Uppinangady: ಹೆದ್ದಾರಿ ಸಂಚಾರ ಅಡ್ಡಾದಿಡ್ಡಿ!

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Dharmasthala

Dharmasthala: ಇಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

Puuturu-VHP

Putturu: ವಿಶ್ವ ಹಿಂದೂ ಪರಿಷತ್‌ನಿಂದ ಸಾಮಾಜಿಕ ಸಮರಸದ ಭಾವ: ಗೋಪಾಲ್‌ ಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

1-wewqewqe

Bidar; ಸಾಲ ಬಾಧೆಯಿಂದ ರೈತ ಆತ್ಮಹ*ತ್ಯೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.