ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Team Udayavani, Dec 23, 2020, 7:05 PM IST
ಆಳಂದ: ತಾಲೂಕಿನ ಕಡಗಂಚಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಾಂಗ್ರೆಸ್ ಬೆಂಬಲಿತರ ಮನೆಮೇಲೆ ಪೊಲೀಸರು ಹಠಾತ್ ದಾಳಿ ಕೈಗೊಂಡು ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ನೇತೃತ್ವದಲ್ಲಿ ಬೆಂಬಲಿಗರು ಪಟ್ಟಣದ ಡಿವೈಎಸ್ಪಿ ಕಚೇರಿ ಎದುರು
ಮಂಗಳವಾರ ಧರಣಿ ಸತ್ಯಾಗ್ರಹ ಕೈಗೊಂಡರು. ಚುನಾವಣೆ ಮುನ್ನಾದಿನ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ಡಿವೈಎಸ್ಪಿ ಕಡಗಂಚಿ ಗ್ರಾಮದ ಕಸ್ತೂರಬಾಯಿ ಕರಬಸಪ್ಪ ನರೋಣಿ ಅವರ ಮನೆ ಮೇಲೆ ಚುನಾವಣೆ ನೀತಿ ಸಂಹಿತೆ ಆರೋಪ ನೆಪಮಾಡಿ, ಮನೆಯಲ್ಲಿ ಊಟಕ್ಕೆ ಕುಳಿತವರನ್ನು ನೋಡದೇ ಪೊಲೀಸರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮನೆಹೊಕ್ಕು ಹೊಡೆಯುವ ಅಧಿಕಾರ ಇವರಿಗೆ ಯಾರು ನೀಡಿದ್ದಾರೆ. ಕ್ಷೇತ್ರದ ಶಾಸಕರ ಅಣತಿಯಂತೆ ಅವರ ಕೈಗೊಂಬೆಯಾಗಿ ಅಮಾಯಕರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಖಂಡಿಸಿದರು.
ಜಿ.ಪಂ ಸದಸ್ಯ ಸಿದ್ಧರಾಮ ಪ್ಯಾಟಿ, ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ,ಸತೀಶ ಪನಶೆಟ್ಟಿ, ಅಬ್ದುಲ ಸಲಾಂ ಸಗರಿ, ಪಂಡಿತ ಶೇರಿಕಾರ, ಶಂಕರರಾವ್ ದೇಶಮುಖ, ದಿಲೀಪಕ್ಷೀರಸಾಗರ ಹಾಗೂ ಪಾಟೀಲರ ನೂರಾರು ಮಂದಿ ಬೆಂಬಲಿಗರು ಪಾಲ್ಗೊಂಡಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಎಸ್ಪಿ ಭೇಟಿ ನೀಡಿ, ಘಟನೆ ಕುರಿತು ಸೂಕ್ತ ತನಿಖೆ ಕೈಗೊಂಡುಕ್ರಮ ಜರುಗಿಸಲಾಗುವುದು. ಚುನಾವಣೆ ಪರಿಸ್ಥಿತಿಯಲ್ಲಿ ಎಲ್ಲವೂ ಗೊತ್ತಾಗುವುದಿಲ್ಲ. ತಾಳ್ಮೆಯಿಂದ ಸಹಕರಿಸಿ ಎಂದಾಗ 15 ದಿನಗಳಲ್ಲಿ ಬೇಡಿಕೆಗೆ ಸ್ಪಂದಿಸಬೇಕು ಎಂದು ಮುಖಂಡರು ಗಡವು ನೀಡಿದರು.
ಕಡಗಂಚಿಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ದೂರಿನ ಕರೆ ಮೆರೆಗೆ ಸಿಪಿಐ ಅವರನ್ನು ಕಳುಹಿಸಿಕೊಟ್ಟರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ವತಃ ನಾನೇ ಭೇಟಿ ನೀಡಿದ್ದೆ. ಅಲ್ಲಲ್ಲಿ ಜನ ಗುಂಪಾಗಿ ಇದ್ದಿದ್ದನ್ನು ಕಂಡು ಅವರನ್ನು ಮನೆಗೆಕಳುಹಿಸಲಾಯಿತು. ನಂತರ ನರೋಣಿಎನ್ನುವರಿಗೆ ಸೇರಿದ ಮನೆ ಹೊರಗೆ 20ರಿಂದ30 ದ್ವಿಚಕ್ರವಾಹನ ಕಂಡವು. ಒಳಗೆ ಹೆಚ್ಚಿನ ಜನರು ಸೇರಿ ಕುಳಿತು ಊಟ ಮಾಡುತ್ತಿದ್ದರು. ಹೀಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಿದ್ದರಿಂದ ಅವರನ್ನು ಚದುರಿಸಲಾಗಿದೆ. ನಾವು ತಪ್ಪು ಮಾಡಿಲ.É ಯಾರ ಒತ್ತಡಕ್ಕೂ ಒಳಗಾಗಿಲ್ಲ. ಕಾನೂನು ಪಾಲಿಸಿದ್ದೇವೆ. – ಮಲ್ಲಿಕಾರ್ಜುನ ಸಾಲಿ, ಡಿವೈಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.