ರಕ್ತದಾನ ಮಾಡಿ ಹೋರಾಟ ಆರಂಭ: ಜಯ ಮೃತ್ಯುಂಜಯ ಶ್ರೀ


Team Udayavani, Dec 23, 2020, 7:31 PM IST

ರಕ್ತದಾನ ಮಾಡಿ ಹೋರಾಟ ಆರಂಭ: ಜಯ ಮೃತ್ಯುಂಜಯ ಶ್ರೀ

ದಾವಣಗೆರೆ: ಕಳೆದ ಎರಡು ದಶಕಗಳಿಂದ ಆಡಳಿತ ನಡೆಸಿದ ಎಲ್ಲಾ ಮುಖ್ಯಮಂತ್ರಿಗಳಿಗೂ ಸಮಾಜದಿಂದ ಸನ್ಮಾನ, ಗೌರವ ಮಾಡಲಾಗಿದೆ. 2ಎ ಮೀಸಲಾತಿ ಕುರಿತಂತೆ ಸಾಕಷ್ಟು ಮನವಿಯನ್ನೂ ಸರ್ಕಾರಕ್ಕೆ ನೀಡಲಾಗಿದೆ.

ಶಾಂತಿಯುತವಾಗಿ ಹೋರಾಟ ಸಹ ಮಾಡಿ ಸರ್ಕಾರದ ಗಮನ ಸೆಳೆದಿದ್ದೇವೆ. ಯಾರೂಸಹ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡಿಲ್ಲ. ಆದ್ದರಿಂದ ನಮ್ಮ ಜನ್ಮದಿನದಂದು ರಕ್ತದಾನಶಿಬಿರ ಹಮ್ಮಿಕೊಳ್ಳುವ ಮೂಲಕ ಸರ್ಕಾರವನ್ನು ಎಚ್ಚರಗೊಳಿಸುತ್ತಿದ್ದೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಮಂಗಳವಾರ ಡಾ| ಸದ್ಯೋಜಾತ ಮಠದಲ್ಲಿ ಹಮ್ಮಿಕೊಂಡಿದ್ದ ತಮ್ಮ ಜನ್ಮದಿನಾಚರಣೆ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು.ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿ ವಿಧಾನಸೌಧದ ಬಳಿ ಉಪವಾಸಸತ್ಯಾಗ್ರಹ ಮಾಡಿದ್ದೇವೆ. ಇದೀಗ ಜನ್ಮಭೂಮಿದಾವಣಗೆರೆಯಿಂದಲೇ ರಕ್ತ ಕೊಡುವ ಮೂಲಕ ಹೋರಾಟಕ್ಕೆ ಚಾಲನೆ ಕೊಡಬೇಕೆಂದು ಬಂದಿದ್ದೆ. ಆದರೆ ಮಹಾಪೌರರಾದ ಅಜಯ್‌ಕುಮಾರ್‌ರವರು ಕೂಡಲಸಂಗಮದಲ್ಲೇ ನೀವು ರಕ್ತದಾನ ಮಾಡಿ. ಭಕ್ತರು ಮೊದಲು ಇಲ್ಲಿಂದ ರಕ್ತ ಕೊಟ್ಟುಹೋರಾಟ ಆರಂಭಿಸುತ್ತೇವೆ ಎಂದಿದ್ದರಿಂದ ಕೂಡಲಸಂಗಮದಿಂದಲೇ ರಕ್ತದಾನ ಮಾಡಿ ಹೋರಾಟ ಆರಂಭಿಸುವೆ ಎಂದು ತಿಳಿಸಿದರು.

ಪಂಚಮಸಾಲಿ ಸಮಾಜಕ್ಕೆ ಕೇಂದ್ರದಿಂದ ಒಬಿಸಿ ಹಾಗೂ ರಾಜ್ಯದಿಂದ 2ಎ ಮೀಸಲಾತಿ ನೀಡಬೇಕು ಹಿನ್ನೆಲೆಯಲ್ಲಿ ದಾವಣಗೆರೆಯಿಂದಲೇ ಚಾಲನೆ ಕೊಡಲಾಗಿದೆ.ನಾವು ಇದುವರೆಗೂ ಶಾಂತಿಯುತವಾಗಿ ಸರ್ಕಾರಕ್ಕೆ ಹಲವು ಬಾರಿ ಮನವಿ ನೀಡುವ ಮೂಲಕ ಒತ್ತಾಯ ಮಾಡಿದ್ದೇವೆ. ಇದೀಗ ಸಮಾಜದ ಮುಖಂಡರ ತೀರ್ಮಾನದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ “ರಕ್ತ ಕೊಡುತ್ತೇವೆ, ಮೀಸಲಾತಿ ಕೊಡಿ’ ಎಂಬ ಘೋಷಣೆ ಮೂಲಕ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಜ. 14 ರೊಳಗೆ ಈ ಬಗ್ಗೆ ತೀರ್ಮಾನ ಕೈಗೊಂಡುನಮ್ಮ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ ಕೂಡಲಸಂಗಮದಲ್ಲಿ ಜ. 14 ರಂದು ನಡೆಯುವ ಕೃಷಿ ಸಮ್ಮೇಳನದಲ್ಲಿಬೃಹತ್‌ ರಕ್ತದಾನ ಶಿಬಿರ ಹಮ್ಮಿಕೊಂಡು ರಕ್ತ ಕೊಟ್ಟು ಹೋರಾಟ ಮಾಡುತ್ತೇವೆ. ಅಲ್ಲಿಂದಲೇ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಮೂಲಕಶಕ್ತಿಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರ ಅದಕ್ಕೂ ಮಣಿಯದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪ ಈಗಾಗಲೇ ಈಬಗ್ಗೆ ನಮ್ಮ ಜೊತೆ ಮಾತುಕತೆ ನಡೆಸಿದ್ದಾರೆ. ನಮಗೆ 2ಎ ಮೀಸಲಾತಿ ಕಲ್ಪಿಸುತ್ತಾರೆ ಎಂಬವಿಶ್ವಾಸವಿದೆ. ಅವರ ಆಡಳಿತಾವ ಧಿಯಲ್ಲಿಪಂಚಮಸಾಲಿ ಸಮಾಜಕ್ಕೆ ಮೀಸಲಾತಿಸಿಗುತ್ತದೆ ಎಂಬ ವಿಶ್ವಾಸವಿದೆ. ನಮ್ಮ ಹೋರಾಟಮಾತ್ರ ನಿಲ್ಲುವುದಿಲ್ಲ. ಕೆಲವು ಸಚಿವರು ಮತ್ತು ರಾಜಕೀಯ ಮುಖಂಡರು ಗ್ರಾಪಂಚುನಾವಣೆ ಹಿನ್ನೆಲೆಯಲ್ಲಿ ಪಾದಯಾತ್ರೆ ಬೇಡ ಎಂದ ಕಾರಣ ಪಾದಯಾತ್ರೆಯನ್ನು ಜ.14 ಕ್ಕೆ ಮುಂದೂಡಲಾಗಿದೆ ಎಂದರು.

ಮೇಯರ್‌ ಬಿ.ಜಿ. ಅಜಯ್‌ಕುಮಾರ್‌, ಶ್ರೀಧರ್‌ ಪಾಟೀಲ್‌, ಅಶೋಕ್‌, ಪ್ರಭುದೇವ್‌, ಗಂಗಾಧರ ಇತರರು ಇದ್ದರು.ಲಡ್ಡು ವಿತರಣೆ, ವಿಶೇಷ ಸಂಚಿಕೆ ಬಿಡುಗಡೆ, ರಕ್ತದಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು

ಹರಿಹರದ ಪಂಚಮಸಾಲಿ ಶ್ರೀಗಳು ಹಾಗೂ ನಾವು ಮೀಸಲಾತಿ ವಿಚಾರದಲ್ಲಿ ಚರ್ಚೆ ನಡೆಸಿದ್ದು ಹೋರಾಟ ಮಾಡುತ್ತಿದ್ದೇವೆ. ಎರಡು ಮಠಗಳು ಮೀಸಲಾತಿ ವಿಚಾರದಲ್ಲಿ ಒಂದಾಗಿವೆ. ಯಾರಿಂದ ಆದರೂ ಸರಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕು. -ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.