ಭಾರತ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ವಾರ್ನರ್, ಅಬೋಟ್ ಇಲ್ಲ
Team Udayavani, Dec 24, 2020, 7:53 AM IST
ಮೆಲ್ಬರ್ನ್: ಶನಿವಾರದಿಂದ ಇಲ್ಲಿ ಆರಂಭವಾಗಲಿರುವ ಭಾರತದೆದುರಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಿಂದಲೂ ಆಸ್ಟ್ರೇಲಿಯದ ಆರಂಭಕಾರ ಡೇವಿಡ್ ವಾರ್ನರ್ ಮತ್ತು ಪೇಸ್ ಬೌಲರ್ ಸೀನ್ ಅಬೋಟ್ ಹೊರಬಿದ್ದಿದ್ದಾರೆ.
ಇಬ್ಬರೂ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ, ಮೂರನೇ ಟೆಸ್ಟ್ ವೇಳೆ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆ ಇದೆ ಎಂಬುದಾಗಿ “ಕ್ರಿಕೆಟ್ ಆಸ್ಟ್ರೇಲಿಯ’ (ಸಿಎ) ತಿಳಿಸಿದೆ. ಇವರಿಬ್ಬರಿಗೆ ಬದಲಿಯಾಗಿ ಬೇರೆ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅಗತ್ಯ ಬೀಳದು ಎಂದೂ “ಸಿಎ’ ಹೇಳಿದೆ.
ಇವರಿಬ್ಬರ ಗೈರಲ್ಲೂ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು ಹೀನಾಯವಾಗಿ ಸೋಲಿಸಿದ ಕಾರಣ ಆಸೀಸ್ ತಂಡಕ್ಕೆ ಬದಲಿ ಆಟಗಾರರ ಅನಿವಾರ್ಯತೆ ಇಲ್ಲ ಎಂಬುದು ಸದ್ಯದ ಲೆಕ್ಕಾಚಾರ.
ವಾರ್ನರ್ ಮತ್ತು ಅಬೋಟ್ ಸಿಡ್ನಿಯಲ್ಲಿ ವಿಶ್ರಾಂತಿಯಲ್ಲಿದ್ದರು. ಆದರೆ ಅಲ್ಲೀಗ ಮತ್ತೆ ಕೋವಿಡ್ ಕೇಸ್ ಕಂಡುಬಂದ ಕಾರಣ ಇಬ್ಬರೂ ಮೆಲ್ಬರ್ನ್ಗೆ ಆಗಮಿಸಿದ್ದಾರೆ.
ಬಾರತ ತಂಡದಲ್ಲಿ ಬದಲಾವಣೆ ಸಾಧ್ಯತೆ
ಅಡಿಲೇಡ್ನಲ್ಲಿ ನಡೆದ ಪಿಂಕ್ ಟೆಸ್ಟ್ ಪಂದ್ಯದಲ್ಲಿ 36 ರನ್ನಿಗೆ ಕುಸಿದು ಹೀನಾಯ ಸೋಲಿಗೆ ತುತ್ತಾದ ಕಾರಣ, ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಬಹಳಷ್ಟು ಬದಲಾವಣೆ ಗೋಚರಿಸುವ ಸಾಧ್ಯತೆ ಇದೆ. ಗಿಲ್, ಜಡೇಜ ಅವರ ಸೇರ್ಪಡೆ ಬಹುತೇಕ ಖಚಿತವಾಗಿದೆ. ಕೀಪರ್ ಸಾಹಾ ಬದಲು ರಿಷಭ್ ಪಂತ್ ಆಡಲೂಬಹುದು. ಅವರು ಸಾಹಾಗಿಂತ ಮೊದಲು ಅಭ್ಯಾಸಕ್ಕೆ ಇಳಿದರು.
ಇದನ್ನೂ ಓದಿ:ಐಪಿಎಲ್ ತಂಡಗಳ ಸಂಖ್ಯೆ; ಇಂದಿನ ಬಿಸಿಸಿಐ ಸಭೆಯಲ್ಲಿ ಇತ್ಯರ್ಥ
ಫಾರ್ಮ್ನಲ್ಲಿಲ್ಲದ ಪೃಥ್ವಿ ಶಾ ಬದಲು ಶುಭಮನ್ ಗಿಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಶಾ ಅವರಿಗೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೊಡ್ ಪಾಠ ಹೇಳಿಕೊಡುತ್ತಿದ್ದುದು ಕಂಡುಬಂತು. ರವೀಂದ್ರ ಜಡೇಜ ಆಗಮಿಸಿದರೆ ತಂಡಕ್ಕೆ ಸಮರ್ಥ ಆಲ್ರೌಂಡರ್ ಓರ್ವ ಲಭಿಸಿದಂತಾಗುತ್ತದೆ.
ಗಾಯಾಳಾಗಿ ಹೊರಬಿದ್ದಿರುವ ಮೊಹಮ್ಮದ್ ಶಮಿ ಸ್ಥಾನಕ್ಕಾಗಿ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ ರೇಸ್ನಲ್ಲಿದ್ದಾರೆ. ಇವರಿಬ್ಬರೂ ರಹಾನೆಗೆ ಬಹಳ ಹೊತ್ತು ಬೌಲಿಂಗ್ ನಡೆಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
Women’s T20 World Cup 2024: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಆಘಾತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.