![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Dec 24, 2020, 3:39 PM IST
ಜೇವರ್ಗಿ: ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ.
ಏತನ್ಮಧ್ಯೆ ಊರು ಬಿಟ್ಟು ಕೆಲಸ ಅರಸಿ ಬೇರೆಡೆ ವಲಸೆ ಹೋಗಿರುವವರು, ಜಿಲ್ಲೆ ಹಾಗೂ ತಾಲೂಕುಕೇಂದ್ರಗಳಲ್ಲಿದ್ದು ಊರಲ್ಲಿಯೇ ಮತದಾನಉಳಿಸಿಕೊಂಡವವರತ್ತ ಗ್ರಾಮ ಪಂಚಾಯಿತಿಅಭ್ಯರ್ಥಿಗಳು ಚಿತ್ತ ಹರಿದಿದೆ. ಊರಿಂದ ದೂರಉಳಿದವರನ್ನು ಚುನಾವಣೆ ದಿನದಂದು ಕರೆಸಿಕೊಳ್ಳಲುಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚುನಾವಣೆ ಅಖಾಡಶುರುವಾಗುತ್ತಿದ್ದಂತೆಯೇ ವಾರ್ಡ್ವಾರು ಮತದಾರರಪಟ್ಟಿ ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳುಗ್ರಾಮದಲ್ಲಿ ಇರುವವರು ಯಾರು? ವಲಸೆ ಹೋದವರು ಯಾರು? ಜಿಲ್ಲೆ ಹಾಗೂ ತಾಲೂಕುಕೇಂದ್ರಗಳಲ್ಲಿ ವಾಸ ಮಾಡುತ್ತಿರುವವರು ಯಾರು? ಎನ್ನುವ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಊರು ಬಿಟ್ಟ ಜನರ ಸಂಪರ್ಕ ಸಾಧಿಸುತ್ತಿದ್ದಾರೆ.
ಪಂಚಾಯಿತಿ ಚುನಾವಣೆಯಲ್ಲಿ ಒಂದೊಂದು ಮತವೂ ಸೋಲು-ಗೆಲುವಿಗೆ ನಿರ್ಣಯ ಆಗುವುದರಿಂದ ಅಭ್ಯರ್ಥಿಗಳಿಗೆ ಪ್ರತಿಯೊಂದು ಮತವೂ ಮಹತ್ವದ್ದಾಗಿದೆ. ಹೀಗಾಗಿ ಊರಲ್ಲಿನಮತದಾರರ ಜತೆಗೆ ಹೊರಗಡೆ ಇರುವವರತ್ತಲೂಗಮನ ಕೇಂದ್ರೀಕರಿಸಿ, ಚುನಾವಣೆ ದಿನ ಕರೆಸಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ತಾಲೂಕಿನಿಂದ ಮುಂಬೈ, ಪುಣೆ, ಬೆಂಗಳೂರು, ಹೈದ್ರಾಬಾದ, ಕರಡ್, ಮುಲ್ಕಿ (ಉಡುಪಿ) ಸೇರಿದಂತೆ ಬೇರೆ-ಬೇರೆ ನಗರಗಳಿಗೆ ದುಡಿಯಲು ಹೋದವರೇ ಹೆಚ್ಚು ಜನರಿದ್ದಾರೆ. ಅವರೆಲ್ಲರ ದೂರವಾಣಿ ಸಂಖ್ಯೆ ಸಂಗ್ರಹಿಸಿ ಸಂಪರ್ಕ ಸಾ ಧಿಸಿದ್ದಾರೆ. ಮತದಾನದ ದಿನದಂದು ರೈಲ್ವೆ, ಬಸ್ ಹಾಗೂ ಖಾಸಗಿ ವಾಹನಗಳ ವ್ಯವಸ್ಥೆ ಮಾಡುವ ಮೂಲಕ ಕರೆಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಪ್ರಮುಖವಾಗಿ ಸಾವಿರಾರು ಕೂಲಿ ಕಾರ್ಮಿಕರೆ ಕೆಲಸ ಅರಸಿ ಬೇರೆ ಊರುಗಳಿಗೆ ಹೋಗಿದ್ದಾರೆ. ಇವರಿಗೆ ವಾಹನದ ವ್ಯವಸ್ಥೆ ಜತೆ ಜತೆಗೆ ಗುಂಡು, ತುಂಡಿನ ಆಮೀಷ ಒಡ್ಡಲಾಗುತ್ತಿದೆ ಎನ್ನಲಾಗಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.