ಸ್ವಚ್ಛ ಸರ್ವೇಕ್ಷಣ : ಆನ್‌ಲೈನ್‌ ಅಭಿಯಾನಕ್ಕೆ ಒತ್ತು

ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮನೆಯಿಂದಲೇ ಅಭಿಪ್ರಾಯ ತಿಳಿಸಲು ಮರೆಯಬೇಡಿ

Team Udayavani, Dec 27, 2020, 1:24 PM IST

ಸ್ವಚ್ಛ ಸರ್ವೇಕ್ಷಣ : ಆನ್‌ಲೈನ್‌ ಅಭಿಯಾನಕ್ಕೆ ಒತ್ತು

ಬೆಂಗಳೂರು: ಕೋವಿಡ್ ಭೀತಿಯ ನಡುವೆಯೇ ಕೇಂದ್ರ ಸರ್ಕಾರದ ಸ್ವತ್ಛ ಸರ್ವೇಕ್ಷಣ ಭಾಗವಾದ ಜನಾಭಿಪ್ರಾಯ ಸಂಗ್ರಹ 2021ರ ಜನವರಿಯಿಂದ ರಾಜ್ಯದಲ್ಲಿ ಪ್ರಾರಂಭವಾಗಲಿದೆ. ಈ ಬಾರಿ ಜನಗುಂಪು ಸೇರುವ ಪ್ರದೇಶದಲ್ಲಿ ಅಭಿಯಾನ ನಡೆಸಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ಸಾಧ್ಯವಿಲ್ಲ. ಆದರೆ, ಜನಾಭಿಪ್ರಾಯ ಸಂಗ್ರಹದಲ್ಲಿ ಹಿನ್ನಡೆಯಾದರೆ ಸ್ವಚ್ಛ ಸರ್ವೇಕ್ಷಣದಲ್ಲಿ ಅಂಕ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ, ಬೆಂಗಳೂರು, ಮೈಸೂರು ಹಾಗೂ ಹುಬ್ಬಳಿ ಮತ್ತು ಧಾರವಾಡದಂತಹ ಮಹಾನಗರ ಪಾಲಿಕೆಗಳು ಸೇರಿದಂತೆ ವಿವಿಧ ಪಾಲಿಕೆಗಳು ಆನ್‌ಲೈನ್‌ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಜನಾಭಿಪ್ರಾಯ ಸಂಗ್ರಹಿಸಲು ಮುಂದಾಗಿವೆ.

ಸ್ವಚ್ಛ ಸರ್ವೇಕ್ಷಣನಲ್ಲಿ ಕಳಪೆ ಸಾಧನೆ ಮಾಡಿದ ಬಿಬಿಎಂಪಿ ಈ ಬಾರಿ ಉತ್ತಮ ರ್‍ಯಾಂಕ್‌ ನಿರೀಕ್ಷಣೆಯಲ್ಲಿದೆ. ಕಡಿಮೆ ಜನ ಸಂಖ್ಯೆ ಇದ್ದರೂ ಉತ್ತಮ ಸಾಧನೆ ಮಾಡಿದ್ದ ತುಮಕೂರು ಪಾಲಿಕೆಗೆ ಈ ಬಾರಿ ಸವಾಲು ಎದುರಾಗಿದೆ. ಮೊದಲಿನಿಂದಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಮೈಸೂರು ಪಾಲಿಕೆ ಈ ಬಾರಿ 7 ಸ್ಟಾರ್‌ ರ್‍ಯಾಂಕಿಂಗ್‌ಗೆ ಅರ್ಜಿ ಸಲ್ಲಿಸಿದೆ. ರಾಜ್ಯದಲ್ಲಿ 5 ಸ್ಟಾರ್‌ (ಗಾರ್ಬೇಜಜ್ ಫ್ರೀ ಸಿಟಿ)ಯಲ್ಲಿ ಸ್ಥಾನ ಪಡೆದಿರುವ ಏಕೈಕ ನಗರ ಮೈಸೂರು. ಇದೀಗ ಏಳನೇ ಸ್ಟಾರ್‌ಗೆ ಅರ್ಜಿ ಸಲ್ಲಿಸಿದೆ.

ಆನ್‌ಲೈನ್‌ ಅಭಿಪ್ರಾಯಕ್ಕೆ ಒತ್ತು: ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಈ ಬಾರಿ ಆನ್‌ ಲೈನ್‌ನ ಮೂಲಕ ಮಾಹಿತಿ ಸಂಗ್ರಹ ಮಾಡಲು ಯೋಜನೆ ರೂಪಿಸಿಕೊಂಡಿದ್ದೇವೆ. ಮನೆಯಲ್ಲೇ ಕಾಂಪೋಸ್ಟಿಂಗ್‌ ಮಾಡುವುದು, ಕಸ ಸಂಸ್ಕರಣೆವಿಧಾನ ಹಾಗೂ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ವಿಡಿಯೋ ಮೂಲಕ ಸಾರ್ವಜನಿಕರಿಗೆ ಸ್ಪರ್ಧೆ ಏರ್ಪಡಿಸಲಾಗುವುದು’ ಎನ್ನುತ್ತಾರೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗ್ಡೆ.

ಇದನ್ನೂ ಓದಿ : ವಿದೇಶಿ ವಸ್ತುಗಳ ನಿರಾಕರಣೆ; ಮೇಡ್ ಇನ್ ಇಂಡಿಯಾ ಉತ್ಪನ್ನಗಳತ್ತ ದೇಶದ ಜನರ ಚಿತ್ತ: ಪಿಎಂ ಮೋದಿ

ಈ ವಿಚಾರದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯೂ ಹಿಂದುಳಿದಿಲ್ಲ. “ಆಟೋ ಟಿಪ್ಪರ್‌ ಗಳಲ್ಲಿನ ಧ್ವನಿ ವರ್ಧಕ ಹಾಗೂ ರೇಡಿಯೋದ ಮೂಲಕ ಜನಾಭಿಪ್ರಾಯದಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ. ಅದೇ ರೀತಿ ಟ್ವಿಟರ್‌ ಹಾಗೂ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇವೆ’ ಎಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ತಿಳಿಸಿದರು.

ಕಳೆದ ಬಾರಿ ಜನಾಭಿಪ್ರಾಯದಲ್ಲಿ 56 ಸಾವಿರಕ್ಕೆ (ತುಮಕೂರಿಗಿಂತ ಕಳಪೆ) ಜನಾಭಿಪ್ರಾಯ ಬಿಬಿ  ಎಂಪಿಯಲ್ಲಿ ದಾಖಲಾಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಬಿಬಿಎಂಪಿ ವಿಶೇಷ (ಘನತ್ಯಾಜ್ಯ ನಿರ್ವಹಣೆ)ಆಯುಕ್ತ ರಂದೀಪ್‌ ಅವರು, “ಕಳೆದ ಬಾರಿ ಅತೀ ಕಡಿಮೆ ಜನಾಭಿಪ್ರಾಯ ಸಂಗ್ರಹವಾಗಿತ್ತು. ಹೀಗಾಗಿ, ರ್‍ಯಾಂಕ್‌ನಲ್ಲೂ ಹಿನ್ನಡೆ ಉಂಟಾಗಿತ್ತು. ಈ ಬಾರಿ ಜನಾಭಿಪ್ರಾಯ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.

ವಿವಿಧ ಮಾನದಂಡಗಳ ಮೇಲೆ ರ್‍ಯಾಂಕಿಂಗ್‌:

ಸರ್ವೇಕ್ಷಣದಲ್ಲಿ ಒಡಿಎಫ್ ಹಾಗೂ ಗಾರ್ಬೇಜ್‌ ಫ್ರೀ ಸಿಟಿ ಎಂಬ ಎರಡು ಮಾನದಂಡಗಳಿದ್ದು, ಇವುಗಳಲ್ಲಿ ವಿವಿಧ ಹಂತಗಳಿವೆ. ಇದರಲ್ಲಿ ನಗರ ಬಹಿಲು ಬಹಿರ್ದೆಸೆ ಮುಕ್ತ, ಶೌಚಾಲಯಗಳ ಲಭ್ಯತೆ ಹಾಗೂ ಸ್ವಚ್ಛತೆ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಶೀಲಿಸಲಾಗುತ್ತದೆ.

ಸ್ವಚ್ಛ  ಸರ್ವೇಕ್ಷಣದಲ್ಲಿಪರಿಶೀಲಿಸುವ ಪ್ರಮುಖ ಅಂಶಗಳು  :

  • ನಿರ್ದಿಷ್ಟ ನಗರದಲ್ಲಿ ಕಸ ನಿರ್ವಹಣೆ,ನೈರ್ಮಲ್ಯ, ಶೌಚಾಲಯ ವ್ಯವಸ್ಥೆ ಹಾಗೂ ಜನಾಭಿಪ್ರಾಯ
  • ನಗರದಲ್ಲಿ ಒಟ್ಟು ಉತ್ಪತ್ತಿಯಾಗುವ ಕಸದ ಪ್ರಮಾಣ ಹಾಗೂ ಕಸ ಗೊಬ್ಬರವಾಗುವ ಪ್ರಮಾಣ
  • ಕಸದ ಡಬ್ಬಿ ಹಾಗೂ ಸ್ವತ್ಛತೆ ಸೇರಿದಂತೆ ರಾಜ ಹಲವು ಅಂಶಗಳು ಬಗ್ಗೆ ಪರಿಶೀಲನೆ

ಜನಾಭಿಪ್ರಾಯ ಸಂಗ್ರಹದ ವೇಳೆ ಕೇಳುವ ಪ್ರಶ್ನೆಗಳು :

  1. ನಿಮ್ಮ ನಗರದ ಸ್ವತ್ಛತೆಗೆ 100ಕ್ಕೆ ಎಷ್ಟು ಅಂಕ ನೀಡಲು ಬಯಸುತ್ತೀರ, ನಗರ ವಾಣಿಜ್ಯ ಮತ್ತು ಸಾರ್ವಜನಿಕ ಪ್ರದೇಶಗಳು ಸ್ವಚ್ಛವಾಗಿವೆಯೇ?
  2. ಸ್ವಚ್ಛ ಸರ್ವೇಕ್ಷಣ್‌ ಅಭಿಯಾನದಲ್ಲಿ ನಿಮ್ಮ ನಗರ ಭಾಗವಹಿಸುತ್ತಿರುವ ಬಗ್ಗೆ ನಿಮಗೆ ಗೊತ್ತೆ. ಕಳೆದ ಬಾರಿಯ ರ್‍ಯಾಂಕ್‌ ಏನು?
  3. ಸಾರ್ವಜನಿಕ ಪ್ರದೇಶಗಳಲ್ಲಿ ಶೌಚಾಲಯ ಸ್ವತ್ಛವಾಗಿದೆಯೇ, ಗೂಗಲ್‌ನಲ್ಲಿ ಮಾಹಿತಿ ಸಿಗುತ್ತದೆಯೇ.
  4. ನಗರದಲ್ಲಿ ಒಣ ಮತ್ತು ಹಸಿಕಸ ಪ್ರತ್ಯೇಕ ಸಂಗ್ರಹ ಮಾಡುತ್ತಾರೆಯೇ ?

 

-ಹಿತೇಶ್‌ ವೈ

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.