ಜ.1ರಿಂದ ಎಲ್ಲಾ ಟೋಲ್‌ಗ‌ಳಲ್ಲೂ ಫಾಸ್ಟ್‌ ಟ್ಯಾಗ್‌ ಕಡ್ಡಾಯ

ಕೆಎಸ್ಸಾರ್ಟಿಸಿ, ಬಿಎಂಟಿ ಸಿ ಬಸ್‌ಗಳಿಗೆ ಅಳವಡಿಸುವ ಅನಿವಾರ್ಯ ಶೇ.90 ಬಸ್‌ಗಳಲ್ಲಿ ಅಳವಡಿಕೆಗೆ ಸಕಲ ಸಿದ್ಧತೆ

Team Udayavani, Dec 27, 2020, 7:11 PM IST

ಜ.1ರಿಂದ ಎಲ್ಲಾ ಟೋಲ್‌ಗ‌ಳಲ್ಲೂ ಫಾಸ್ಟ್‌ ಟ್ಯಾಗ್‌ ಕಡ್ಡಾಯ

ನೆಲಮಂಗಲ: ದೇಶದ ಎಲ್ಲಾ ಟೋಲ್‌ಗಳಲ್ಲಿ ಜ. 1ರಿಂದ ಫಾಸ್ಟ್‌ಟ್ಯಾಗ್‌ ಕಡ್ಡಾಯವಾಗುತ್ತಿದ್ದು,ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಿಗೂ ಅಳವಡಿಸುವ ಅನಿವಾರ್ಯತೆ ಎದುರಾಗಿದೆ.

ರಾಜ್ಯದ ಶೇ.90 ಕೆಎಸ್ಸಾರ್ಟಿಸಿ ಬಸ್‌ಗಳಿಗೆ ಈಗಾಗಲೇ ಫಾಸ್ಟ್‌ಟ್ಯಾಗ್‌ ಅಳವಡಿಸಲಾಗಿದ್ದು ಹಳ್ಳಿಗಳ ಕಡೆ ಸಂಚರಿಸುವ ಶೇ.10 ಬಸ್‌ಗಳಿಗೆ ಅಳವಡಿಸಲು ಸಿದ್ಧತೆ ಮಾಡಲಾಗಿದೆ. ಬಿಎಂಟಿಸಿ ಬಸ್‌ಟೋಲ್‌ ಮಾರ್ಗದಲ್ಲಿ ಹೋಗುವುದು ವಿರಳವಾಗಿರುವುದರಿಂದ ಪಾಸ್‌ಟ್ಯಾಗ್‌ ಅಳವಡಣೆ ಮಾಡಿರಲಿಲ್ಲ. ಆದರೆ ಜ. 1ರಿಂದ ಕಡ್ಡಾ ಯವಾಗಿರುವುದರಿಂದ ಫಾಸ್ಟ್‌ಟ್ಯಾಗ್‌ ಅಳವಡಿಸುವ ಅನಿವಾರ್ಯತೆ ಎದುರಾಗಿದೆ. ಇಲಾಖೆ ಹಣಪಾವತಿ: ಕೆಎಸ್ಸಾರ್ಟಿಸಿ ಬಸ್‌ಗಳ ನಂಬರ್‌ಗಳಿಗೆ ಅನುಗುಣವಾಗಿ ಫಾಸ್ಟ್‌ಟ್ಯಾಗ್‌ ಅಳವಡಿಸಲಾಗಿದ್ದು, ಬಸ್‌ಗಳ ಮಾರ್ಗವನ್ನು ಗಣನೆಗೆ ತೆಗೆದುಕೊಂಡು ಇಲಾಖೆ ಮೊದಲೇ ಹಣವನ್ನು ಪಾಸ್ಟ್‌ಟ್ಯಾಗ್‌ಗಳಿಗೆ ಪಾವತಿ ಮಾಡಿರುತ್ತದೆ. ಇದರಿಂದ ಬಸ್‌ ಸಂಚರಿಸುವ ಟೋಲ್‌ ಮಾಹಿತಿಗಳು ಇಲಾಖೆಗೆ ಲಭ್ಯವಾಗಲಿದೆ.

ಇಲಾಖೆಗೆ ಲಾಭಗಳು: ಫಾಸ್ಟ್‌ಟ್ಯಾಗ್‌ ಕಡ್ಡಾಯದಿಂದ ಸರಕಾರಿ ಬಸ್‌ಗಳು ಯಾವ ಟೋಲ್‌ ಮೂಲಕ ಸಂಚರಿಸುವ ಮಾಹಿತಿತಿಳಿಯಲಿದ್ದು, ಟೋಲ್‌ ಪಾವತಿಯ ಹಣವು ಮೊದಲೇ ಖಚಿತವಾಗಲಿದೆ. ದೂರ ಪ್ರಯಾಣ ಮಾಡುವ ಕೆಲವು ಬಸ್‌ಗಳಲ್ಲಿ ನಡೆಯುತಿದ್ದಟೋಲ್‌ ಮೋಸ ದೂರವಾಗಲಿದ್ದು, ಇಲಾಖೆಯು ಟೋಲ್‌ ಸುಂಕ ಕಟ್ಟುವ ಹಣದಪ್ರಮಾಣ ಪಾರದರ್ಶಕವಾಗಿ ಮಾಹಿತಿ ಸಿಗಲಿದೆ.

4ವರ್ಷದಿಂದ ಅಳವಡಿಕೆ: ಹೊರರಾಜ್ಯಗಳಿಗೆ ಹೋಗುವ ಕೆಲವು ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ 4ವರ್ಷದಿಂದಲೇ ಪಾಸ್ಟ್‌ಟ್ಯಾಗ್‌ ಅಳವಡಿಸಲಾಗಿದ್ದು ಟೋಲ್‌ಸುಂಕದಲ್ಲಿ ಕ್ಯಾಶ್‌ಲೆಸ್‌ ಮಾಡುವ ಯೋಜನೆಯನ್ನು ಸಾರಿಗೆ ಇಲಾಖೆ ಮೊದಲೇ ರೂಪಿಸಿಕೊಂಡಿತ್ತು. ಫಾಸ್ಟ್‌ಟ್ಯಾಗ್‌ ಕಡ್ಡಾಯ ದಿಂದ ಕೆಎಸ್ಸಾರ್ಟಿಸಿ ಇಲಾಖೆಗೆ ಯಾವುದೇಗೊಂದಲಗಳಿಲ್ಲದಿರುವುದು ತಿಳಿದುಬಂದಿದೆ.

ಕಡ್ಡಾಯದಿಂದ ನಷ್ಟ: ಬಿಎಂಟಿಸಿ ಬಸ್‌ಗಳು ಹಾಗೂ ಕೆಲವು ಕೆಎಸ್ಸಾರ್ಟಿಸಿ ಬಸ್‌ಗಳು ಹೆಚ್ಚು ಗ್ರಾಮೀಣ ಭಾಗದಲ್ಲಿ ಸಂಚರಿಸುತಿದ್ದು ಕೆಲವು ಬಾರಿ ಟೋಲ್‌ ಮೂಲಕ ಹೋಗುವುದರಿಂದ ಎಲ್ಲಾ ಬಸ್‌ಗಳಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆ ದುಬಾರಿಯಾಗಬಹುದು,ಇದಲ್ಲದೇ ಎಲ್ಲಾಬಸ್‌ಗಳ ಟ್ಯಾಗ್‌ಗೆ ಹಣಪಾವತಿ ಮಾಡಿದರೇ ಇಲಾಖೆಗೆ ನಷ್ಟವು ಉಂಟಾಗಬಹುದು.

ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಈಗಾಗಲೇ ಫಾಸ್ಟ್‌ಟ್ಯಾಗ್‌ಗಳನ್ನು ಅಳವಡಿಸಲಾಗಿದ್ದು, ಕೆಲವು ಬಸ್‌ಗಳಲ್ಲಿ ಮಾತ್ರ ಅಳವಡಿಸಬೇಕಾಗಿದೆ. ಜ. 1ರಿಂದ ಕಡ್ಡಾಯವಾಗುವುದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದರು.ಸತೀಶ್‌, ಕೆಎಸ್ಸಾರ್ಟಿಸಿ ಚಾಲಕ

 

ಕೋಟ್ರೇಶ್‌ ಆರ್‌

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.