![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 27, 2020, 11:55 PM IST
ಬೆಂಗಳೂರು: ಸಯ್ಯದ್ ಮುಷ್ತಾಕ್ ಅಲಿ ಟಿ20 ಪಂದ್ಯಾವಳಿಗೆ ಕರ್ನಾಟಕದ 20 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಕರುಣ್ ನಾಯರ್ ನಾಯಕರಾಗಿದ್ದಾರೆ. ಕರ್ನಾಟಕ ಈ ಕೂಟದ ಹಾಲಿ ಚಾಂಪಿಯನ್ ಆಗಿದೆ.
ಕೆಎಸ್ಸಿಎ ರವಿವಾರ ಪ್ರಕಟಿಸಿದ ಈ ತಂಡದಿಂದ ಮಾಯವಾಗಿರುವ ಪ್ರಮುಖ ಹೆಸರೆಂದರೆ ಮನೀಷ್ ಪಾಂಡೆ ಅವರದು. ಗಾಯಾಳಾದ ಕಾರಣ ಪಾಂಡೆ ಈ ಕೂಟದಲ್ಲಿ ಆಡುತ್ತಿಲ್ಲ. ಕೆ.ಎಲ್. ರಾಹುಲ್ ರಾಷ್ಟ್ರೀಯ ತಂಡದಲ್ಲಿ ರುವುದರಿಂದ ಈ ಪಂದ್ಯಾವಳಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಐಪಿಎಲ್ನಲ್ಲಿ ಮಿಂಚಿದ ದೇವದತ್ತ ಪಡಿಕ್ಕಲ್ ಈ ತಂಡದ ಸ್ಟಾರ್ ಆಟಗಾರ. ಉಡುಪಿ ಮೂಲದ ಶುಭಾಂಗ್ ಹೆಗ್ಡೆ ಕೂಡ ಸ್ಥಾನ ಪಡೆದಿದ್ದಾರೆ.
ಎಲ್ಲ ಆಟಗಾರರು ಡಿ. 28ರಂದು ಕೆಎಸ್ಸಿಎ (ಎ) ಗ್ರೌಂಡ್ಸ್ನಲ್ಲಿ ತಮ್ಮ ವರದಿ ಸಲ್ಲಿಸಬೇಕೆಂದು ಕೆಎಸ್ಸಿಎ ಸೂಚಿಸಿದೆ.
ಕರ್ನಾಟಕ “ಎ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಈ ವಿಭಾಗದ ಉಳಿದ ತಂಡಗಳೆಂದರೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರ ಪ್ರದೇಶ, ರೈಲ್ವೇಸ್ ಮತ್ತು ತ್ರಿಪುರ. ಈ ಗುಂಪಿನ ಲೀಗ್ ಪಂದ್ಯಗಳೆಲ್ಲ ಬೆಂಗಳೂರಿನಲ್ಲಿ ನಡೆಯಲಿವೆ.
ಇದನ್ನೂ ಓದಿ:ಟೆಸ್ಟ್ ಪಂದ್ಯಾಟ : ಪ್ರವಾಸಿ ಪಾಕಿಸ್ಥಾನ ಎದುರು ವಿಲಿಯಮ್ಸನ್ ಸೆಂಚುರಿ ನಂ. 23
ಕರ್ನಾಟಕ ತಂಡ: ಕರುಣ್ ನಾಯರ್ (ನಾಯಕ), ಪವನ್ ದೇಶಪಾಂಡೆ (ಉಪನಾಯಕ), ದೇವದತ್ತ ಪಡಿಕ್ಕಲ್, ರೋಹನ್ ಕದಂ, ಕೆ.ವಿ. ಸಿದ್ಧಾರ್ಥ್, ಶ್ರೀಜಿತ್ (ವಿ.ಕೀ.), ಶರತ್ ಬಿ.ಆರ್. (ವಿ.ಕೀ.), ಅನಿರುದ್ಧ್ ಜೋಶಿ, ಶ್ರೇಯಸ್ ಗೋಪಾಲ್, ಕೆ. ಗೌತಮ್, ಜಗದೀಶ್ ಸುಚಿತ್, ಪ್ರವೀಣ್ ದುಬೆ, ಮಿಥುನ್ ಎ., ಪ್ರಸಿದ್ಧ್ ಕೃಷ್ಣ, ಪ್ರತೀಕ್ ಜೈನ್, ಕೌಶಿಕ್ ವಿ., ರೋನಿತ್ ಮೋರೆ, ದರ್ಶನ್ ಎಂ.ಬಿ., ಮನೋಜ್ ಭಾಂಡಗೆ, ಶುಭಾಂಗ್ ಹೆಗ್ಡೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.