![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 28, 2020, 11:27 AM IST
ಶಿವಮೊಗ್ಗ: ಹೊಸ ವರ್ಷಾಚರಣೆ ಸರ್ಕಾರ ನಿಷೇಧ ಹೇರಿರುವುದು ಖಂಡನೀಯ. ಯುವ ಪೀಳಿಗೆಯ ಸಂಭ್ರಮಾಚರಣೆಗೆ ಕಡಿವಾಣ ಹಾಕುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಆರ್ ಎಸ್ಎಸ್ ಪ್ರೇರಿತ ಸಿದ್ಧಾಂತಗಳನ್ನು ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಇದರ ಭಾಗವಾಗಿ ಕ್ರಿಸ್ಮಸ್ ಆಚರಣೆಗೆ ಗುಂಪು ಗೂಡುವುದನ್ನು ನಿಷೇಧಿಸಿತು., ಇದೀಗ ಯುವಕರ ಹೊಸ ವರ್ಷಾಚರಣೆಗೆ ಕಡಿವಾಣ ಹಾಕುತ್ತಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಟೀಕಿಸಿದರು.
ಆರ್ ಆರ್ ನಗರ ಉಪ ಚುನಾವಣೆ ವೇಳೆಯಲ್ಲಿ 20 ಸಾವಿರ ಜನರ ಸೇರಿಸಿ ಸಭೆ, ಮೆರವಣಿಗೆ ಮಾಡಿದರು. ಆವಾಗ ಸರ್ಕಾರಕ್ಕೆ ಕೋವಿಡ್ ನೆನಪು ಇರಲಿಲ್ಲಲ್ವಾ, ಯಡಿಯೂರಪ್ಪ ಏನು ತಜ್ಞರೇ. ಯಾರಿಗೂ ಹೇಳದೆ, ಕೇಳದೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದರು. ಆದರೆ ಮರುದಿನವೇ ಅದನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ ಎಂದರು.
ಇದನ್ನೂ ಓದಿ:ತಾಯಿ ‘ಇವರೇ ನಿಮ್ಮ ತಂದೆ’ ಎಂದರೆ ಸಾಕ್ಷಿ ಕೇಳಲ್ಲ: ಸಿದ್ದರಾಮಯ್ಯಗೆ ಸಿ.ಟಿ.ರವಿ ಟಾಂಗ್
ಬಿಎಸ್ ವೈ ಗೆ ಶಾಪ ತಟ್ಟಿದೆ
ಸಿಗಂದೂರು ವಿಷಯದಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕೆ ಯಡಿಯೂರಪ್ಪರಿಗೆ ದೇವಿಯ ಶಾಪ ತಟ್ಟಿದೆ. ಅದಕ್ಕಾಗಿ ಡಿನೋಟಿಫಿಕೇಷನ್ ಪ್ರಕರಣ ಹೆಗಲೇರಿದೆ. ಹಾಗಾಗಿ ನಾನು ಅವರ ರಾಜೀನಾಮೆ ಕೇಳುವುದಿಲ್ಲ. ಅವರ ಪಕ್ಷದವರೇ ಯಡಿಯೂರಪ್ಪ ಬಗ್ಗೆ ಮಾತನಾಡುತ್ತಿದ್ದಾರೆ. ಜನವರಿ 16ರ ನಂತರ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುತ್ತಿದ್ದಾರೆ. ಸಂಕ್ರಮಣದ ನಂತರ ಹೊಸ ರಾಜಕೀಯ ತಿರುವು ಅಗಲಿದೆ ಎಂದರು.
ನಾನು ಯಾವುದೇ ಭ್ರಷ್ಟಾಚಾರದ ಆಪಾದಿತರನ್ನು ನಾನು ಇಟ್ಟುಕೊಳ್ಳುವುದಿಲ್ಲ ಎಂದು ಪ್ರಧಾನಿ ಹೇಳಿದ್ದರು. ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ 15 ರಿಂದ 20 ಸಾವಿರ ಹಣ ನೀಡಿ ಮತ ಖರೀದಿಸಿದೆ. ಭ್ರಷ್ಟಾಚಾರದ ಹಣದ ಹೊಳೆಯನ್ನೇ ಯಡಿಯೂರಪ್ಪ ಸರ್ಕಾರ ಈ ಬಾರಿಯ ಚುನಾವಣೆಯಲ್ಲಿ ಹರಿಸಿದೆ. ಈ ಬಗ್ಗೆ ಪ್ರಧಾನಿ ಮೋದಿಯವರು ಗಮನಿಸಬೇಕು ಎಂದು ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು.
You seem to have an Ad Blocker on.
To continue reading, please turn it off or whitelist Udayavani.