ಹೊಸ ವರ್ಷಾಚರಣೆಗೆ ಕಡಿವಾಣ ಹಾಕುವ ಅಧಿಕಾರ ಸರ್ಕಾರಕ್ಕಿಲ್ಲ: ಬೇಳೂರು ಗೋಪಾಲಕೃಷ್ಣ


Team Udayavani, Dec 28, 2020, 11:27 AM IST

ಹೊಸ ವರ್ಷಾಚರಣೆಗೆ ಕಡಿವಾಣ ಹಾಕುವ ಅಧಿಕಾರ ಸರ್ಕಾರಕ್ಕಿಲ್ಲ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಹೊಸ ವರ್ಷಾಚರಣೆ ಸರ್ಕಾರ ನಿಷೇಧ ಹೇರಿರುವುದು ಖಂಡನೀಯ. ಯುವ ಪೀಳಿಗೆಯ ಸಂಭ್ರಮಾಚರಣೆಗೆ ಕಡಿವಾಣ ಹಾಕುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಆರ್ ಎಸ್ಎಸ್ ಪ್ರೇರಿತ ಸಿದ್ಧಾಂತಗಳನ್ನು ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಇದರ ಭಾಗವಾಗಿ ಕ್ರಿಸ್ಮಸ್ ಆಚರಣೆಗೆ ಗುಂಪು ಗೂಡುವುದನ್ನು ನಿಷೇಧಿಸಿತು., ಇದೀಗ ಯುವಕರ ಹೊಸ ವರ್ಷಾಚರಣೆಗೆ ಕಡಿವಾಣ ಹಾಕುತ್ತಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಟೀಕಿಸಿದರು.

ಆರ್ ಆರ್ ನಗರ ಉಪ ಚುನಾವಣೆ ವೇಳೆಯಲ್ಲಿ 20 ಸಾವಿರ ಜನರ ಸೇರಿಸಿ ಸಭೆ, ಮೆರವಣಿಗೆ ಮಾಡಿದರು. ಆವಾಗ ಸರ್ಕಾರಕ್ಕೆ ಕೋವಿಡ್ ನೆನಪು ಇರಲಿಲ್ಲಲ್ವಾ, ಯಡಿಯೂರಪ್ಪ ಏನು ತಜ್ಞರೇ. ಯಾರಿಗೂ ಹೇಳದೆ, ಕೇಳದೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದರು. ಆದರೆ ಮರುದಿನವೇ ಅದನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ ಎಂದರು.

ಇದನ್ನೂ ಓದಿ:ತಾಯಿ ‘ಇವರೇ ನಿಮ್ಮ ತಂದೆ’ ಎಂದರೆ ಸಾಕ್ಷಿ ಕೇಳಲ್ಲ: ಸಿದ್ದರಾಮಯ್ಯಗೆ ಸಿ.ಟಿ.ರವಿ ಟಾಂಗ್

ಬಿಎಸ್ ವೈ ಗೆ ಶಾಪ ತಟ್ಟಿದೆ

ಸಿಗಂದೂರು ವಿಷಯದಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕೆ ಯಡಿಯೂರಪ್ಪರಿಗೆ ದೇವಿಯ ಶಾಪ ತಟ್ಟಿದೆ. ಅದಕ್ಕಾಗಿ ಡಿನೋಟಿಫಿಕೇಷನ್ ಪ್ರಕರಣ ಹೆಗಲೇರಿದೆ. ಹಾಗಾಗಿ ನಾನು ಅವರ ರಾಜೀನಾಮೆ ಕೇಳುವುದಿಲ್ಲ. ಅವರ ಪಕ್ಷದವರೇ ಯಡಿಯೂರಪ್ಪ ಬಗ್ಗೆ ಮಾತನಾಡುತ್ತಿದ್ದಾರೆ. ಜನವರಿ 16ರ ನಂತರ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುತ್ತಿದ್ದಾರೆ. ಸಂಕ್ರಮಣದ ನಂತರ ಹೊಸ ರಾಜಕೀಯ ತಿರುವು ಅಗಲಿದೆ ಎಂದರು.

ನಾನು ಯಾವುದೇ ಭ್ರಷ್ಟಾಚಾರದ ಆಪಾದಿತರನ್ನು ನಾನು ಇಟ್ಟುಕೊಳ್ಳುವುದಿಲ್ಲ ಎಂದು ಪ್ರಧಾನಿ ಹೇಳಿದ್ದರು. ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ 15 ರಿಂದ 20 ಸಾವಿರ ಹಣ ನೀಡಿ ಮತ ಖರೀದಿಸಿದೆ. ಭ್ರಷ್ಟಾಚಾರದ ಹಣದ ಹೊಳೆಯನ್ನೇ ಯಡಿಯೂರಪ್ಪ ಸರ್ಕಾರ ಈ ಬಾರಿಯ ಚುನಾವಣೆಯಲ್ಲಿ ಹರಿಸಿದೆ. ಈ ಬಗ್ಗೆ ಪ್ರಧಾನಿ ಮೋದಿಯವರು ಗಮನಿಸಬೇಕು ಎಂದು ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.