![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 28, 2020, 7:06 PM IST
ಮುಂಬೈ: ಮುಂಬರುವ ಹೊಸ ವರ್ಷಕ್ಕೆ ತೆರ ಮೇಲೆ ಬರಲು ತಯಾರಿ ನಡೆಸುತ್ತಿರುವ ನಟಿ ಆಲಿಯಾ ಭಟ್ ಅಭಿನಯದ ‘ಗಂಗೂಬಾಯಿ ಕಾಥಿಯಾವಾಡಿ’ ಸಿನಿಮಾದ ಬಿಡುಗಡೆಗೆ ಕಾನೂನಾತ್ಮಕ ತಡೆ ಎದುರಾಗಿದೆ.
ಈ ಸಿನಿಮಾ ಕಾಮಾಟಿಪುರದ ಮಹಿಳೆಯೊಬ್ಬರ ಜೀವನಾಧಾರಿತ ನೈಜ ಕಥಾ ಹಂದರವನ್ನು ಒಳಗೊಂಡಿದ್ದು, ಚಿತ್ರದ ಶೀರ್ಷಿಕೆಯಲ್ಲಿಯೂ ಇದೇ ಹೆಸರನ್ನೇ ನೀಡಲಾಗಿದೆ. ಇದೀಗ ಗಂಗೂ ಬಾಯಿ ಕಾಥಿಯಾವಾಡಿ ಅವರ ಪುತ್ರ ಬಾಪೂಜಿ ರಾವ್ ಜಿ ಶಾ ಅವರು ಆಲಿಯಾ ಭಟ್ ಸೇರಿದಂತೆ ಬನ್ಸಾಲಿ ಪ್ರೊಡಕ್ಷನ್ ಮೇಲೆ ದೂರು ದಾಖಲಿಸಿದ್ದಾರೆ.
ಈ ಸಿನಿಮಾ ಹುಸೇನ್ ಜೈದಿ ಅವರು ರಚಿಸಿರುವ ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬೈ ಪುಸ್ತಕದಲ್ಲಿನ ಮಾಹಿತಿಗಳ ಆಧಾರದ ಮೇಲೆ ಚಿತ್ರಿಸಲಾಗಿದ್ದು ಇದೀಗ ಹುಸೇನ್ ಜೈದಿ ಅವರ ಮೇಲೆಯೂ ಬಾಪೂಜಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:ಫಿನ್ ಲ್ಯಾಂಡ್ ಆಫರ್ ಗೆ ಭರ್ಜರಿ ಪ್ರತಿಕ್ರಿಯೆ! ಏನಿದು 90 ದಿನಗಳ ಫಿನ್ ವಲಸೆ ಯೋಜನೆ?
ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಸಿನಿಮಾ ಇದಾಗಿದ್ದು, ನಟಿ ಆಲಿಯಾ ಭಟ್ ಅವರು ಗಂಗೂ ಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಆಲಿಯಾ ಹಾಗೂ ಬನ್ಸಾಲಿ ಇವರಿಬ್ಬರ ಕಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ.
ಕ್ರೈಮ್ ಆಧಾರಿತವಾದ ಈ ಸಿನಿಮಾದಲ್ಲಿನ ಕೆಲವು ಅಂಶಗಳು ಗಂಗೂ ಬಾಯಿ ಅವರ ಮಾನಹಾನಿ ಮಾಡುವಂತಿದೆ. ಅಲ್ಲದೆ ಸ್ವಾಭಿಮಾನ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುವಂತಿದೆ ಎಂದು ಬಾಪೂಜಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ವುಹಾನ್ ಕೋವಿಡ್ ವರದಿ ಮಾಡಿದ ಪತ್ರಕರ್ತೆಗೆ 4 ವರ್ಷ ಜೈಲುಶಿಕ್ಷೆ ವಿಧಿಸಿದ ಚೀನಾ ಕೋರ್ಟ್!
ಈ ಸಿನಿಮಾದಲ್ಲಿ ಮಹಿಳೆಯನ್ನು ಅಶ್ಲೀಲ ಚಿತ್ರಿಸಲಾಗಿದೆ ಆದ್ದರಿಂದ ಚಿತ್ರ ತಂಡದ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವ ಸಾಧ್ಯತೆಗಳಿವೆ ಎಂದು ಬಾಪೂಜಿ ಪರ ವಕೀಲರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಬಾಂಬೆ ಸಿವಿಲ್ ಕೋರ್ಟ್ ನಡೆಸಲಿದೆ ಎಂದು ವರದಿಯಾಗಿದೆ.
ಸಿನಿಮಾ ಪಸ್ತುತ ವರ್ಷದಲ್ಲಿಯೇ ಬಿಡುಗಡೆ ಹೊಂದಬೇಕಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಚಿತ್ರೀಕರಣ ಅರ್ಧದಲ್ಲಿಯೇ ಸ್ಥಗಿತಗೊಂಡಿತ್ತು. ಆದರೆ ಇದೀಗ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಆ ಬಳಿಕವೇ ಚಿತ್ರ ಬಿಡುಗಡೆ ಹೊಂದುವ ಸಾಧ್ಯತೆಗಳಿವೆ ಎನ್ನಲಾಗಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.