ವುಹಾನ್ ಕೋವಿಡ್ ವರದಿ ಮಾಡಿದ ಪತ್ರಕರ್ತೆಗೆ 4 ವರ್ಷ ಜೈಲುಶಿಕ್ಷೆ ವಿಧಿಸಿದ ಚೀನಾ ಕೋರ್ಟ್!
ಶಾಂಘೈ ಕೋರ್ಟ್ ದೀರ್ಘ ವಿಚಾರಣೆ ನಡೆಸಿದ ನಂತರ ಶಿಕ್ಷೆ ವಿಧಿಸಿರುವುದಾಗಿ ವರದಿ ವಿವರಿಸಿದೆ
Team Udayavani, Dec 28, 2020, 4:45 PM IST
ಶಾಂಘೈ(ಬೀಜಿಂಗ್): ಇಡೀ ಜಗತ್ತಿಗೆ ಕಂಟಕಪ್ರಾಯವಾದ ಕೋವಿಡ್ 19 ಸೋಂಕಿನ ಉಗಮಸ್ಥಾನವಾಗಿದ್ದ ಚೀನಾದ ವುಹಾನ್ ಕುರಿತು ವರದಿ ಮಾಡಿದ್ದ ನಾಗರಿಕ ಪತ್ರಕರ್ತೆಗೆ (ಸಿಟಿಜನ್ ಜರ್ನಲಿಸ್ಟ್) ಚೀನಾ ನ್ಯಾಯಾಲಯ ಸೋಮವಾರ(ಡಿಸೆಂಬರ್ 28, 2020) ನಾಲ್ಕು ವರ್ಷ ಜೈಲುಶಿಕ್ಷೆ ವಿಧಿಸಿರುವುದಾಗಿ ವರದಿ ತಿಳಿಸಿದೆ.
ಚೀನಾದ ವುಹಾನ್ ನಗರಿಯಲ್ಲಿ ಸುಮಾರು ಒಂದು ವರ್ಷದ ಹಿಂದೆ ಪತ್ತೆಯಾದ ಅಪರಿಚಿತ ಸೋಂಕಿನ ವಿವರಗಳು ಬಹಿರಂಗವಾದ ಬಳಿಕ ಸಿಟಿಜನ್ ಜರ್ನಲಿಸ್ಟ್ ಗೆ ಕೋರ್ಟ್ ಶಿಕ್ಷೆ ವಿಧಿಸಿರುವುದಾಗಿ ಪತ್ರಕರ್ತೆ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸೋಂಕು ಆರಂಭದ ಹಂತದಲ್ಲಿರುವಾಗಲೇ ವರದಿ ಮಾಡುವ ಮೂಲಕ ಸಮಸ್ಯೆಯನ್ನು ಉಲ್ಬಣಗೊಳಿಸಲು ಕಾರಣ ಎಂದು ಆರೋಪಿಸಲಾಗಿದ್ದು, ಈ ಕುರಿತು ಶಾಂಘೈ ಕೋರ್ಟ್ ದೀರ್ಘ ವಿಚಾರಣೆ ನಡೆಸಿದ ನಂತರ ಶಿಕ್ಷೆ ವಿಧಿಸಿರುವುದಾಗಿ ವರದಿ ವಿವರಿಸಿದೆ.
37ವರ್ಷದ ನಾಗರಿಕ ಪತ್ರಕರ್ತೆ ಝಾಂಗ್ ಝಾನ್ ಗೆ ಶಾಂಘೈನ ಜಿಲ್ಲಾ ಕೋರ್ಟ್ ಶಿಕ್ಷೆ ವಿಧಿಸಿದ್ದು, ನಾವು ಈ ಬಗ್ಗೆ ಮೇಲ್ಮನವಿ ಸಲ್ಲಿಸುವುದಾಗಿ ವಕೀಲ ರೆನ್ ಖ್ವಾನಿಯು ತಿಳಿಸಿದ್ದಾರೆ.
ಝಾಂಗ್ ಫೆಬ್ರುವರಿ ತಿಂಗಳಿನಲ್ಲಿ ಕೋವಿಡ್ ಸೋಂಕಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಲೈವ್ ವರದಿ ಮಾಡಿದ್ದು, ಇದು ಚೀನಾ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿತ್ತು. ಕೋವಿಡ್ ಸೋಂಕಿನ ಕುರಿತು ಟೀಕಿಸಿದ್ದ ಸುಮಾರು ಎಂಟು ಮಂದಿಯನ್ನು ಚೀನಾ ಸರ್ಕಾರ ಈಗಾಗಲೇ ಶಿಕ್ಷಿಸಿರುವುದಾಗಿ ವರದಿ ತಿಳಿಸಿದೆ.
ಝಾಂಗ್ ಬಂಧನವಾದ ನಂತರ ಸುಮಾರು ಕಳೆದ ಏಳು ತಿಂಗಳಿನಿಂದ ವಿಚಾರಣೆ ನಡೆಯುತ್ತಿದ್ದು, ಇಂದು ಕೋರ್ಟ್ ಹೊರಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಚಾರಣೆ ವೇಳೆ ವಿದೇಶಿ ಪತ್ರಕರ್ತರಿಗೆ ಕೋರ್ಟ್ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.