ಲಗ್ಗೆ ಇಟ್ಟ ಪ್ರವಾಸಿಗರು ಹೋಮ್‌ ಸ್ಟೇ ಮಾಲಿಕರು ಖುಷ್

ಮಂಜ್ರಾಬಾದ್‌ ಕೋಟೆ, ಬಿಸಿಲೆ ಘಾಟ್‌, ಮಗಜಹಳ್ಳಿ ಜಲಪಾತ, ಮೂಕನ ಮನೆ ಜಲಪಾತಕ್ಕೆ ಭೇಟಿ

Team Udayavani, Dec 28, 2020, 6:21 PM IST

ಲಗ್ಗೆ ಇಟ್ಟ ಪ್ರವಾಸಿಗರು ಹೋಮ್‌ ಸ್ಟೇ ಮಾಲಿಕರು ಖುಷ್

ಸಕಲೇಶಪುರ: ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿತಾಲೂಕಿನ ಪ್ರವಾಸಿ ತಾಣಗಳಿಗೆ ಸಾವಿರಾರುಪ್ರವಾಸಿಗರು ಭೇಟಿ ನೀಡಿದ್ದು ಪಟ್ಟಣ ವ್ಯಾಪ್ತಿಯಲ್ಲಿ ಸಂಚಾರ ಸಮಸ್ಯೆಯಾದರೆ, ರೆಸಾರ್ಟ್‌, ಹೋಂ ಸ್ಟೇ,ಹೋಟೆಲ್‌ಗ‌ಳು ತುಂಬಿಹೋಗಿದ್ದು ಮಾಲಿಕರಿಗೆ ಭರ್ಜರಿ ವ್ಯಾಪಾರವಾಗುತ್ತಿದೆ.

ಕ್ರಿಸ್‌ಮಸ್‌ ಹಿನ್ನೆಲೆಯಲ್ಲಿ 3 ದಿನ ಸತತ ರಜೆ ಬಂದಿದೆ. ಅಲ್ಲದೇ, ಹೊಸ ವರ್ಷ ಆಚರಣೆಗಾಗಿ ಕೋವಿಡ್ ಆತಂಕ ಮರೆತ ಪ್ರವಾಸಿಗರು ಹೊರಊರುಗಳಿಂದ ಬಂದಿದ್ದರಿಂದ ತಾಲೂಕಿನರೆಸಾರ್ಟ್‌, ಹೋಂ ಸ್ಟೇಗಳು ಭರ್ತಿಯಾಗಿವೆ.ಅಲ್ಲದೇ, ಕೋವಿಡ್ ಆತಂಕ ಮರೆತ ಪ್ರವಾಸಿಗರಿಂದ ತುಂಬಿ ತುಳುಕುವಂತಾಗಿದೆ.

ಹೋಂಸ್ಟೇ ಹಾಗೂ ರೆಸಾರ್ಟ್‌ಗಳಿಗೆ ಬಂದ ಪ್ರವಾಸಿಗರು ಮಾತ್ರವಲ್ಲದೆ ಇತರ ಪ್ರವಾಸಿಗರೂತಾಲೂಕಿನ ಪ್ರೇಕ್ಷಣೀಯ ಸ್ಥಳಗಳಾದಮಂಜ್ರಾಬಾದ್‌ ಕೋಟೆ, ಬಿಸಿಲೆ ಘಾಟ್‌,ಮಗಜಹಳ್ಳಿ ಜಲಪಾತ, ಮೂಕನ ಮನೆ ಜಲಪಾತ,ಕಾಡುಮನೆ ಸೇರಿ ವಿವಿಧ ಬೆಟ್ಟ ಗುಡ್ಡಗಳಿಗೆಪ್ರಯಾಣಿಕರು ಲಗ್ಗೆ ಇಟ್ಟಿದ್ದಾರೆ. ಹೀಗೆ ಬಂದ ಬಹುತೇಕ ಪ್ರವಾಸಿಗರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ತಿರುಗಾಡುವುದು ಅಲ್ಲಲ್ಲಿ ಕಂಡು ಬರುತ್ತಿದೆ.

2ನೇ ಹಂತದ ಚುನಾವಣೆಯಲ್ಲಿ ತಾಲೂಕಿನ ಬಹುತೇಕ ಆರಕ್ಷಕರು ಹಾಗೂ ಹೋಂಗಾರ್ಡ್‌ಗಳುಚುನಾವಣೆ ನಿರ್ವಹಣೆಗಾಗಿ ಆಲೂರು ಸೇರಿ ಇತರ ತಾಲೂಕುಗಳಿಗೆ ಹೋಗಿದ್ದರಿಂದ ಪಟ್ಟಣ ವ್ಯಾಪ್ತಿಯಲ್ಲಿ ಇದ್ದ ಆರಕ್ಷಕರು ಸಂಚಾರ ಸಮಸ್ಯೆ ನಿರ್ವಹಣೆ ಮಾಡಲು ಪರದಾಡಬೇಕಾಯಿತು.

ಮಂಜ್ರಾಬಾದ್‌ ಕೋಟೆ ಸಮೀಪವಂತೂ ನೂರಾರು ವಾಹನ ಸಾಲುಗಟ್ಟಿ ನಿಂತಿದ್ದು ಅದರಲ್ಲೂಮಡಿಕೇರಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಒಂದು ಭಾಗ ಹೆಚ್ಚಿನ ಸಂಖ್ಯೆಯಲ್ಲಿ ವಾಹನನಿಂತಿದ್ದವು. ಇದರಿಂದಾಗಿ ಸುಗಮ ವಾಹನಗಳಸಂಚಾರಕ್ಕೆ ಅಡಚಣೆಯುಂಟಾಯಿತು. ಪಟ್ಟಣಸೇರಿ ಪಟ್ಟಣಕ್ಕೆ ಹೊಂದಿಕೊಂಡಿರುವ ಹೆದ್ದಾರಿ ಬದಿ ಹೋಟೆಲ್‌ಗ‌ಳಲ್ಲಿ ಪ್ರವಾಸಿಗರ ದಂಡು ಕಾಣುತ್ತಿತ್ತು.

ಬೆಂಗಳೂರಿನಲ್ಲಿ “ಹೊಸವರ್ಷ ಬಿಗಿ’ ಅರಿತು ಬಂದರು :

ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಬಿಗಿ ಹೇರುವ ಸಾಧ್ಯತೆ ಅರಿತು ಕಳೆದ 3-4 ದಿನಗಳಿಂದ ಪ್ರವಾಸಿಗರು ಅಪಾರ ಪ್ರಮಾಣದಲ್ಲಿ ತಾಲೂಕಿಗೆ ಬರುತ್ತಿದ್ದಾರೆ. ಕೇವಲ ಮಲೆನಾಡಿಗೆ ಮಾತ್ರವಲ್ಲ ಕರಾವಳಿಯ ಪವಿತ್ರ ತೀರ್ಥ ಯಾತ್ರೆ ಸ್ಥಳಗಳಾದ ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಸ್ಥಳಗಳಿಗೆ ಅಪಾರ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಪಟ್ಟಣ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನಗಳ ದಟ್ಟಣೆಯಿಂದ ಸ್ಥಳೀಯರು ರಸ್ತೆ ದಾಟಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಕಳೆದ 3-4 ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿರುವುದರಿಂದ ತಾಲೂಕಿನ ಆರ್ಥಿಕತೆ ಹೆಚ್ಚುವುದರಲ್ಲಿ ಅನುಮಾನವಿಲ್ಲ. ಚೇತನ್‌, ಹೋಂ ಸ್ಟೇ ಮಾಲೀಕರು

ರೆಸಾರ್ಟ್‌ ಹಾಗೂ ಹೋಂಸ್ಟೇಗಳ ಮಾಲಿಕರು ನಿಯಮಗಳನ್ನು ಮೀರಿ ಚಟುವಟಿಕೆ ನಡೆಸಿದರೆ ಅಂತಹ ಹೋಂಸ್ಟೇ ಮತ್ತು ರೆಸಾರ್ಟ್‌ಗಳ ಮಾಲಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಗಿರೀಶ್‌, ಸರ್ಕಲ್‌ ಇನ್ಸ್‌ಪೆಕ್ಟರ್‌

 

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.