ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧದ ಪ್ರಕರಣ ರದ್ದು
Team Udayavani, Dec 28, 2020, 10:15 PM IST
ಬೆಂಗಳೂರು: ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದ ಆರೋಪದಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ.
ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಅವರು, ಆರೋಪ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದಾರೆ.
ಏನಿದು ಪ್ರಕರಣ?
2016ರ ಫೆ. 28ರಂದು ಶಿರಸಿ ಪ್ರವಾಸಿ ಮಂದಿರದಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕನ್ನಡದ ಭಟ್ಕಳ ಇಡೀ ದೇಶದ ಭಯೋತ್ಪಾದಕ ಕೇಂದ್ರವಾಗಿದೆ. ಎಲ್ಲಿಯವರೆಗೂ ಇಸ್ಲಾಂ ಇರುತ್ತದೆಯೋ ಅಲ್ಲಿಯವರೆಗೂ ಭಯೋತ್ಪಾದನೆ ನಿಲ್ಲುವುದಿಲ್ಲ. ಇಸ್ಲಾಂ ಜಗತ್ತಿನ ಶಾಂತಿಗೆ ಇಟ್ಟಿರುವ ಬಾಂಬ್’ ಎಂದು ಹೇಳಿರುವ ಆರೋಪ ಎದುರಾಗಿತ್ತು.
ಇದನ್ನೂ ಓದಿ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ 1,100 ಕೋಟಿ ವೆಚ್ಚ
ಈ ಸಂಬಂಧ ಅನಂತಕುಮಾರ್ ಹೆಗಡೆ ವಿರುದ್ಧ ಮುರಾದ್ ಹುಸೇನ್ ಎಂಬವರು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.