ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಕೋಲಿನಿಂದ ಹೊಡೆದು ಕೊಂದ ದುಷ್ಟರು! ಮೂಕ ಪ್ರೇಕ್ಷಕರಾದ ಜನ
Team Udayavani, Dec 29, 2020, 12:19 PM IST
ಲಕ್ನೌ : ಇಬ್ಬರು ವ್ಯಕ್ತಿಗಳು ಹಾಡ ಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಕೋಲಿನಿಂದ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಗಾಝಿಯಾಬಾದ್ ನಲ್ಲಿ ಸಂಭವಿಸಿದೆ.
ನೂರಾರು ಜನ ಸಂಚಾರ ನಡೆಸುತ್ತಿರುವ ಪ್ರಮುಖ ರಸ್ತೆಯಲ್ಲಿ ಘಟನೆ ನಡೆಯುತ್ತಿದ್ದರೆ, ಅತ್ತ ಕೆಲವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡುತಿದ್ದರು ಇನ್ನು ಕೆಲವರು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದರು. ಆದರೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತಿದ್ದವನನ್ನು ರಕ್ಷಿಸುವ ಕೆಲಸ ಯಾರು ಮಾಡಲಿಲ್ಲ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಕೆಲ ಸಮಯದ ಬಳಿಕ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ ಆದರೆ ಆ ವ್ಯಕ್ತಿ ಅಷ್ಟೋತ್ತಿಗಾಗಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ:ಲಾಕ್ ಡೌನ್, ಸೀಲ್ ಡೌನ್ ಅಗತ್ಯವಿಲ್ಲ, ಶಾಲಾರಂಭಕ್ಕೆ ತೊಂದರೆಯಿಲ್ಲ: ಸಚಿವ ಸುಧಾಕರ್
ಮೃತಪಟ್ಟ ವ್ಯಕ್ತಿಯನ್ನು ಅಜಯ್ ಎನ್ನಲಾಗಿದೆ, ಆರೋಪಿಗಳನ್ನು ಗೋವಿಂದ್ ಹಾಗೂ ಅಮಿತ್ ಎಂದು ಹೇಳಲಾಗಿದೆ.
ಘಟನೆ ಕುರಿತು ಅಜಯ್ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆದರೆ ಪೊಲೀಸರು ಕೇಸು ದಾಖಲಿಸಿಕೊಳ್ಳದೆ ರಾಜಿ ನಡೆಸಲು ಮುಂದಾಗಿದ್ದಾರೆ.
ಈ ಹಿಂದೆ ಅಜಯ್ ಸಹೋದರ ಹಾಗೂ ಗೋವಿಂದ್ ನಡುವೆ ಹೂವಿನ ಅಂಗಡಿ ವಿಚಾರವಾಗಿ ವೈಮನಸ್ಸು ಏರ್ಪಟ್ಟಿತ್ತು ಆದರೆ ಅಜಯ್ ನನ್ನು ಕೊಲೆ ಮಾಡಲು ಏನು ಕಾರಣ ಎಂಬುದು ವಿಪರ್ಯಾಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.