ಹೊಳಲ್ಕೆರೆ ಪಪಂ ಇನ್ಮುಂದೆ ಪುರಸಭೆ

ಹೊಸ ವರ್ಷದ ಮೊದಲ ದಿನವೇ ಪಟ್ಟಣದ ಜನರಿಗೆ ಸಿಹಿ ಸುದ್ದಿ,ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನಿರೀಕ್ಷೆ

Team Udayavani, Jan 3, 2021, 7:21 PM IST

ಹೊಳಲ್ಕೆರೆ ಪಪಂ ಇನ್ಮುಂದೆ ಪುರಸಭೆ

ಹೊಳಲ್ಕೆರೆ: ಹೊಳಲ್ಕೆರೆ ಪಟ್ಟಣ ಪಂಚಾಯತ್‌ 2021ರ ಜನವರಿ 1 ರಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ್ದು, ಪಟ್ಟಣದ ಬಹು ಕಾಲದ ಕನಸು ನನಸಾಗಿದೆ. ಶಾಸಕ ಎಂ. ಚಂದ್ರಪ್ಪ ಪುರಸಭೆಯನ್ನಾಗಿಸುವಲ್ಲಿ ಅಹರ್ನಿಶಿ ಶ್ರಮಿಸಿ ಯಶಸ್ವಿಯಾಗಿದ್ದಾರೆ.

ಹಲವಾರು ದಶಕಗಳಿಂದ ಪಟ್ಟಣದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎನ್ನುವ ಕೊರಗು ಜನರಲ್ಲಿತ್ತು.ಒಂದಿಷ್ಟು ಸರಕಾರಿ ಕಟ್ಟಡಗಳು ಬೃಹದಾಕಾರವಾಗಿ ತಲೆ ಎತ್ತಿದ್ದನ್ನು ಬಿಟ್ಟರೆ ಜನರ ನಿರೀಕ್ಷೆಯಂತೆಪ್ರಗತಿ ಸಾಧಿಸುವಲ್ಲಿ ಪಟ್ಟಣ ಪಂಚಾಯತ್‌ ವಿಫಲವಾಗಿತ್ತು. ರಸ್ತೆ, ಚರಂಡಿ ಬೆಳಕಿನ ಸೌಲಭ್ಯ, ಕುಡಿಯವ ನೀರಿಗಾಗಿ ಜನರು ಪರದಾಡುವ ಸ್ಥಿತಿ ಇತ್ತು. ಪಪಂಗೆ ಸರಕಾರದಿಂದನಿರೀಕ್ಷಿತ ಅನುದಾನ ದೊರೆಯದೆ ಅಭಿವೃದ್ಧಿ ಪ್ರಸಕ್ತ ವರ್ಷ ಜ. 1ರಿಂದ ಪುರಸಭೆಯಾಗಿದ್ದು, 14.437 ಚದರ ಮೀಟರ್‌ ವ್ಯಾಪ್ತಿ ಹೊಂದಿದೆ. ಈಗ ಪುರಸಭೆಯ ವ್ಯಾಪ್ತಿಗೆ 9 ಹಳ್ಳಿಗಳು ಸೇರಿಕೊಂಡಿವೆ.

ತಾಲೂಕಿನ 2011ನೇ ಸಾಲಿನ ಜನಗಣತಿ ಪ್ರಕಾರ ಪಟ್ಟಣದ ಈಗಿನ ಜನಸಂಖ್ಯೆ 15,783 ಇದೆ. ಪುರಸಭೆಆಗಲು ಬೇಕಾದ ಜನಸಂಖ್ಯೆ 20,000. ಹಾಗಾಗಿ ಪಟ್ಟಣದ ಸಮಿಪದ ಗ್ರಾಮಗಳಾದ ಹಳ್ಳೇಹಳ್ಳಿ ಲಂಬಾಣಿಹಟ್ಟಿ, ಕುಡಿನೀರುಕಟ್ಟೆ, ಕುಡಿನೀರುಕಟ್ಟೆ ಲಂಬಾಣಿ ಹಟ್ಟಿ, ಜೈಪುರ, ಜಯಂತಿ ನಗರ, ಗುಂಡೇರಿ ಕಾವಲ್‌, ಹೊಳಲ್ಕೆರೆ ಲಂಬಾಣಿಹಟ್ಟಿ, ಚೀರನಹಳ್ಳಿ, ಕಂಬದೇವರಹಟ್ಟಿ ಗಳನ್ನು ಪುರಸಭೆಗೆ ಸೇರ್ಪಡೆ ಮಾಡಿ ಕೊಳ್ಳಲಾಗಿದೆ. ಇದರಿಂದಾಗಿ ಪುರಸಭೆಯಾಗಿಪರಿವರ್ತನೆಯಾಗಲು ಬೇಕಾದ 21,746 ಜನಸಂಖ್ಯೆಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತಲಿನ ಕಂದಾಯ ಗ್ರಾಮಗಳ ಜಮೀನು ಸೇರಿದಂತೆ ವಿವಿಧ ಸ್ವತ್ತುಗಳನ್ನು ಪುರಸಭೆಯ ವ್ಯಾಪ್ತಿಗೆ ಸೇರಿಸುವ ಮೂಲಕ ನಿರ್ಣಯ ಅಂಗೀಕರಿಸಲಾಗಿದೆ. 10 ಕೋಟಿ ರೂ. ಅನುದಾನದಲ್ಲಿ ಪುರಸಭೆ ಕಟ್ಟಡ ನಿರ್ಮಾಣಗೊಳ್ಳಲಿದ್ದು, ನೀಲನಕಾಶೆ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಲಿದೆ.

ಒಟ್ಟಿನಲ್ಲಿ ಪಟ್ಟಣ ಪಂಚಾಯತ್‌ದಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ್ದು ಪಟ್ಟಣದ ನಾಗರಿಕರಲ್ಲಿ ಸಂತಸ ಮೂಡಿಸಿದೆ. ಇನ್ನಾದರೂಅಭಿವೃದ್ಧಿ ಕಾರ್ಯಗಳಿಗೆ ವೇಗವಾಗಿ ಚಾಲನೆ ದೊರೆಯಲಿ ಎಂಬುದು ಎಲ್ಲರ ಅಪೇಕ್ಷೆ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಪಟ್ಟಣ ಪಂಚಾಚಾಯತ್‌ಗೆ ಬರುತ್ತಿರಲಿಲ್ಲ.ಇದರಿಂದ ಪಟ್ಟಣದ ಅಭಿವೃದ್ಧಿ ಸಾಧ್ಯವೇ ಇಲ್ಲ ಎನ್ನುವಂತಹ ಸ್ಥಿತಿ ಇತ್ತು. ಶಾಸಕರು ಪುರಸಭೆ ಮಾಡುವ ಮೂಲಕ ಇಲ್ಲಿನ ಜನರಿಗೆ ಹೊಸ ಭರವಸೆ ನೀಡಿದ್ದಾರೆ. ಹೊಳಲ್ಕೆರೆಯಲ್ಲಿ ಅಭಿವೃದ್ಧಿ ಪರ್ವ ಆರಂಭಕ್ಕೆ ಅಡಿಗಲ್ಲು ಹಾಕಿದಂತಾಗಿದೆ. -ಆರ್‌.ಎ. ಅಶೋಕ್‌, ಪುರಸಭೆ ಅಧ್ಯಕ್ಷರು

 

ಹೊಳಲ್ಕೆರೆ ಪಟ್ಟಣವನ್ನು ಪುರಸಭೆಯನ್ನಾಗಿ ಮಾಡಲು ಸಾಕಷ್ಟು ಸಮಯ ಬೇಕು. ಅದಕ್ಕೆ ಪೂರಕ ದಾಖಲೆಯನ್ನು ಸಿದ್ಧಪಡಿಸಿಸಲ್ಲಿಸಿದ ಒಂದೇ ವಾರದಲ್ಲಿ ಸರಕಾರದಿಂದಆದೇಶ ಹೊರಡಿಸಲು ಶಾಸಕ ಎಂ. ಚಂದ್ರಪ್ಪ ಸಾಕಷ್ಟು ಶ್ರಮಿಸಿದ್ದಾರೆ. ಅವರು ಹಗಲು ರಾತ್ರಿಎನ್ನದೆ ವಿಧಾನಸೌಧ ಪಡಸಾಲೆಯಲ್ಲಿ ಕೆಲಸ ಮಾಡಿದ ಪರಿಣಾಮ ಇಂದು ಪುರಸಭೆಯಾಗಿದೆ. -ಎ. ವಾಸಿಂ, ಪುರಸಭೆ ಮುಖ್ಯಾಧಿಕಾರಿ

 

-ಎಸ್‌. ವೇದಮೂರ್ತಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.