ನೂರಕ್ಕೂ ಅಧಿಕ ಶಿಕ್ಷಕರಲ್ಲಿ ಕೋವಿಡ್
Team Udayavani, Jan 7, 2021, 6:15 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ನೂರಕ್ಕೂ ಅಧಿಕ ಶಿಕ್ಷಕರಿಗೆ ಕೊರೊನಾ ದೃಢಪಟ್ಟಿದ್ದು, ಬಹುತೇಕರು ಹೋಂ ಕ್ವಾರಂಟೈನ್, ಐಸೋ ಲೇಶನ್ಗೆ ಒಳಗಾಗಿದ್ದಾರೆ.
ಶಾಲೆಗೆ ಬರುವ ಪ್ರತೀ ಶಿಕ್ಷಕರು ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ, ಅದರ ನೆಗೆಟಿವ್ ವರದಿ ಆಧಾರದಲ್ಲೇ ಶಾಲೆಗೆ ಬರಬೇಕು ಎಂದು ಈ ಹಿಂದೆಯೇ ಸರಕಾರ ಸ್ಪಷ್ಟಪಡಿಸಿತ್ತು. ಅದರಂತೆ ಬಹುತೇಕರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೆಲವರ ವರದಿ ಈಗಾಗಲೇ ಬಂದಿದೆ. ಇನ್ನು ಕೆಲವರ ವರದಿ ಬರಬೇಕಿದೆ. ಸುಮಾರು ನೂರಕ್ಕೂ ಅಧಿಕ ಶಿಕ್ಷಕರಿಗೆ ಕೊರೊನಾ ದೃಢಪಟ್ಟಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುರಕ್ಷೆಗೆ ಸಂಬಂಧಿಸಿದ ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಈಗಾಗಲೇ ಜಿಲ್ಲಾ ಉಪನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಕೊರೊನಾ ದೃಢಪಟ್ಟ ಶಿಕ್ಷಕರು ಹೋಂ ಐಸೋಲೇಷನ್, ಕ್ವಾರಂಟೈನ್ ಆಗುತ್ತಿದ್ದಾರೆ. ಹೀಗಾಗಿ ಪಾಲಕರು ಅಥವಾ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಶಾಲಾ ತರಗತಿ, ವಿದ್ಯಾಗಮ ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕ್ಷಕರಲ್ಲಿ ಕೋವಿಡ್
ಜ. 1- 2 ಪಾಸಿಟಿವ್
ಜ. 2- 5 ಪಾಸಿಟಿವ್
ಜ. 4- 25 + ಪಾಸಿಟಿವ್
ಜ. 5- 50+
ಜ. 6-100+
ಹಾಸನ – 10 ಶಿಕ್ಷಕರಿಗೆ ಕೋವಿಡ್ ಈ ಶಿಕ್ಷಕರಿದ್ದ ಶಾಲೆಗಳಿಗೆ 3 ದಿನ ರಜೆ
ಚಿಕ್ಕಮಗಳೂರು – 11
ವಿದ್ಯಾರ್ಥಿಗಳು,
7 ಶಿಕ್ಷಕರಿಗೆ ಸೋಂಕು
ನಾಳೆ ಎರಡನೇ ಡ್ರೈ ರನ್
ಈಗಾಗಲೇ ದೇಶಾದ್ಯಂತ ಮೊದಲ ಹಂತದ ಡ್ರೈ ರನ್ ಅನ್ನು ಯಶಸ್ವಿಯಾಗಿ ಮುಗಿಸಿರುವ ಕೇಂದ್ರ ಸರಕಾರ, ಈಗ ಎರಡನೇ ಹಂತದ ಡ್ರೈ ರನ್ಗೂ ತಯಾರಾಗಿದೆ. ಶುಕ್ರವಾರ ದೇಶದ ಆಯ್ದ ಜಿಲ್ಲೆಗಳಲ್ಲೂ ಡ್ರೈ ರನ್ ನಡೆಯಲಿದೆ. ಜ.13 ರಿಂದ ದೇಶಾದ್ಯಂತ ಲಸಿಕೆ ವಿತರಣೆ ಆರಂಭವಾಗುವ ಮಾತುಗಳ ಬೆನ್ನಲ್ಲೇ ಎರಡನೇ ಹಂತದ ಪ್ರಾತ್ಯಕ್ಷಿಕೆ ಆರಂಭಿಸಲು ಮುಂದಾಗಿದೆ.
ಎರಡನೇ ಹಂತದ ಡ್ರೈ ರನ್ ಜ. 8 ರಂದು ಉಡುಪಿ ಯಲ್ಲೂ ನಡೆ ಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.