ಆಮದು ನಿಯಂತ್ರಣ; ಅಡಿಕೆ ಧಾರಣೆ ನಾಗಾಲೋಟ

ಮಾರ್ಚ್‌ ವೇಳೆಗೆ ಕೆಜಿಗೆ 500 ನಿರೀಕ್ಷೆ

Team Udayavani, Jan 7, 2021, 6:22 AM IST

ಆಮದು ನಿಯಂತ್ರಣ; ಅಡಿಕೆ ಧಾರಣೆ ನಾಗಾಲೋಟ

ಸಾಂದರ್ಭಿಕ ಚಿತ್ರ

ಪುತ್ತೂರು: ಬರ್ಮಾ ಸಹಿತ ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಣಕ್ಕಾಗಿ ಸರಕಾರವು ಬಿಗಿ ಕ್ರಮಗಳಿಗೆ ಮುಂದಾಗಿರುವ ಬೆನ್ನಲ್ಲೇ ಅಡಿಕೆ ಧಾರಣೆ ಏರಿಕೆ ಕಂಡಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಸ ಅಡಿಕೆ, ಸಿಂಗಲ್‌, ಡಬ್ಬಲ್‌ ಚೋಲ್‌ ಧಾರಣೆ ದಾಖಲೆಯ ಹಂತಕ್ಕೆ ತಲುಪಿದೆ. ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಈಗ ಧಾರಣೆ ಏರುಗತಿಯಲ್ಲಿದೆ.

ವಿದೇಶದಲ್ಲೂ ಕೊರತೆ
ವಿದೇಶಗಳಿಂದ ಅಡಿಕೆ ಆಮದು ಹೆಚ್ಚಾಗಿ ಧಾರಣೆ ಕುಸಿತ ಕಾಣಲಿದೆ ಎಂಬ ಆತಂಕ ಸೃಷ್ಟಿಸಿ ಬೆಳೆಗಾರರು ಉತ್ಪನ್ನವನ್ನು ಮಾರುಕಟ್ಟೆಗೆ ಇಳಿಸುವಂತೆ ಮಾಡುವ ಮಾರುಕಟ್ಟೆ ತಂತ್ರಗಾರಿಕೆಯ ಬಗ್ಗೆ ಬೆಳೆಗಾರರು ಜಾಗೃತರಾಗಿದ್ದಾರೆ. ವಾಸ್ತವವಾಗಿ ಅಡಿಕೆ ಬೆಳೆಯುವ ವಿದೇಶಗಳಲ್ಲಿ ಉತ್ಪಾದನೆ ಕೊರತೆ ಇದೆ. 2018ಕ್ಕೆ ಹೋಲಿಸಿದರೆ ಅಲ್ಲಿ ಶೇ. 60ರಷ್ಟು ಬೆಳೆ ಕಡಿಮೆ ಇದ್ದು, ಅಲ್ಲಿಂದಲೂ ಬೇಡಿಕೆಗೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ನಿರ್ಬಂಧವೂ ಬಿಗಿಯಾಗಿದೆ. ದೇಶೀಯ ಅಡಿಕೆ ಧಾರಣೆ ಇನ್ನಷ್ಟು ಏರುವ ಆಶಾವಾದಕ್ಕೆ ಇವೆರಡು ಅಂಶಗಳು ಪೂರಕ.

ದಾಸ್ತಾನು ಕೊರತೆ ಇದೆ
ಉತ್ತರ ಭಾರತದಲ್ಲಿ ಪಾನ್‌ ಮಸಾಲಕ್ಕಾಗಿ ಮಂಗಳೂರು ಚಾಲಿ ಅಡಿಕೆಯನ್ನೇ ನೆಚ್ಚಿಕೊಳ್ಳುತ್ತಾರೆ. ಮೂರು ವರ್ಷಗಳಿಂದ ಕೊಳೆ ರೋಗ, ಪ್ರತಿಕೂಲ ವಾತಾವರಣಗಳಿಂದಾಗಿ ದಕ್ಷಿಣ ಭಾರತದಲ್ಲಿ ಅಡಿಕೆ ಬೆಳೆ ನಿರೀಕ್ಷಿತ ಪ್ರಮಾಣದಲ್ಲಿಲ್ಲ. ಹೀಗಾಗಿ ಕಾನ್ಪುರ, ಕಟಕ್‌, ರಾಜಕೋಟ್‌, ಅಹಮದಾಬಾದ್‌ ಸಹಿತ ಉತ್ತರ ಭಾರತದ ದಾಸ್ತಾನು ಕೋಠಿಗಳಲ್ಲಿ ಅಡಿಕೆ ದಾಸ್ತಾನು ಕುಸಿದಿದ್ದು, ಶೇ. 70ರಷ್ಟು ಕೊರತೆ ಇದೆ.

500 ರೂ.ನತ್ತ ಲಕ್ಷ್ಯ
ಮಾರುಕಟ್ಟೆ ತಜ್ಞರ ಪ್ರಕಾರ ಮಾರ್ಚ್‌ ವೇಳೆಗೆ ಧಾರಣೆ 500 ರೂ. ತಲುಪಿದರೂ ಅಚ್ಚರಿಯಿಲ್ಲ. ಮಾರುಕಟ್ಟೆಯಲ್ಲಿ ಇಂತಹ ಸಾಧ್ಯತೆ ಕಂಡು ಬಂದಿದೆ.

ಅಡಿಕೆಯ ಧಾರಣೆಯ ನೋಟ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಜ. 6ರಂದು ಹೊಸ ಅಡಿಕೆ ಕೆಜಿಗೆ 350 ರೂ., ಸಿಂಗಲ್‌ ಚೋಲ್‌ಗೆ 410 ರೂ., ಡಬ್ಬಲ್‌ ಚೋಲ್‌ಗೆ 410 ರೂ. ಇತ್ತು. ಈ ಕೊಯಿಲಿನ ಅಡಿಕೆ (ಹೊಸ)ಗೆ ಈ ಪ್ರಮಾಣದ ಧಾರಣೆ ಇದೇ ಮೊದಲು.

ಉದಯವಾಣಿ ಟೀಮ್‌

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

Ashok-Rai

Rai Estate: ಪುತ್ತೂರಿನಲ್ಲಿ ನ. 2ರಂದು “ಅಶೋಕ ಜನ- ಮನ’ ಕಾರ್ಯಕ್ರಮ

2

Puttur: ಬೀಡಿ ಕಳವು; ಆರೋಪಿ ಬಂಧನ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

road-mishap-11

Puttur: ಬೈಕ್‌-ಸ್ಕೂಟರ್‌ ಅಪಘಾತ; ಗಾಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.