ಒಂದೇ ದಿನದಲ್ಲಿ ಮೂಡುಬಿದಿರೆ ಕಂಬಳ: ಡಿಸಿಯೊಂದಿಗೆ ಚರ್ಚಿಸಿ ತೀರ್ಮಾನ


Team Udayavani, Jan 9, 2021, 9:33 PM IST

ಒಂದೇ ದಿನದಲ್ಲಿ ಮೂಡುಬಿದಿರೆ ಕಂಬಳ: ಡಿಸಿಯೊಂದಿಗೆ ಚರ್ಚಿಸಿ  ತೀರ್ಮಾನ

ಮೂಡುಬಿದಿರೆ: ಕಂಬಳವನ್ನು ಎರಡು ದಿನಗಳ ಬದಲು ಒಂದೇ ದಿನದಲ್ಲಿ ಮುಗಿಸಲು ಸಂಸದರು, ಉಸ್ತುವಾರಿ ಸಚಿವರ ಸಹಿತ ಜನಪ್ರತಿನಿಧಿಗಳು, ಕಂಬಳಗಳ ಪ್ರಮುಖರು ಇದ್ದು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಮೂಡುಬಿದಿರೆ ಕಂಬಳ ಸಮಿತಿ ಸಭೆಯಲ್ಲಿ ನಿಶ್ಚಯಿಸಲಾಯಿತು.

ಶಾಸಕ, ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಕೋವಿಡ್‌ ನಿಯಮ ಪಾಲಿಸಿಕೊಂಡು ಮೂಡುಬಿದಿರೆ ಕಂಬಳವನ್ನು ಈ ಹಿಂದೆ ನಿಗದಿಯಾದಂತೆ ಫೆ. 20ರಂದು ಹೇಗೆ ನಡೆಸಬಹುದು ಎಂಬುದರ ಬಗ್ಗೆ ಮೂಡುಬಿದಿರೆ ಕಂಬಳ ಸಮಿತಿ ಪದಾಧಿಕಾರಿಗಳು, ಓಟದ ಕೋಣಗಳ ಮಾಲಕರು, ವ್ಯವಸ್ಥಾಪಕರು ಹಾಗೂ ಕಾರ್ಯಕರ್ತರ ಸಹಿತ ಕಂಬಳಾ ಭಿಮಾನಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಫಿಟ್‌ನೆಸ್‌ ಟೆಸ್ಟ್‌ :

ಕಂಬಳ ವಿದ್ವಾಂಸ, ಪ್ರಧಾನ ತೀರ್ಪುಗಾರ ಕೆ. ಗುಣಪಾಲ ಕಡಂಬ ಅವರು “ಕೋಣಗಳ ಫಿಟ್‌ನೆಸ್‌ ಟೆಸ್ಟ್‌ ನಡೆಸಲೇಬೇಕು’ ಎಂಬುದನ್ನು ಒತ್ತಿ ಹೇಳಿ, ಮೂಡುಬಿದಿರೆಯಲ್ಲಿ ಈ ಹಿಂದೆ 1986ರಿಂದ 89ರ ವರೆಗೆ ನಡೆಸಲಾದಂತೆ, ಜ. 30, ಫೆ. 6 ಮತ್ತು 13ರಂದು ನಡೆಯುವ ಕಂಬಳಗಳಲ್ಲಿ ಉತ್ತಮ ಸಾಧನೆಯನ್ನು ಪರಿಗಣಿಸಿ, ಆಹ್ವಾನಿತ ಕೋಣಗಳ ಕಂಬಳ ನಡೆಸಿದರೆ ಹೇಗೆ ಎಂಬ ಅಭಿಪ್ರಾಯವನ್ನು ಮಂಡಿಸಿದರು.

ಕೋಶಾಧಿಕಾರಿ ಭಾಸ್ಕರ ಎಸ್‌. ಕೋಟ್ಯಾನ್‌ ಮಾತನಾಡಿ, ಎರಡು ದಿನಗಳ ಕಂಬಳ ನಡೆಸುವುದರಿಂದ ಓಟಗಾರರಿಗೆ ಬಹಳ ತ್ರಾಸವಾಗುವುದು ಸಹಜ; ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದರು. ಜ. 30ರಂದು ನಡೆಯಲಿರುವ ಹೊಕ್ಕಾಡಿಗೋಳಿ ಕಂಬಳದ ಪ್ರಮುಖ ರಾದ ರಶ್ಮಿತ್‌ ಶೆಟ್ಟಿ ಮಾತನಾಡಿ, ಜಿಲ್ಲಾಧಿ ಕಾರಿಯವರನ್ನು ಕಂಬಳಕ್ಕೆ ಸಂಬಂಧಿಸಿದ ಎಲ್ಲರೂ ಒಟ್ಟಾಗಿ ನಿಯೋಗ ಹೋಗಿ ಚರ್ಚಿಸಿದರೆ ಮಾತ್ರ ಎಲ್ಲ ಕಂಬಳ ವ್ಯವಸ್ಥಾಪಕರಿ ಗೂ ಅನುಕೂಲವಾಗುತ್ತದೆ ಎಂದರು.

ಪಶು ವೈದ್ಯಾಧಿಕಾರಿ ಡಾ| ರವಿಕುಮಾರ್‌, ಮೂಡುಬಿದಿರೆ ಪುರಸಭಾಧ್ಯಕ್ಷ ಪ್ರಸಾದ್‌ ಕುಮಾರ್‌, ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ, ಮುಡಾ ಅಧ್ಯಕ್ಷ ಮೇಘನಾದ್‌ ಶೆಟ್ಟಿ, ಎಪಿಎಂಸಿ ಸದಸ್ಯ ಕೃಷ್ಣರಾಜ ಹೆಗ್ಡೆ, ಎಂ.ಎಸ್‌. ಕೋಟ್ಯಾನ್‌, ಕೆ.ಪಿ. ಜಗದೀಶ ಅಧಿಕಾರಿ, ಈಶ್ವರ ಕಟೀಲು, ಕೆ.ಆರ್‌. ಪಂಡಿತ್‌, ಸುನಿಲ್‌ ಆಳ್ವ ,ನಾಗರಾಜ ಪೂಜಾರಿ, ಶಾಂತಿಪ್ರಸಾದ್‌ ಹೆಗ್ಡೆ, ವಿಜಯಕುಮಾರ ಕಂಗಿನಮನೆ, ಸುರೇಶ್‌ ಶೆಟ್ಟಿ ಉಪಸ್ಥಿತರಿದ್ದರು. ಸುರೇಶ್‌ ಕೆ. ಪೂಜಾರಿ ನಿರೂಪಿಸಿದರು.

ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, “ಎಲ್ಲ ನಿಯಮಗಳನ್ನು ಪಾಲಿಸಿಕೊಂಡು, ಎಂದಿನಂತೆ ಸಾಧ್ಯವಾದಷ್ಟು ಕೋಣಗಳಿಗೆ ಅವಕಾಶ ಕಲ್ಪಿಸೋಣ. ಜಿಲ್ಲಾಧಿಕಾರಿಯವರಲ್ಲಿ ಚರ್ಚಿಸಿ ಅಂತಿಮ ಸ್ವರೂಪವನ್ನು ಪ್ರಕಟಿಸಲಾಗುವುದು’ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.