ಟಿ.ವಿ.ಮೋಹನ್‌ ದಾಸ್‌ ಪೈ ಅವರಿಗೆ ರಾಣಿ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌ ಪದವಿ ಪ್ರದಾನ


Team Udayavani, Jan 11, 2021, 10:30 PM IST

mohan-das

ಬೆಂಗಳೂರು: ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನ್‌ದಾಸ್‌ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯ್‌ ವಾಲ ಅವರು ಪ್ರದಾನ ಮಾಡಿದರು.

ರಾಜಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ವಜೂಭಾಯ್‌ ವಾಲ ಅವರು, ಪೈ ಅವರಿಗೆ ಈ ಪದವಿಯನ್ನು ಪ್ರದಾನ ಮಾಡಿದರಲ್ಲದೆ, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ಪೈ ಅವರ ಸೇವೆ ಅನುಕರಣೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಹಾಗೂ  ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಮೋಹನ್‌ದಾಸ್‌ ಪೈ ಅವರು, ಇನ್ಫೋಸಿಸ್‌ನಂಥ ಪ್ರತಿಷ್ಠಿತ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಆ ಕಂಪನಿಗೆ ಆರ್ಥಿಕ ಸದೃಢತೆಯನ್ನು ತಂದುಕೊಟ್ಟವರು. ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಸಲ್ಲುತ್ತಿರುವುದು ಸಂತೋಷ ಉಂಟು ಮಾಡಿದೆ ಎಂದರು.

ಇದನ್ನೂ ಓದಿ:ಭೀಕರ ಅಪಘಾತ : ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಪತ್ನಿ ದುರ್ಮರಣ : ನಾಲ್ವರಿಗೆ ಗಾಯ

ಸಂಶೋಧನೆಗೆ ಹೆಚ್ಚು ಒತ್ತು ಬೇಕೆಂದ ಪೈ

ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಮೋಹನ್‌ದಾಸ್‌ ಪೈ, ಶೈಕ್ಷಣಿಕವಾಗಿ ರಾಜ್ಯವು ಉನ್ನತ ಮಟ್ಟದಲ್ಲೇ ಇದ್ದರೂ ಸಂಶೋಧನೆಗೆ ಇನ್ನಷ್ಟು ಒತ್ತು ನೀಡಲೇಬೇಕು.‌ ಕೊನೆಪಕ್ಷ 100 ಕೋಟಿ ರೂ.ಗಳಷ್ಟು ಮೊತ್ತವನ್ನಾದರೂ ಸಂಶೋಧನಾ ಕ್ಷೇತ್ರಕ್ಕೆ ಮೀಸಲಿಡಬೇಕು. ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಆರ್ಥಿಕ ಸಹಕಾರವನ್ನು ಒದಗಿಸಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ಬರುತ್ತದೆ ಹಾಗೂ ದೇಶದ ಅಭಿವೃದ್ಧಿಗೆ ವೇಗ ಬರುತ್ತದೆ ಎಂದರು.

ಶಾಲೆ-ಕಾಲೇಜುಗಳಲ್ಲಿ ಕಲಿಯುವ ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ಉದಾರವಾಗಿ ಒದಗಿಸಬೇಕು. ಮೂಲಸೌಕರ್ಯಗಳನ್ನು ಪರಿಣಾಮಕಾರಿ ಒದಗಿಸಬೇಕು ಎಂದು ಪೈ ಮನವಿ ಮಾಡಿದರು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರ ಗೌಡ, ಕುಲಸಚಿವ ಪ್ರೊ.ಬಸವರಾಜ್‌ ಪದ್ಮಶಾಲಿ ಮುಂತಾದವರು ಕಾರ್ಯಕ್ರಮದಲ್ಲಿಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.