ಕಾಂಗ್ರೇಸ್ ಸರ್ಕಾರದಲ್ಲಿ 15 ಲಕ್ಷ ಆಶ್ರಯ ಮನೆ ಭ್ರಷ್ಟಾಚಾರ : ವಸತಿ ಸಚಿವ ಸೋಮಣ್ಣ ಆರೋಪ


Team Udayavani, Jan 12, 2021, 5:26 PM IST

ಕಾಂಗ್ರೆಸ್ ಸರ್ಕಾರದಲ್ಲಿ 15 ಲಕ್ಷ ಆಶ್ರಯ ಮನೆ ಭ್ರಷ್ಟಾಚಾರ : ವಸತಿ ಸಚಿವ ಸೋಮಣ್ಣ ಆರೋಪ

ಬಾಗಲಕೋಟೆ : ಐದು ವರ್ಷಗಳ ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ 15 ಲಕ್ಷ ಆಶ್ರಯ ಮನೆಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಯಂಕ್-ಸೀನ್ ಹೆಸರಿನಲ್ಲಿ 6ರಿಂದ 7 ಮನೆ ಹಾಕಿ, ಬಿಲ್ ತೆಗೆದಿದ್ದಾರೆ. ಹೀಗಾಗಿ ಸುಮಾರು 6 ಲಕ್ಷ ಆಶ್ರಯ ಮನೆಗಳನ್ನು ಲಾಕ್ ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಆರೋಪಿಸಿದರು.

ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜನ ಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು.
ಆಸರೆ ಇಲ್ಲದ ಬಡವರಿಗೆ ಆಶ್ರಯ ಯೋಜನೆಯಡಿ ಮನೆ ಕಟ್ಟಿಕೊಡುವುದು ಸರ್ಕಾರದ ಉದ್ದೇಶ. ಆದರೆ, ಕಾಂಗ್ರೆಸ್ ಸರ್ಕಾರದಲ್ಲಿ ಬರೋಬ್ಬರಿ 15 ಲಕ್ಷ ಮನೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿತ್ತು. ಯಂಕ, ಸೀನ ಹೆಸರಿನಲ್ಲಿ 6ರಿಂದ 7 ಮನೆ ಹಾಕಲಾಗಿದೆ. ಒಬ್ಬರಿಗೆ ಒಂದೇ ಮನೆ ಹಾಕಬೇಕು. ಒಬ್ಬೊಬ್ಬರ ಹೆಸರಿನಲ್ಲಿ ಆರೇಳು ಮನೆ ಇರುವುದು ಸರ್ಕಾರದ ಗಮನಕ್ಕೆ ಬಂದ ಬಳಿಕ ರಾಜ್ಯದಲ್ಲಿ ಸುಮಾರು 6 ಲಕ್ಷ ಮನೆಗಳ ಪ್ರಕ್ರಿಯೆ ಲಾಕ್ ಮಾಡಲಾಗಿತ್ತು. ಇದೀಗ ಸಮಗ್ರ ತನಿಖೆ ನಡೆಸಿದ ಬಳಿಕ, ಅಗತ್ಯ ಹಾಗೂ ಅರ್ಹರಾದವರಿಗೆ ಈ ವರ್ಷ ಒಟ್ಟು 1.17 ಲಕ್ಷ ಮನೆ ನಿರ್ಮಿಸಿಕೊಡಲಾಗಿದೆ. ಮುಂದಿನ ವರ್ಷ ಮುಖ್ಯಮಂತ್ರಿಗಳ ಮನವೋಲಿಸಿ, 1.50 ಲಕ್ಷ ಮನೆ ಮಂಜೂರು ಮಾಡಿಸಲಾಗುವುದು ಎಂದರು.

ಇದನ್ನೂ ಓದಿ:ಕ್ಯೂಆರ್‌ ಕೋಡ್‌ನಿಂದ ತೊಗರಿ ಖರೀದಿ ವಿಳಂಬ! ಮುಕ್ತ ಮಾರುಕಟ್ಟೆಯತ್ತ ಮುಖ

ರಾಜ್ಯದ ಪ್ರತಿ ಗ್ರಾ.ಪಂ.ಗೂ ತಲಾ 20 ಆಶ್ರಯ ಮನೆ ಮಂಜೂರು ಮಾಡಲಾಗುವುದು. ಐದು ವರ್ಷದಲ್ಲಿ ಒಂದೊಂದು ಪಂಚಾಯಿತಿಗೂ 100 ಮನೆ ಬರಲಿವೆ. ನೂತನ ಗ್ರಾ.ಪಂ. ಸದಸ್ಯರು, ಚುನಾವಣೆಯಲ್ಲಿ ತಮಗೆ ಮತ ಹಾಕದೇ ಇದ್ದರೂ ಬಡವರು-ಆಶ್ರಯ ಇಲ್ಲದವರಿದ್ದರೆ ಅವರಿಗೆ ಮನೆ ಮಂಜೂರು ಮಾಡಿಸಬೇಕು ಎಂದು ತಿಳಿಸಿದರು.

ನಲ್ ಸೇ ಜಲ್ ಯೋಜನೆ :
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಗ್ರಾ.ಪಂ.ಗೆ ಹೆಚ್ಚು ಅನುದಾನ ನೀಡುತ್ತಿದ್ದಾರೆ. 14ನೇ ಹಣಕಾಸು ಆಯೋಗದಡಿ ಒಂದೊಂದು ಪಂಚಾಯಿತಿಗೂ ಸುಮಾರು 60 ಲಕ್ಷ ಅನುದಾನ ಕೊಟ್ಟಿದ್ದಾರೆ. ಈಗ 15ನೇ ಹಣಕಾಸು ಆಯೋಗದಡಿ 1 ಕೋಟಿ ವರೆಗೂ ಅನುದಾನ ನೀಡಲಿದ್ದಾರೆ ಎಂದರು.

ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಪಂಚಾಯಿತಿ ಬಯಲು ಶೌಚ್ಯಮುಕ್ತ ಮಾಡುವ ಮಹತ್ವದ ಕಾರ್ಯ ಪ್ರಧಾನ ಮಂತ್ರಿಗಳು ಮಾಡಿದ್ದು, ಮುಂದಿನ ವರ್ಷದಿಂದ ಪ್ರತಿ ಮನೆಗೂ ನಲ್ಲಿಯ ಕುಡಿಯುವ ನೀರಿನ ವ್ಯವಸ್ಥೆ ಮಾಡಲು, ಶೀಘ್ರವೇ ನಲ್ ಸೇ ಜಲ್ (ನಳದಿಂದ ಮನೆ ಮನೆಗೂ ಕುಡಿಯುವ ನೀರು) ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಹುಶಾರ್ ಇರ್ತಾರ್ :
ಗ್ರಾ.ಪಂ. ನೂತನ ಸದಸ್ಯರು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಯಾವುದೇ ಸಿಎಂ, ಸಚಿವ, ಶಾಸಕರಿಗೂ ಇಲ್ಲದ ಅಧಿಕಾರ ಗ್ರಾ.ಪಂ. ಸದಸ್ಯರಿಗೆ ಇರುತ್ತದೆ. ಗ್ರಾ.ಪಂ. ಅಧ್ಯಕ್ಷರ ದಾರಿ ತಪ್ಪಿಸುವ ಕೆಲಸ ಅಧಿಕಾರಿಗಳು ಮಾಡುತ್ತಾರೆ. ಅವರಿಂದ ಎಚ್ಚರಿಕೆ ಇರಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.