ವಾಯುಮಾಲಿನ್ಯ ಗ‌ರ್ಭಕ್ಕೇ ಕುತ್ತು


Team Udayavani, Jan 14, 2021, 7:00 AM IST

ವಾಯುಮಾಲಿನ್ಯ ಗ‌ರ್ಭಕ್ಕೇ ಕುತ್ತು

ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ಥಾನ ದೇಶಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕಕಾರಿಯಾಗಿದೆ. ಈ ಕಾರಣದಿಂದ ಶ್ವಾಸಕೋಶ ಸೋಂಕು ಸಂಭವಿಸಿ ಸಾವಿರಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಇದೇ ವೇಳೆ ಹೊಸ ಆಘಾತಕಾರಿ ಮಾಹಿತಿಯೊಂದು ಹೊರ ಬಿದ್ದಿದೆ. ಪ್ರತೀ ವರ್ಷ ವಾಯುಮಾಲಿನ್ಯದಿಂದಾಗಿ ಲಕ್ಷಾಂತರ ಗರ್ಭಪಾತಗಳು ಸಂಭವಿಸುತ್ತಿವೆ ಎಂದು ವರದಿಯೊಂದು ಹೇಳಿದೆ.

ಲ್ಯಾನ್ಸೆಟ್‌ ಜರ್ನಲ್‌ನಲ್ಲಿ ಇತ್ತೀಚೆಗೆ ಪ್ರಕಟವಾದ ಈ ಸಂಶೋಧನ ವರದಿಯ ಪ್ರಕಾರ, ವಾಯುಮಾಲಿನ್ಯವು ಗರ್ಭಪಾತಕ್ಕೆ ನೇರವಾಗಿ ಸಂಬಂಧಿಸಿದೆ. ಭಾರತ ಸಹಿತ ನೆರೆಹೊರೆಯ ದೇಶಗಳಲ್ಲಿ ಗಾಳಿಯ ಗುಣಮಟ್ಟ ತೀರಾ ಕುಸಿಯುತ್ತಿದ್ದು ವಿಶ್ವದ ಅತ್ಯಂತ ಕಲುಷಿತ ಭಾಗವಾಗಿದೆ.

ಏನಾಗುತ್ತಿದೆ? :

ಗಾಳಿಯು ಹೆಚ್ಚು ಕಲುಷಿತಗೊಂಡಿರುವ ಪ್ರದೇಶಗಳಲ್ಲಿ ಗರ್ಭಧಾರಣೆಯ ತೊಂದರೆಗಳು, ಗರ್ಭಪಾತಗಳು ಮತ್ತು ಮಗು ಸಾವಿಗೀಡಾಗಿ ಜನಿಸುವಂಥ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದಲ್ಲಿ ಹೆಚ್ಚಿನ ವಾಯುಮಾಲಿನ್ಯದಿಂದಾಗಿ ವಾರ್ಷಿಕವಾಗಿ 3.49 ಲಕ್ಷ ಗರ್ಭಪಾತಗಳು ಸಂಭವಿಸುತ್ತಿವೆ ಎಂದಿದೆ. ಸಂಶೋಧನೆಯ ಪ್ರಕಾರ, ಭಾರತವು ವಾಯುಮಾಲಿನ್ಯವನ್ನು ಕಡಿಮೆ ಮಾಡಿದರೆ, ಗರ್ಭಪಾತ ಪ್ರಕರಣಗಳು ಪ್ರತೀ ವರ್ಷ ಶೇ. 7ರಷ್ಟು ಕಡಿಮೆಯಾಗಬಹುದು.

ಏನು ಹಾನಿ? :

ವಾಯುಮಾಲಿನ್ಯವು ತಾಯಿ ಮತ್ತು ಮಗುವನ್ನು ಸಂಪರ್ಕಿಸುವ ಹೊಕ್ಕುಳ ಬಳ್ಳಿಯನ್ನು ಹಾನಿಗೊಳಿಸುವುದರ ಮೂಲಕ ಭ್ರೂಣವನ್ನು ಹಾನಿಗೊಳಿಸುತ್ತದೆ. ದಕ್ಷಿಣ ಏಷ್ಯಾದಲ್ಲಿ ಗರ್ಭಧಾರಣೆಯ ಮೇಲೆ ಮಾಲಿನ್ಯದ ಪ್ರಭಾವವನ್ನು ತೋರಿಸುವ ಮೊದಲ ಅಧ್ಯಯನ ಇದಾಗಿದೆ. ದಕ್ಷಿಣ ಏಷ್ಯಾದಲ್ಲಿ ಗರ್ಭಾಶಯದ ಹಾನಿ ವಿಶ್ವದಲ್ಲೇ ಅತೀ ಹೆಚ್ಚು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ನಿಯಂತ್ರಣ ಹೇಗೆ?:

ತಜ್ಞರ ಪ್ರಕಾರ, ಗರ್ಭಿಣಿಯರು ವಾಸಿಸುವ ಪ್ರದೇಶದಲ್ಲಿ ಗಾಳಿ ಶುದ್ಧವಾಗಿರಬೇಕು. ಶುದ್ಧಗಾಳಿ ಬೇಕು ಎಂದರೆ ನಿಮ್ಮ ಮನೆಯ ಸುತ್ತಲೂ ಸ್ವತ್ಛತೆಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯ ತೋಟದಲ್ಲಿ ಗಾಳಿ ಶುದ್ಧೀಕರಿಸುವ ಸಸ್ಯಗಳನ್ನು ನೆಡಬಹುದು. ಬೆಳಗ್ಗೆ ಮತ್ತು ಸಂಜೆ ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಬೇಕು. ಇದು ಮನೆಯ ಒಳಕ್ಕೆ ಶುದ್ಧಗಾಳಿಯನ್ನು ತರುತ್ತದೆ. ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ. ಇದು ವಾಯುಮಾಲಿನ್ಯದಿಂದ ಉಂಟಾಗುವ ರೋಗಗಳನ್ನು ತಡೆಯಲು ನೆರವಾಗುತ್ತದೆ.

4 ಪಟ್ಟು ಏರಿಕೆ :

2000 ಮತ್ತು 2016ರ ನಡುವೆ, ಸಂಶೋಧಕರು ಭಾರತದಲ್ಲಿ ಗಾಳಿಯು ವಿಶ್ವಸಂಸ್ಥೆಯ ಮಾನದಂಡಕ್ಕಿಂತ ನಾಲ್ಕು ಪಟ್ಟು ಕೆಟ್ಟದಾಗಿದೆ ಎಂದಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಕಲುಷಿತ ಗಾಳಿಯು ಶೇ. 7.1ರಷ್ಟು ಗರ್ಭಪಾತಕ್ಕೆ ಕಾರಣವಾಗಿದೆ. ಭಾರತದ ಪ್ರಸ್ತುತ ವಾಯು ಗುಣಮಟ್ಟದ ಮಾನದಂಡವು ಘನ ಮೀಟರ್‌ಗೆ 40 ಮೈಕ್ರೋ ಗ್ರಾಂಗಳಷ್ಟಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯ ಪ್ರಕಾರ ಘನ ಮೀಟರ್‌ಗೆ 10 ಮೈಕ್ರೋ ಗ್ರಾಂ ಸುರಕ್ಷಿತವೆಂದು ಪರಿಗಣಿಸಲಾಗಿದೆ.

ಪರಿಣಾಮ ಹಲವು :

ಗರ್ಭಾವಸ್ಥೆಯಲ್ಲಿ ಮಹಿಳೆಯರು ಹೆಚ್ಚು ಜಾಗರೂಕರಾಗಿರಬೇಕು ಎನ್ನುತ್ತಾರೆ ತಜ್ಞರು. ವಾಯುಮಾಲಿನ್ಯ ಹುಟ್ಟಲಿರುವ ಮಗುವಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ತಾಯಿ ಏನು ತಿಂದರೂ ಅದು ನೇರವಾಗಿ ಮಗುವಿಗೆ ದೊರೆಯುತ್ತದೆ. ಗರ್ಭಿಣಿಯರು ಕಲುಷಿತ ಗಾಳಿಯನ್ನು ಉಸಿರಾಡುವುದರಿಂದ ಗರ್ಭದಲ್ಲಿ  ಬೆಳೆಯುತ್ತಿರುವ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಇದು ಪ್ರಬುದ್ಧ ಪೂರ್ವ ಪ್ರಸವದ ಅಪಾಯವನ್ನು ಸಹ ಹೊಂದಿದೆ. ಮಗು ಜನನದ ಸಮಯದಲ್ಲಿ ತೂಕವನ್ನು ಕಳೆದುಕೊಳ್ಳಬಹುದು ಮತ್ತು ಇದು ಅಪೌಷ್ಟಿಕತೆಗೆ ಕಾರಣವಾಗುತ್ತದೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.