![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 16, 2021, 6:20 AM IST
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ರಾಜ್ಯ ಬಿಜೆಪಿ ಯಲ್ಲಿ ಅಸಮಾಧಾನ ಸ್ಫೋಟ ಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಲು ಕೆಲವು ಅತೃಪ್ತರು ಮುಂದಾಗಿದ್ದಾರೆ. ಶಾ ಆಗಮನದ ಹಿನ್ನೆಲೆಯಲ್ಲಿ ವಿಶೇಷ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ರಾಜ್ಯದ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆಯಾಗಲಿದೆ.
ಶಾ 2 ದಿನಗಳ ರಾಜ್ಯದಲ್ಲಿರುತ್ತಾರೆ. ಶನಿವಾರ ಸಂಜೆ ವಿಧಾನಸೌಧದಲ್ಲಿ ಸರಕಾರಿ ಕಾರ್ಯಕ್ರಮದ ಬಳಿಕ ಖಾಸಗಿ ಹೊಟೇಲ್ನಲ್ಲಿ ವಾಸ್ತವ್ಯ ಹೂಡಲಿದ್ದು, ಅಲ್ಲಿಯೇ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ.
ಸಂಪುಟ ವಿಸ್ತರಣೆಯ ಬಳಿಕದ ಬೆಳವಣಿಗೆಗಳು, ವಿವಿಧ ಉಪ ಚುನಾವಣೆಗಳು, ಪಕ್ಷ ಸಂಘಟನೆ; ತಾಲೂಕು ಮತ್ತು ಜಿ.ಪಂ. ಚುನಾವಣೆಗಳಿಗೆ ಪಕ್ಷದ ಸಿದ್ಧತೆ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸಿಎಂ ಜತೆ ಪ್ರತ್ಯೇಕ ಸಭೆ :
ಶನಿವಾರ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಪೋಲಿಸ್ ಕ್ವಾರ್ಟರ್ಸ್ ಉದ್ಘಾಟನೆಯ ಬಳಿಕ ವಿಧಾನ ಸೌಧದ 3ನೇ ಮಹಡಿ ಯಲ್ಲಿ ರುವ ಸಿಎಂ ಕಚೇರಿಗೆ ತೆರಳಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಲು ಶಾ ತೀರ್ಮಾನಿಸಿದ್ದಾರೆ.
ಭದ್ರಾವತಿಗೆ ಅಮಿತ್ ಶಾ :
ಅಮಿತ್ ಶಾ ಅವರು ಜ. 16ರ ಅಪರಾಹ್ನ 1ಕ್ಕೆ ಭದ್ರಾವತಿಯಲ್ಲಿ ಆರ್ಎಎಫ್ ಪಡೆ ಕೇಂದ್ರದಲ್ಲಿ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 3.15ಕ್ಕೆ ಬೆಂಗಳೂರಿನ ಕಾರ್ಯ ಕ್ರಮ ಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜ. 17ರ ಬೆಳಗ್ಗೆ ಬೆಳಗಾವಿಗೆ ತೆರಳಿ ದಿನಪೂರ್ತಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.