ಬೇಗೂರು ಬಳಿ ಮಿತಿಮೀರಿದ ಕಾಡಾನೆ ದಾಳಿ


Team Udayavani, Jan 16, 2021, 12:48 PM IST

kadane

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿ ದ್ದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಹೊಸಪುರ ಸುತ್ತಮುತ್ತಲಿನ ಗ್ರಾಮಗಳ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಹುಲಿ ಯೋಜನೆಯ ಓಂಕಾರ್‌ ವಲಯದ ಕಾಡಂಚಿನಲ್ಲಿ ಕಂದಕಗಳು ಮುಚ್ಚಿ ಹೋಗಿದ್ದು , ಹೊಸ ಪುರದ ಶಿವಯ್ಯಗೌಡ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೋ ಬೆಳೆಯನ್ನು ಸಂಪೂರ್ಣ ನಾಶಪಡಿಸಿವೆ. ಇಲ್ಲಿಗೆ ಸಮೀಪದ ಮಹಾಲಿಂಗಪ್ಪ ಅವರ ಜಮೀನಿನಲ್ಲಿ ಅರಿಶಿಣ ಹಾಗೂ ಟೊಮೆಟೋ, ಮೂರ್ತಿ ಹಾಗೂ ದೇವಮ್ಮ ಅವರ ಜಮೀನಿನಲ್ಲಿ ಬೆಳೆದಿದ್ದ ಅರಿಶಿಣ ಬೆಳೆ ಗಳನ್ನು ನಾಶಪಡಿಸಿವೆ. ಈ ಬಗ್ಗೆ ಓಂಕಾರ್‌ ವಲಯದ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದರೂ ಇನ್ನೂ ಸ್ಥಳಕ್ಕೆ ಯಾವುದೇ ಸಿಬ್ಬಂದಿ ಭೇಟಿ ನೀಡಿಲ್ಲ ಎಂದು ರೈತರು ದೂರಿದ್ದಾರೆ.

ಇದನ್ನೂ ಓದಿ:KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ

ಗಸ್ತು ನಡೆಸಿ: ಕಂದಕಗಳು ಮುಚ್ಚಿಕೊಂಡಿರುವ ಪ್ರದೇಶ ಗಳಲ್ಲಿ ರಾತ್ರಿ ಗಸ್ತು ನಡೆಸುತ್ತಿಲ್ಲ. ರೈತರಿಗೆ ಪಟಾಕಿ ವಿತರಣೆ ಮಾಡುತ್ತಿಲ್ಲ. ಇದರಿಂದ ಆನೆಗಳ ಹಾವಳಿ ಮಿತಿ ಮೀರಿ ಹೋಗಿದೆ. ಬೆಳಗಾಗುತ್ತಿದ್ದಂತೆ ಗುಡ್ಡದ ಬದಿಗೆ ತೆರಳುವ ಆನೆಗಳು ರಾತ್ರಿಯಾಗುತ್ತಿದ್ದಂತೆ ಜಮೀನಿಗೆ ದಾಳಿ ಮಾಡು ತ್ತಿವೆ. ಜಮೀನುಗಳಿಗೆ ಆನೆಗಳು ಬಂದಿರುವ ಬಗ್ಗೆ ಕರೆ ಮಾಡಿದರೂ ಅರಣ್ಯ ಇಲಾಖೆಯವರು ಆನೆಗಳನ್ನು ಕಾಡಿ ಗಟ್ಟಲು ಮುಂದಾಗುತ್ತಿಲ್ಲ.

ಜಮೀನಿನಿಂದ ಓಡಿಸಲು ಮುಂದಾಗುವ ರೈತರ ಮೇಲೆಯೇ ಆನೆಗಳು ದಾಳಿ ಮಾಡಲು ಮುಂದಾಗುತ್ತಿದ್ದು ಇದರಿಂದ ರೈತರು ತಮ್ಮ ಬೆಳೆಗಳ ರಕ್ಷಣೆಗೆ ಕಾವಲು ನಡೆಸಲು ಹೆದರುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿ ದರೂ ಯಾವುದೇ ಉಪಯೋಗವಾಗುತ್ತಿಲ್ಲ. ಬೆಳೆನಷ್ಟಕ್ಕೆ ಅರಣ್ಯ ಇಲಾಖೆ ಪುಡಿಗಾಸಿನ ಪರಿಹಾರ ನೀಡುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದ್ದರಿಂದ ಇನ್ನಾದರೂ ಸಂಬಂಧಪಟ್ಟವರು ಆನೆಗಳ ದಾಳಿ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಹೊಸಪುರ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹದೇವೇಗೌಡ, ಮುಖಂಡ ಶಿವರುದ್ರಪ್ಪ ಮತ್ತಿತರ ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.