ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನೆರವು ನೀಡಿ


Team Udayavani, Jan 16, 2021, 6:17 PM IST

Provide assistance to Ayodhya Srirama Mandir

ಶಿರಹಟ್ಟಿ: ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಸ್ಥಾಪನೆಯಾಗಲಿರುವ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಸಕ್ತರು ತನು-ಮನ-ಧನ ಸಹಾಯ ಮಾಡಿ ಪುಣ್ಯಪ್ರಾಪ್ತಿ ಮಾಡಿಕೊಳ್ಳಬೇಕೆಂದು ಶಿರಹಟ್ಟಿಯ ಜ.ಫಕೀರೇಶ್ವರ ಸಂಸ್ಥಾನಮಠದ ಶ್ರೀ ಜ.ಫ.ಸಿದ್ದರಾಮ ಸ್ವಾಮೀಜಿ ಹೇಳಿದರು.

ಶುಕ್ರವಾರ ಶಿರಹಟ್ಟಿಯಲ್ಲಿ ವಿಶ್ವಹಿಂದೂ ಪರಿಷತ್‌ ವತಿಯಿಂದ ಆಯೋಜಿಸಿದ್ದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ  ಸಮರ್ಪಣಾ ಅಭಿಯಾನಕ್ಕೆ ಶ್ರೀ ಮರಿಯಮ್ಮದೇವಿ ದೇವಸ್ಥಾನದ ಬಳಿ ಚಾಲನೆ ನೀಡಿ, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀ ಹನುಮಂತ ದೇವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕತೃì ಶ್ರೀ ಜ.ಫಕೀರೇಶ್ವರರು ಸಾರಿದಂತಹ ದ್ವೇಷ ಬಿಡು-ಪ್ರೀತಿ ಮಾಡು ಎಂಬ ದಿವ್ಯ ಸಂದೇಶಕ್ಕನುಗುಣವಾಗಿ ಶ್ರೀರಾಮನೇ ಇರಲಿ, ರಹೀಮನೇ ಇರಲಿ ಎಲ್ಲರೂ ಒಂದೇ ಎಂಬ ಮನೋಭಾವವನ್ನು ಬೆಳೆಸುಕೊಳ್ಳಬೇಕು. ಶಿರಹಟ್ಟಿ ಕೋಮು ಭಾವೈಕ್ಯತೆಗೆ ಪ್ರಸಿದ್ಧಿ ಪಡೆದಿದೆ. ಆದ್ದರಿಂದ, ಇಂತಹ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ಶ್ರೀರಾಮ ಮಂದಿರ ನಿರ್ಮಾಣದ ಕಾರ್ಯ ಯಶಸ್ವಿಗೊಳಿಸಬೇಕೆಂದು ಹೇಳಿದರು.

ಇದನ್ನೂ ಓದಿ:ಗ್ರಾಮೀಣ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಜೊಲ್ಲೆ

ಬೆಳ್ಳಟ್ಟಿಯ ಶ್ರೀ ರಾಮಲಿಂಗೇಶ್ವರ ದಾಸೋಹಮಠದ ಬಸವರಾಜ ಸ್ವಾಮೀಜಿ ಮಾತನಾಡಿ, ವಿದೇಶಗಳಲ್ಲಿಯೂ ಶ್ರೀರಾಮನ ಸ್ಮರಣೆ ಮಾಡುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಶ್ರೀರಾಮನು ಕೂಡಾ ಮಹಾ ಶಿವಭಕ್ತನಾಗಿದ್ದ. ಅದಕ್ಕಾಗಿಯೇ ರಾಮೇಶ್ವರದಲ್ಲಿ ಜ್ಯೋತಿರ್ಲಿಂಗ ಸ್ಥಾಪನೆಯಾಗಿದೆ. ಜೊತೆಗೆ ನಮ್ಮ ಪಕ್ಕದಲ್ಲಿಯ ಸಂತೆ ಶಿಗ್ಲಿ, ಹುಬ್ಬಳ್ಳಿ, ರಾಣೆಬೆನ್ನೂರ, ಗುಲಬರ್ಗಾ ಮುಂತಾದ ಕಡೆಗಳಲ್ಲಿ ಲಿಂಗ ಸ್ಥಾಪನೆಯಾಗಿವೆ. ದೇಶದ ಬಹುಜನತೆ ಬಹಳ ವರ್ಷಗಳ ಕನಸು ಸಾಕಾರಗೊಳ್ಳುತ್ತಿದ್ದು, ಇಂತಹ ಭವ್ಯ ಮಂದಿರ ನಿರ್ಮಾಣಕ್ಕೆ ಎಲ್ಲರೂ ಧನಸಹಾಯ ಮಾಡಬೇಕು. ದೇವಸ್ಥಾನ ಮತ್ತು ಮಠಗಳ ಅಭಿವೃದ್ಧಿಗೂ ಮುಂದಾಗಬೇಕೆಂದರು. ವಿಹಿಪ ಪ್ರಾಂತ ಸಂಚಾಲಕ ವಿನಾಯಕ ತಳಗೇರಿ ಮಾತನಾಡಿದರು.

ನಟರಾಜ ರಾನಡೆ, ವೀರಣ್ಣ ಮಜ್ಜಗಿ, ಲಕ್ಷ್ಮಣ ಲಮಾಣಿ, ನಾಗರಾಜ ಕುಲಕರ್ಣಿ, ಫಕ್ಕೀರೇಶ ರಟ್ಟಿಹಳ್ಳಿ, ಬಿ.ಡಿ.ಪಲ್ಲೇದ, ಪ್ರವೀಣಗೌಡ ಪಾಟೀಲ, ರಾಜೀವರೆಡ್ಡಿ ಬಮ್ಮನಕಟ್ಟಿ, ಶರಣು ಚನ್ನೂರ, ಸಿದ್ರಾಮಪ್ಪ ಮೊರಬದ, ಸುರೇಶ ಅಕ್ಕಿ, ಯಲ್ಲಪ್ಪ ಇಂಗಳಗಿ, ರಾಜು ಹಲಗಲಿ, ನಾಗರಾಜ ಲಕ್ಕುಂಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.