![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 19, 2021, 5:30 AM IST
ಬೆಂಗಳೂರು: ಸುರೇಶ್ ರೈನಾ, ಭುವನೇಶ್ವರ್ ಕುಮಾರ್ ಮೊದಲಾದ ಅನುಭವಿ ಕ್ರಿಕೆಟಿಗರನ್ನು ಹೊಂದಿದ್ದ ಉತ್ತರಪ್ರದೇಶ ವಿರುದ್ಧದ “ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ’ ಟಿ20 ಪಂದ್ಯದಲ್ಲಿ ಕರ್ನಾಟಕ 5 ವಿಕೆಟ್ಗಳ ಅಮೋಘ ಗೆಲುವು ಸಾಧಿಸಿ ಲೀಗ್ ಹಣಾಹಣಿಯನ್ನು ಮುಗಿಸಿದೆ.
ಸೋಮವಾರ ಆಲೂರಿನ ಕೆಎಸ್ಸಿಎ (2) ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಉತ್ತರಪ್ರದೇಶ ಉತ್ತಮ ಆರಂಭದ ಹೊರತಾಗಿಯೂ 8 ವಿಕೆಟಿಗೆ 132 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿಯಿತು. ಜವಾಬು ನೀಡತೊಡಗಿದ ಕರುಣ್ ನಾಯರ್ ಪಡೆ 19.3 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿ ಜಯ ಸಾಧಿಸಿತು.
ಇದು “ಎಲೈಟ್ ಎ’ ವಿಭಾಗದಲ್ಲಿ ಕರ್ನಾಟಕಕ್ಕೆ 5 ಪಂದ್ಯಗಳಲ್ಲಿ ಒಲಿದ 4ನೇ ಗೆಲುವು. ಆದರೆ ಪಂಜಾಬ್ ಐದೂ ಪಂದ್ಯಗಳನ್ನು ಗೆದ್ದು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ನಾಟಕೀಯ ಕುಸಿತ :
ಅಭಿಷೇಕ್ ಗೋಸ್ವಾಮಿ (47) ಮತ್ತು ಕರಣ್ ಶರ್ಮ (41) ಯುಪಿಗೆ ಉತ್ತಮ ಆರಂಭ ಒದಗಿಸಿದರು. 8.2 ಓವರ್ಗಳಲ್ಲಿ 69 ರನ್ ಪೇರಿಸಿದರು. ಆದರೆ ಇಲ್ಲಿಂದ ಮುಂದೆ ಪ್ರವೀಣ್ ದುಬೆ ಮತ್ತು ಜಗದೀಶ್ ಸುಚಿತ್ ದಾಳಿಗೆ ಸಿಲುಕಿದ ಪ್ರಿಯಂ ಗರ್ಗ್ ಪಡೆ ನಾಟಕೀಯ ಕುಸಿತ ಕಂಡಿತು.
16.1 ಓವರ್ಗಳಲ್ಲಿ 5ಕ್ಕೆ 100 ರನ್ ಮಾಡಿದ ಕರ್ನಾಟಕವೂ ಅಪಾಯದ ಸ್ಥಿತಿಯಲ್ಲಿತ್ತು. ಆದರೆ ಶ್ರೇಯಸ್ ಗೋಪಾಲ್ 28 ಎಸೆತಗಳಿಂದ ಅಜೇಯ 47 ರನ್ ಬಾರಿಸಿ ಕರ್ನಾಟಕದ ಗೆಲುವನ್ನು ಸಾರಿದರು.
ಸಂಕ್ಷಿಪ್ತ ಸ್ಕೋರ್
ಉತ್ತರ ಪ್ರದೇಶ-8 ವಿಕೆಟಿಗೆ 132 (ಗೋಸ್ವಾಮಿ 47, ಕರಣ್ ಶರ್ಮ 41, ದುಬೆ 15ಕ್ಕೆ 3, ಸುಚಿತ್ 21ಕ್ಕೆ 3). ಕರ್ನಾಟಕ-19.3 ಓವರ್ಗಳಲ್ಲಿ 5 ವಿಕೆಟಿಗೆ 136 (ಶ್ರೇಯಸ್ ಗೋಪಾಲ್ ಔಟಾಗದೆ 47, ಪಡಿಕ್ಕಲ್ 34, ನಾಯರ್ 21, ಜೋಶಿ 21, ಕರಣ್ ಶರ್ಮ 23ಕ್ಕೆ 2).
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.