ಮೈಸೂರಿಗೆ ಬಂದು ಪಕ್ಷದಿಂದ ಹೊರಗೆ ಹಾಕುತ್ತೇನೆಂದು ಕುಮಾರಸ್ವಾಮಿ ಹೇಳಿದ್ದರು: ಜಿ.ಟಿ.ದೇವೇಗೌಡ
Team Udayavani, Jan 19, 2021, 2:30 PM IST
ಮೈಸೂರು: ಮೈಸೂರಿಗೆ ಬಂದು ಪಕ್ಷದಿಂದ ಹೊರಗೆ ಹಾಕುತ್ತೇನೆ ಅಂತ ಖುದ್ದು ಕುಮಾರಸ್ವಾಮಿ ಹೇಳಿದ್ದಾರೆ. ಅಂದರೆ ಎಲ್ಲವೂ ಮುಗಿಯಿತು ಎಂದರ್ಥ ಅಲ್ಲವೇ? ಈಗ ಸಂಘಟಕರ ಪಟ್ಟಿಯಬಗ್ಗೆ ಹೇಳುವುದಕ್ಕೆ ಏನಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಜೆಡಿಎಸ್ ಸಂಘಟಕರ ಪಟ್ಟಿಯಿಂದ ತಮಗೆ ಕೊಕ್ ನೀಡಿದ ವಿಚಾರವಾಗಿ ಮಾತನಾಡಿ, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ಏನೂ ನಡೆಯಲಿಲ್ಲ. ಈಗ ಕೇವಲ ಶಾಸಕ. ನನ್ನ ಮಾತು ಯಾರು ಕೇಳುತ್ತಾರೆ. ಎಲ್ಲವನ್ನೂ ಮೈಸೂರು ಹೈಕಮಾಂಡ್ ಹೇಳಿದಂತೆ ಮಾಡಿದ್ದಾರೆ ಎಂದು ಸಾ.ರಾ.ಮಹೇಶ್ ಗೆ ಟಾಂಗ್ ನೀಡಿದರು.
ಇದನ್ನೂ ಓದಿ:ಮಂಗಳೂರು ಗೋಲಿಬಾರ್ ಗೆ ಪ್ರತೀಕಾರ: ಪೊಲೀಸ್ ಸಿಬ್ಬಂದಿ ಕೊಲೆ ಯತ್ನದ ಹಿಂದೆ ‘ಮಾಯಾ ಗ್ಯಾಂಗ್’
ಕುಮಾರಸ್ವಾಮಿ ಮೈಸೂರಿಗೆ ಬರಲಿ, ಬಂದು ನನ್ನನ್ನು ಹೊರಗೆ ಹಾಕಲಿ. ಆ ಮೇಲೆ ಏನು ಮಾಡಬೇಕೆಂದು ನೋಡಿದರೆ ಆಯ್ತು ಎಂದರು.
ಸಾ.ರಾ.ಮಹೇಶ್ ಜಲದರ್ಶಿನಿ ಅತಿಥಿ ಗೃಹದಲ್ಲಿ ನನ್ನನ್ನು ಭೇಟಿ ಮಾಡಿದ್ದರು. ಜಿ.ಟಿ.ದೇವೇಗೌಡರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದರು. ಆದರೆ ಮೇಯರ್ ಚುನಾವಣೆ ಸಂಬಂಧ ಸಭೆ ನಡೆಸಿದಾಗ ನನ್ನನ್ನು ಒಂದು ಮಾತು ಕರೆಯಲಿಲ್ಲ. ಅವರವರೇ ಸಭೆ ಮಾಡಿಕೊಂಡರು ಎಂದು ಆರೋಪಿಸಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಅವರು ಜ್ಯೋತಿಷ್ಯ ಕಲಿಯುತ್ತಿರಬೇಕು: ವ್ಯಂಗ್ಯವಾಡಿದ ಸಚಿವ ಸೋಮಶೇಖರ್
ನನ್ನನ್ನು ಜೆಡಿಎಸ್ ನಿಂದ ದೂರ ಮಾಡಬೇಕು ಎಂಬ ಪಿತೂರಿ ಮೊದಲಿನಿಂದ ನಡೆಯುತ್ತಿದೆ. ಈಗ ರಾಜಕಾರಣ ಕಷ್ಟ. ನನಗೂ 75 ವರ್ಷ ವಯಸ್ಸಾಯ್ತು. ಇನ್ನೆರಡು ವರ್ಷ ಶಾಸಕನಾಗಿ ಇರುತ್ತೇನೆ. ಆ ಮೇಲೆ ಚುನಾವಣೆಗೆ ಸ್ಪರ್ಧಿಸಬೇಕೋ, ಬೇಡವೋ ಅಂತ ತೀರ್ಮಾನ ಮಾಡುತ್ತೇನೆ ಎಂದು ಜಿ.ಟಿ.ದೇವೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.