![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 21, 2021, 11:32 AM IST
ಚನ್ನಪಟ್ಟಣ: ಗಂಭೀರ ಹುದ್ದೆಯಲ್ಲಿರುವ ಕೃಷಿ ಸಚಿವರು ರೈತರ ಬಗ್ಗೆ ಲಘು ವಾಗಿ ಮಾತನಾಡುವುದನ್ನು ಬಿಡಬೇಕು. ಆತ್ಮಹತ್ಯೆ ಮಾಡಿಕೊಳ್ಳದ ವಾತಾವರಣ ನಿರ್ಮಿಸುವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹೇಳಿದರು.
ದುರ್ಬಲ ಮನಸ್ಸಿನಿಂದ ರೈತರು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದಾರೆ ಎಂಬ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ರೈತರ ಭೂಮಿಯಲ್ಲಿ ಬಂದು ಕಾಲ ಕಳೆಯುತ್ತೇನೆ ಎಂದು ಹೇಳಿ, ಇದನ್ನೇ ರಿಸರ್ಚ್ ಮಾಡಲು ಹೋಗಿದ್ದಾರಾ? ಎಂದು ಪ್ರಶ್ನಿಸಿದರು. ಕೃಷಿ ಸಚಿವರು ತಮ್ಮ ಇಲಾಖೆಯಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ ಯನ್ನು ಮೊದಲು ನಿಲ್ಲಿಸಲಿ, ಸಹಾಯಕ ಕೃಷಿ ನಿರ್ದೇಶಕರ ವರ್ಗಾವಣೆಗೆ ಹಣ ಕೇಳಿದರೆ ಅವರು ಎಲ್ಲರಿಂದ ಹಣ ತರುತ್ತಾರೆಂದರು.
ಇದನ್ನೂ ಓದಿ:ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರೈಲ್ವೆ ಹಳಿಮೇಲೆ ಎಸೆದು ಹೋದ ಆರೋಪಿಗಳು!
ಇಲ್ಲಿಂದಲೇ ಸ್ಪರ್ಧೆ:ಮುಂದಿನ ಚುನಾವಣೆಯಲ್ಲಿ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಿದ್ದರೆ, ಈ ಕ್ಷೇತ್ರದಲ್ಲಿ ಯಾಕೆ ಇಷ್ಟೊಂದು ಓಡಾಡಬೇಕಿತ್ತು, ಅನಿವಾರ್ಯ ಕಾರಣದಿಂದ ಚನ್ನಪಟ್ಟಣದಿಂದ ಸ್ಪರ್ಧಿಸಬೇಕಾಯಿತು. ಈಗಲೇ ಮುಂದುವರೆಯುವ ಅನಿವಾರ್ಯತೆ ನಿರ್ಮಾಣಗೊಂಡಿದೆ ಎಂದರು.
ಡಿಕೆಶಿ ಸ್ಪರ್ಧಿಸಿದರೆ ಸ್ವಾಗತ
ಮುಂದಿನ ವಿಧಾನಸಭಾ ಚುನಾವಣೆಗೆ ರಾಮ ನಗರದಿಂದ ಡಿ.ಕೆ.ಶಿವಕುಮಾರ್ ಸ್ಪರ್ಧಿ ಸುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ಡಿಕೆ, ವಿಶ್ವಾಸವೇ ಬೇರೆ ರಾಜ ಕಾರಣವೇ ಬೇರೆ, ರಾಮನಗರಕ್ಕೆ ಯಾರು ಬಂದು ಸ್ಪರ್ಧಿಸಿದರೂ ಸ್ವಾಗತ, ರಾಮನಗರ-ಚನ್ನಪಟ್ಟಣ ಎರಡೂ ಕ್ಷೇತ್ರಗಳು ನನ್ನ ಕಣ್ಣುಗಳಿದ್ದಂತೆ ನಾನು ಈ ಕಣ್ಣನ್ನು ಕಳೆದುಕೊಂಡು ಕುರುಡನಾಗುವುದಿಲ್ಲ ಎಂದರು. ಈ ಎರಡೂ ಕ್ಷೇತ್ರದ ಜನತೆ, ನನ್ನನ್ನು ಬೆಳೆಸಿದ್ದಾರೆ, ಯಾರನ್ನೋ ನಂಬಿ ಇವರು ಮನೆ ಮಗನಿಗೆ ಯಾವ ಕಾರಣಕ್ಕೂ ವಿಷ ಕೊಡುವುದಿಲ್ಲ. ರಾಮನಗರ- ಚನ್ನಪಟ್ಟಣವನ್ನು ಅವಳಿ ನಗರವಾಗಿ ಅಭಿವೃದ್ಧಿ ಪಡಿಸಿ, ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ನಗರಪಾಲಿಕೆ ಸ್ಥಾಪಿಸಿ ಸಮಗ್ರ ಅಭಿವೃದ್ಧಿ ಮಾಡಿಸುವುದೇ ನನ್ನ ಗುರಿ ಅಲ್ಲಿಯವರೆಗೆ ನಾನು ವಿರಮಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.