ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್


Team Udayavani, Jan 21, 2021, 7:11 PM IST

ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಆಡಳಿತ ಚುರುಕುಗೊಳಿಸಲು ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನೆ ವ್ಯಾಪ್ತಿಗೆ ತರಲು ಆಲೋಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ಸಮಗ್ರ ಶಿಕ್ಷಣ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಪಿಯು ಇಲಾಖೆಯಲ್ಲಿ ಸೇವಾ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಸಂಘಟನೆಗಳು ಸಚಿವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇಲಾಖೆಯ ಸೇವೆಗಳು  ಕ್ಷಿಪ್ರಗತಿಯಲ್ಲಿ ದೊರೆಯುವಂತಾಗಲು ಇಲಾಖೆಯ ಸೇವೆಗಳನ್ನು  ಸಕಾಲ ವ್ಯಾಪ್ತಿಗೆ ತರಲಾಗುತ್ತಿದೆ ಎಂದರು.

ಪಿಯು ಉಪನ್ಯಾಸಕರ ವಿವಿಧ ಬೇಡಿಕೆಗಳ ಕುರಿತು ಮಾತನಾಡಿದ ಸಚಿವರು, ಪದವಿ ಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆಗೆ ಈಗಾಗಲೇ ಇರುವ ಕಾಯ್ದೆಯಡಿ ನಿಯಮ ರೂಪಿಸುವ ಕೆಲಸ ಪ್ರಗತಿಯಲ್ಲಿದ್ದು, ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಕೈಗೆತ್ತಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ:ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ

ಸೇವಾ ವಿಷಯಗಳಲ್ಲಿನ ವಿಳಂಬ ನಿರ್ವಹಣೆಗೆ ಕಡತ ವಿಲೇವಾರಿಗೆ ಇ-ಕಚೇರಿ ಬಳಕೆ ಮತ್ತು ಅಧಿಕಾರ ವಿಕೇಂದ್ರೀಕರಣ ಮಾಡಿ ವಿಳಂಬವಿಲ್ಲದೇ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಕಡತಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಿಯು ನಿರ್ದೇಶಕರಿಗೆ ಸೂಚಿಸಿದರು.

ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚೆ:

2007 ರಿಂದೀಚೆಗೆ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಬಿ.ಇಡಿ., ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಹಾಲಿ ಸೇವೆಯಲ್ಲಿರುವ ಉಪನ್ಯಾಸಕರು ಬಿ.ಇಡಿ., ಪಡೆಯಬೇಕಿದ್ದು, ಅದರಲ್ಲಿ 2357 ಮಂದಿ ಅನುದಾನಿತ ಕಾಲೇಜುಗಳ ಉಪನ್ಯಾಸಕರು  ಬಿ.ಇಡಿ., ಪಡೆಯುವುದು ಬಾಕಿಯಿರುವ ಹಿನ್ನೆಲೆಯಲ್ಲಿ ಈ ಎಲ್ಲ ಉಪನ್ಯಾಸಕರು ಏಕ ಕಾಲದಲ್ಲಿ ಬಿ.ಇಡಿ., ಪಡೆಯಲು ಅನುವಾಗುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಒಂದು ಬಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚಿಸಿದ್ದೇನೆ  ಮತ್ತು ಉನ್ನತ ಶಿಕ್ಷಣ ಸಚಿವರೊಂದಿಗೆ ಈ ಸಂಬಂಧದಲ್ಲಿ ಚರ್ಚಿಸಲಾಗುವುದು ಎಂದರು.

ಕುಮಾರನಾಯ್ಕ ಸಮಿತಿ ಶಿಫಾರಸ್ಸಿನಂತೆ ಉನ್ನತ ಪದವಿ ಹೊಂದಿದ ಉಪನ್ಯಾಸಕರಿಗೆ ಬಡ್ತಿ ಸೇರಿದಂತೆ ವೇತನ ಬಡ್ತಿ ನೀಡಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ ಕಡತ ಮಂಡಿಸುವಂತೆ ಸೂಚನೆ ನೀಡಿದ ಸಚಿವರು, ಪದವಿ ಕಾಲೇಜುಗಳಿಗೆ ಬಡ್ತಿ ನೀಡುವ ಕುರಿತಂತೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಇದನ್ನೂ ಓದಿ: ‘ಪಠಾಣ್’ ಚಿತ್ರದ ಚಿತ್ರೀಕರಣದ ವೇಳೆ ನಿರ್ದೇಶಕರ ಮೇಲೆ ಹಲ್ಲೆ! ನಡೆದಿದ್ದೇನು?

ಬಿ.ಇಡಿ., ವಿನಾಯ್ತಿ:

ವೃತ್ತಿಶಿಕ್ಷಣ ಇಲಾಖೆಯಿಂದ ವಿಲೀನವಾಗಿರುವ ಪಿಯು ಉಪನ್ಯಾಸಕರು ಈಗಾಗಲೇ ನಿವೃತ್ತಿಗೆ ಸಮೀಪದಲ್ಲಿರುವುದು ಮತ್ತು ಅವರ ಅತಿ ಕಡಿಮೆ ಸಂಖ್ಯೆಯಲ್ಲಿರುವುದರಿಂದ ಅವರುಗಳಿಗೆ ಬಿ.ಇಡಿ., ಪದವಿ ಪಡೆಯುವುದರಿಂದ  ವಿನಾಯ್ತಿ ನೀಡಲು ಮತ್ತು ಖಾಯಂ ಪೂರ್ವ ಸೇವಾ ಅವಧಿ ಘೋಷಣೆ ಮಾಡಲು ಇಲಾಖೆಯಲ್ಲಿ ಅನುಕೂಲಕರವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಕೇವಲ 7 ವರ್ಷಕ್ಕಿಂತ ಕಡಿಮೆ ಸೇವೆ ಇರುವ ಜೆಒಸಿ ವಿಲೀನ ಉಪನ್ಯಾಸಕರಿಗೆ ಬಿ.ಇಡಿ., ವಿನಾಯ್ತಿ ನೀಡಲು ಪರಿಶೀಲಿಸಲಾಗುವುದು ಎಂದೂ ಸಚಿವರು ತಿಳಿಸಿದರು.

ಮೌಲ್ಯಮಾಪನ ಸಹಕಾರಕ್ಕೆ ಮನವಿ:

ಕೋವಿಡ್ ಸಾಂಕ್ರಾಮಿಕ ರೋಗದ ಪ್ರಸರಣದ ಹಿನ್ನೆಲೆಯಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳು ತಡವಾಗಿ ಆರಂಭವಾಗಿರುವುದರಿಂದ ಮಕ್ಕಳು ಪರೀಕ್ಷೆಯತ್ತ ಮುಖ ಮಾಡಿದ್ದು ಅಧ್ಯಯನದಲ್ಲಿ ತೊಡಗಿದ್ದಾರೆ. ನಿಗದಿತ ಅವಧಿಯಲ್ಲಿ ಪರೀಕ್ಷೆ ಆರಂಭವಾಗಲಿದ್ದು, ಈ ವಿಷಮ ಕಾಲಘಟ್ಟದಲ್ಲಿ ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವಿಷಯದಲ್ಲಿ ಹೆಚ್ಚಿನ ಸಹಕಾರ ನೀಡಬೇಕೆಂದು ಕೋರಿದರು. ಇಂತಹ ಕಾಲಘಟ್ಟದಲ್ಲಿ ನಾವು ನಮ್ಮ ಮಕ್ಕಳಲ್ಲಿ ವಿಶ್ವಾಸ ಮೂಡಿಸಬೇಕಾಗಿರುವುದರಿಂದ ಮೌಲ್ಯಮಾಪನ ಬಹಿಷ್ಕಾರ ಸೇರಿದಂತೆ ಯಾವುದೇ ಪ್ರತಿಭಟನೆಗಳಿಗೆ ಮುಂದಾಗಬಾರದೆಂದೂ ಸಚಿವರು ಮನವಿ ಮಾಡಿದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.