ರಾಷ್ಟ್ರಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆ : ಉಡುಪಿಯ ಐದರ ಬಾಲೆಗೆ ಪ್ರಥಮ ಸ್ಥಾನ


Team Udayavani, Jan 23, 2021, 8:15 AM IST

ರಾಷ್ಟ್ರಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆ : ಉಡುಪಿಯ ಐದರ ಬಾಲೆಗೆ ಪ್ರಥಮ ಸ್ಥಾನ

ಉಡುಪಿ: ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ. ಬೆಂಗಳೂರಿನಲ್ಲಿ ಇಸ್ಕಾನ್‌ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಮೂಲದ ಬೆಂಗಳೂರು ನಿವಾಸಿ ಗಹನಾ ಮಾನಸಿ ತನಗಿಂತ 10 ವರ್ಷ ಹಿರಿಯ ವಯಸ್ಸಿನ ವಿದ್ಯಾರ್ಥಿಗಳನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ಸ್ಪರ್ಧೆಯನ್ನು 6ರಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜಿಸ ಲಾಗಿತ್ತು. ವಿವಿಧ ರಾಜ್ಯಗಳ 370 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ ಗಹನಾ ಮಾನಸಿ (5 ವರ್ಷ 10 ತಿಂಗಳು) ಅತ್ಯಂತ ಕಿರಿಯ ವಯಸ್ಸಿನ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

ನಿರರ್ಗಳ :

ಸ್ಪರ್ಧೆಗೆ ಗೀತೆಯ 9ನೇ ಅಧ್ಯಾಯದ ಶ್ಲೋಕವೊಂದನ್ನು ನಿಗದಿಪಡಿಸ ಲಾಗಿತ್ತು. ಶ್ಲೋಕ ಪೂರ್ಣಗೊಳಿಸಲು ಸಮಯ ಮಿತಿ ನೀಡಿತ್ತು. ಗಹನಾ

ಯಾವುದೇ ತಡವರಿಕೆ ಇಲ್ಲದೆ 6 ನಿಮಿಷದಲ್ಲಿ ಪೂರ್ಣಗೊಳಿಸಿದ್ದಾಳೆ.

ಗಹನಾ ಮಾನಸಿ ಬೆಳ್ಳಂಪಳ್ಳಿ ನಿವಾಸಿ ಶ್ವೇತಾ ಮತ್ತು ಮಧುರ್‌ರಾಜ್‌ ಶೆಟ್ಟಿಗಾರ್‌ ದಂಪತಿಯ ಪುತ್ರಿ. ಬೆಳ್ಳಂಪಳ್ಳಿಯ ಉದಯವಾಣಿ ಏಜೆಂಟ್‌ ಸಾವಿತ್ರಿ ಸೀತಾರಾಮ್‌ ಶೆಟ್ಟಿಗಾರ್‌ ಅವರ ಮೊಮ್ಮಗಳು. ಬಾಲಕಿಯ ತಂದೆ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹನಾ ಬೆಂಗಳೂರಿನ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ಕಲಿಯುತ್ತಿದ್ದಾಳೆ. ಶೈಕ್ಷಣಿಕ ಸೇರಿದಂತೆ ಇತರ ಚಟುವಟಿಕೆಗಳಲ್ಲೂ ಮುಂದೆ ಇದ್ದಾಳೆ.

ಮನೆಯವರ ಸಂಸ್ಕಾರದಿಂದ ಗಹನಾ ಭಗವದ್ಗೀತೆಯನ್ನು ಯಾವುದೇ ಅಡಚಣೆಯಿಲ್ಲದೆ ಹೇಳುವಂತಾಗಿದೆ. ಮನೆ ಯಲ್ಲಿ ಸಂಜೆ ವೇಳೆ ಹೇಳುವ ಭಜನೆ, ಸಂಸ್ಕೃತ ಶ್ಲೋಕಗಳಿಗೆ ಧ್ವನಿ

ಗೂಡಿಸುತ್ತಾ ಭಗದ್ಗೀತೆಯ ಶ್ಲೋಕಗಳನ್ನು ಕಲಿಯುತ್ತಿದ್ದಾಳೆ. ಮನೆಗೆ ಸಂಸ್ಕೃತ ಶಿಕ್ಷಕರನ್ನು ಕರೆಸಿ ಸಂಸ್ಕೃತವನ್ನು ಕಲಿಸುತ್ತಿದ್ದಾರೆ. ಸ್ಪರ್ಧೆ 6 ವರ್ಷ ಮೇಲಿನ ಮಕ್ಕಳಿಗಾಗಿ ಆಯೋಜಿಸಿದ್ದರೂ  5 ವರ್ಷ 10 ತಿಂಗಳ ಗಹನಾಗೆ ಶ್ಲೋಕಗಳು ಕಂಠಸ್ಥವಾಗಿರುವ ಹಿನ್ನೆಲೆಯಲ್ಲಿ ಕಳುಹಿಸಿದೆವು. –ಸಾವಿತ್ರಿ ಸೀತಾರಾಮ ಶೆಟ್ಟಿಗಾರ್‌, ಬಾಲಕಿಯ ಅಜ್ಜಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.