ಪ್ರಾಥಮಿಕ ಶಾಲೆ ವಿದ್ಯಾರ್ಥಿಯ ಪರಿಸರ ಕಾಳಜಿ


Team Udayavani, Jan 26, 2021, 4:54 PM IST

ಪ್ರಾಥಮಿಕ ಶಾಲೆ ವಿದ್ಯಾರ್ಥಿಯ ಪರಿಸರ ಕಾಳಜಿ

ಲೋಕಾಪುರ: ಪರಿಸರ ರಕ್ಷಣೆ ಜವಾಬ್ದಾರಿಯನ್ನು ಪಟ್ಟಣದ ವೆಂಕಟೇಶನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವುದರ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾನೆ.

ಉತ್ತಮ ಪರಿಸರವಿಲ್ಲದೇ ಮನುಷ್ಯ ಬದುಕಲು ಸಾಧ್ಯವಿಲ್ಲ. ಪರಿಸರ ಉಳಿಸಿ-ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ 5ನೇ ತರಗತಿ ವಿದ್ಯಾರ್ಥಿ ಸುಜಿತ್‌ ಶ್ರೀಶೈಲ ಮಣ್ಣೂರ ಗಮನಸೆಳೆಯುವಂತಹ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾನೆ.
ವಿದ್ಯಾಗಮ ಯೋಜನೆ ಆರಂಭಗೊಂಡ ಬಳಿಕ ಸುಜಿತ್‌ ಪಠ್ಯದ ಜತೆಗೆ ಪರಿಸರ ಕಾಳಜಿ ಬೆಳೆಸಿಕೊಂಡು ಶಾಲಾ ಆವರಣದಲ್ಲಿ ಅಶೋಕ, ಬಾದಾಮ, ದಾಸವಾಳ, ಪೇಪರ್‌ ಪ್ಲಾವರ್‌, ಕಣಗಲಿ, ಮಲ್ಲಿಗೆ ಕಂಟಿ ಸೇರಿದಂತೆ 50 ಗಿಡಗಳ ಪಾಲನೆ ಮಾಡುತ್ತಿದ್ದಾನೆ. ಅನಗತ್ಯ ಕಾಲಹರಣ ಮಾಡುತ್ತಿರುವ ಇತರೆ ವಿದ್ಯಾರ್ಥಿಗಳಿಗೆ ಸುಜಿತ್‌ನ ಪರಿಸರ ಕಾಳಜಿ ಮಾದರಿಯಾಗಿದೆ. ಕಳೆದ ಒಂದು ವಾರದಿಂದ ಸುಜಿತ್‌ ಕಟ್ಟಿಗೆಯ ಎಳೆಯುವ ಗಾಡಿಯನ್ನು ತಯಾರಿಸಿ ಅದರಲ್ಲಿ ಮಣ್ಣಿನ ಚೀಲಗಳನ್ನು ಇಟ್ಟುಕೊಂಡು ಶಾಲೆ ಆವರಣದಲ್ಲಿರುವ ಸಸಿಗಳಿಗೆ ಮಣ್ಣು ಮತ್ತು ನೀರು ಹಾಕಿ ಸಸಿಗಳ ಪಾಲನೆ -ಪೋಷಣೆ ಮಾಡುತ್ತಿರುವುದು ವಿಶೇಷತೆಯಾಗಿದೆ.

ಶಾಲಾ ರಜೆ ಅವಧಿಯಲ್ಲಿ ಪಾಠದ ಅಭ್ಯಾಸದ ಜತೆ ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲೆ ಆವರಣ ಸುತ್ತಲು ಸಸಿ ಬೆಳೆಸಿ ರಕ್ಷಣೆ
ಮಾಡುವುದರಲ್ಲಿ ಶಿಕ್ಷಕರ ಮೆಚ್ಚುಗೆ ಪಡೆದು ಸೈ ಎನಿಸಿಕೊಂಡಿದ್ದಾನೆ. ಶಾಲೆಯ ಸುತ್ತಲು ಉತ್ತಮ ಪರಿಸರ ನಿರ್ಮಾಣ ಮಾಡಲು ಪಣ ತೊಟ್ಟಿರುವ ಸುಜಿತ್‌ನ ಜಾಣತನದ ದಿಟ್ಟ ಹೆಜ್ಜೆಯ ಕೆಲಸ ಕಾರ್ಯಗಳಿಗೆ ಶಿಕ್ಷಕ ಬಿ.ಜಿ. ಜೋಶಿ, ವೆಂಕಟೇಶ ನಗರದ ನಿವಾಸಿಗಳು ಹಾಗೂ ಶಿಕ್ಷಕವೃಂದ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

– ಸಲೀಮ ಐ. ಕೊಪ್ಪದ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.