ಗಣಿಗಾರಿಕೆಗೆ ಅನುಮತಿ ಕಡ್ಡಾಯ


Team Udayavani, Jan 28, 2021, 3:51 PM IST

Permission for mining is compulsory

ಕಾರವಾರ: ಕಲ್ಲುಕ್ವಾರಿ ಮಾಡುವವರಿಗೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಬಳಿ ಬ್ಲಾಸ್ಟಿಂಗ್‌ ಗೆ ಅನುಮತಿ ಪಡೆಯಲೇ ಬೇಕು. ಒಂದೊಮ್ಮೆ ಅನುಮತಿ ಪಡೆಯದೇ ಗಣಿಗಾರಿಕೆ ನಡೆಸಿದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಧಿಕಾರಿ ಡಾ| ಹರೀಶ ಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅನುಮತಿಯಿಲ್ಲ, ಒಂದೊಮ್ಮೆ ಅಕ್ರಮ ಗಣಿಗಾರಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಜಿಲೇಟಿನ್‌ ಸ್ಪೋಟದ ನಂತರ ಜಿಲ್ಲೆಯಲ್ಲೂ ಗಣಿಗಾರಿಕೆ ಮೇಲೆ ಕಣ್ಣಿಡಲಾಗಿದೆ. ಈಗಾಗಲೇ ಅಧಿಕಾರಿಗಳ ತಂಡ ರಚಿಸಿದ್ದು, ಎಲ್ಲಾ ಗಣಿಗಾರಿಕೆ ನಡೆಯುವ ಸ್ಥಳಕ್ಕೆ ಭೇಟಿನೀಡಿ ಅನುಮತಿಯನ್ನ ಮತ್ತೂಮ್ಮೆ  ಪರಿಶೀಲಿಸಲಾಗುವುದು. ಎಲ್ಲೇ ಗಣಿಗಾರಿಕೆ ಮಾಡುವ ಸ್ಥಳದಲ್ಲಿ ಜಿಲ್ಲಾಧಿಕಾರಿಗಳಿಂದ ಬ್ಲಾಸ್ಟಿಂಗ್‌ ಅನುಮತಿ ಪಡೆಯಲೇ ಬೇಕು. ಬ್ಲಾಸ್ಟಿಂಗ್‌ ಅನುಮತಿ ಪಡೆದ ನಂತರವೂ ಸ್ಫೋಟವನ್ನು ಪರಿಣಿತ ತಂಡದಿಂದಲೇ ಮಾಡಿಸಬೇಕು. ಕೆಲವರು ಅನುಭವ ಇಲ್ಲದೇ ಕೆಲವರನ್ನ ಬಳಸಿಕೊಂಡು ಸ್ಫೋಟ ಮಾಡುವ ಬಗ್ಗೆ ತಿಳಿದಿದ್ದು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ. ಪೊಲೀಸರ ತಂಡವನ್ನ ಸಹ ಅಕ್ರಮ ಗಣಿಗಾರಿಕೆ ತಡೆಯಲು ಮಾಡಿದ್ದು, ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಜಿಲ್ಲಾಡಳಿತ ಹದ್ದಿನ ಕಣ್ಣನ್ನ ಇಟ್ಟಿದೆ ಎಂದಿದ್ದಾರೆ.

ಪ್ರವಾಸಿಗರನ್ನು ರಕ್ಷಿಸಿ: ಜಿಲ್ಲೆಯ ಕಡಲ ತೀರದಲ್ಲಿ ಈಗಾಗಲೇ ಪ್ರವಾಸಿಗರ ರಕ್ಷಣೆಗೆ ಲೈಫ್‌ ಗಾರ್ಡ್‌ಗಳನ್ನ ನೇಮಿಸಲಾಗಿದೆ. ಸುರಕ್ಷಿತವಲ್ಲದ ಪ್ರದೇಶದಲ್ಲಿ ಸೂಚನಾ ಫಲಕಗಳನ್ನ ಸಹ ಹಾಕಲಾಗಿದೆ. ಇಷ್ಟಾದರು ಕೆಲವರು ಅತಿರೇಕ ವರ್ತನೆ ತೋರಿ ಸಮುದ್ರದಲ್ಲಿ ಮುಂದೆ ಸಾಗಿ ಈಜಲು ಹೋಗಿ ಅವಘಡಕ್ಕೆ ಸಿಲುಕುತ್ತಾರೆ. ಮುಂದಿನ ದಿನದಲ್ಲಿ ಲೈಫ್‌ಗಾರ್ಡ್‌ಗಳು ಮುಳುಗುತ್ತಿದ್ದ ಪ್ರವಾಸಿಗರನ್ನ ರಕ್ಷಣೆ ಮಾಡಿ ನಂತರ ವಿಷಯವನ್ನ ಪೊಲೀಸರ ಗಮನಕ್ಕೆ ತರುತ್ತಾರೆ. ಪೊಲೀಸರು ಅಂತವರ ಮೇಲೆ ಪ್ರಕರಣ ದಾಖಲಿಸುವ ಚಿಂತನೆ ನಡೆಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಡಲತೀರದಲ್ಲಿ ಯಾವುದೇ ಅವಘಡ ಆದರು ಪ್ರವಾಸಿಗರ ನಿರ್ಲಕ್ಷವೇ ಪ್ರಮುಖ ಕಾರಣ, ಆಳವಾದ ಪ್ರದೇಶಕ್ಕೆ ಹೋಗದೇ ದಡದಲ್ಲಿ ಆಟವಾಡಿ ತೆರಳಿದರೆ ಯಾವ ಅನಾಹುತ ಆಗುವುದಿಲ್ಲ. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದ ಮುಂದಿನ ದಿನದಲ್ಲಿ ಕೇಸ್‌ ದಾಖಲು ಮಾಡುವ ಚಿಂತನೆ ನಡೆಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ

ಹೋಂ ಸ್ಟೇ ವಿರುದ್ಧ ಕ್ರಮ: ಜಿಲ್ಲೆಯಲ್ಲಿ ಈಗಾಗಲೇ ಹೋಂ ಸ್ಟೇಗಳ ಸಂಖ್ಯೆ ಅಧಿಕವಾಗಿದೆ ಎನ್ನುವ ದೂರು ಕೇಳಿ ಬಂದಿದೆ. ಹೋಂ ಸ್ಟೇ ಅಂದರೆ ಆ ಹೋಂ ಸ್ಟೇನಲ್ಲಿ ಮನೆಯ ಮಾಲಿಕರುತಂಗಬೇಕು ಎನ್ನುವ ಆದೇಶವಿದೆ. ಆದರೆ ಕೆಲವರು ಹೋಂ ಸ್ಟೇ ಎಂದು ಅನುಮತಿ ಪಡೆದು ರೆಸಾರ್ಟ್‌ಗಳನ್ನ ಮಾಡಿಕೊಂಡಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು

ಜಿಲ್ಲಾಧಿಕಾರಿ ತಿಳಿಸಿದ್ದಾರೆ. ತೆರಿಗೆ ವಂಚನೆ ಮಾಡಲು ರೆಸಾರ್ಟ್‌ ಎಂದು ಅನುಮತಿ ಪಡೆಯದೇ ಹೋಂಸ್ಟೇಗಳೆಂದು ಅನುಮತಿ ಪಡೆದು ರೆಸಾರ್ಟ್‌ ನಡೆಸುತ್ತಾರೆ. ಇಂತಹ ಸ್ಥಳದಲ್ಲಿ ಪ್ರವಾಸಿಗರ ಸುರಕ್ಷತೆ ಸಹ ಇರುವುದಿಲ್ಲ. ಈ ಕೂಡಲೇ ಮಾಲಿಕರು ಇರದ ಹೋಂ ಸ್ಟೇಗಳು ರೆಸಾರ್ಟ್‌ಗಳೆಂದು ಅನುಮತಿ ಪಡೆದುಕೊಳ್ಳಲಿ. ಇಲ್ಲವಾದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.