ಶಿವಮೊಗ್ಗ ಸ್ಪೋಟ ನ್ಯಾಯಾಂಗ ತನಿಖೆಗೊಪ್ಪಿಸಿ

ರಾಜಕೀಯ ನಾಯಕರ ಶ್ರೀರಕ್ಷೆಯಿಂದ ಅಕ್ರಮ ಕಲ್ಲು ಗಣಿಗಾರಿಕೆ

Team Udayavani, Jan 28, 2021, 6:45 PM IST

28-35

ಶಿವಮೊಗ್ಗ: ಕಲ್ಲಗಂಗೂರಿನ ಸ್ಪೋಟ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಅಲ್ಲದೇ, ಆ ಬಗ್ಗೆ ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಮಾತ್ರ ಸತ್ಯ ಹೊರಗೆ ಬರಲು ಸಾಧ್ಯ. ಈ ವಿಷಯವನ್ನು ವಿಧಾನಸಭೆ ಅ ಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಲಗಂಗೂರಿನ ಸರ್ವೇ ನಂ.2ರ ಪಟ್ಟ ಜಮೀನಿನಲ್ಲಿ ಕ್ರಷರ್‌ ನಡೆಯುತ್ತಿದೆ. ಅದು ಕುಲಕರ್ಣಿ ಎನ್ನುವವರಿಗೆ ಸೇರಿದ್ದು, ಸುಧಾಕರ್‌ ಎಂಬುವರು ಲೀಸ್‌ ಗೆ ಪಡೆದು ಕ್ರಷರ್‌ ನಡೆಸುತ್ತಿದ್ದಾರೆ. 2019ರ ಏ.12ರಂದು ಲೈಸೆನ್ಸ್‌ ಪಡೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಸ್ಫೋಟ ನಡೆದದ್ದು ಜ.21ರಂದು. ಅದು ಹೇಗೆ ಆಗಿದೆ ಎಂದು ಈವರೆಗೆ ಅಧಿಕಾರಿಗಳಿಗೆ ಗೊತ್ತಿಲ್ಲ.

ಪೊಲೀಸರು ಜಿಲೆಟಿನ್‌ ಆಂಧ್ರದಿಂದ ಇಲ್ಲಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಸ್ಪೋಟಕಗಳನ್ನು ಮಾರಾಟ ಮಾಡಲು ಲೈಸೆನ್ಸ್‌ ಇರಬೇಕು. ಸ್ಪೋಟಕ ತರಿಸಿಕೊಂಡ ಸುಧಾಕರ್‌ ಕಂದಾಯ ಅಧಿ ಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿ ಕಾರಿಗಳಿಗೆ ಹಾಗೂ ಪೊಲೀಸರಿಗೂ ಮಾಹಿತಿ ಕೊಟ್ಟಿಲ್ಲ. ಅಷ್ಟೊಂದು ಬೃಹತ್‌ ಪ್ರಮಾಣದ ಸ್ಪೋಟಕ ತರುವುದರ ಹಿಂದಿನ ಉದ್ದೇಶವೇನು? ಈ ಬಗ್ಗೆ ಯಾರಿಗೂ ಸರಿಯಾದ ಮಾಹಿತಿ ಇಲ್ಲ ಎಂದರು.

ಕಲ್ಲಗಂಗೂರಿನಲ್ಲಿ ಅಧಿ ಕಾರಿಗಳು ಹೇಳುವಂತೆ, ಕಳೆದ ಐದಾರು ವರ್ಷಗಳಿಂದ ಅಕ್ರಮವಾಗಿ ಕ್ವಾರಿ, ಕ್ರಷರ್‌ ನಡೆಯುತ್ತಿವೆ. ಆದರೆ, ಅಲ್ಲಿಯ ಜನರನ್ನು ವಿಚಾರಿಸಿದಾಗ 15-20 ವರ್ಷಗಳಿಂದ ನಡೆಯುತ್ತಿವುದಾಗಿ ಹೇಳಿದ್ದಾರೆ. ಸ್ಪೋಟಗೊಂಡ ಕ್ವಾರಿ ಪಕ್ಕವೇ ಒಂದು ಅಕ್ರಮ ಕ್ವಾರಿ ಇದೆ ಎಂದು ಅ ಧಿಕಾರಿಗಳು ತಿಳಿಸಿದ್ದಾರೆ. ಐದಾರು ವರ್ಷ ದಿಂದ ನಡೆಯುತ್ತಿರಬಹುದು ಎಂದು ಹೇಳಿ ದ್ದಾರೆ.

ಆ ಜಾಗ ನೋಡಿದರೆ ಅದು ಇಪ್ಪತ್ತು ವರ್ಷದಿಂದ ನಡೆಯುತ್ತಿರಬಹುದು. ಅದು ಅಕ್ರಮ ಎಂದು ಗೊತ್ತಿದ್ದರೂ ಏಕೆ ತಡೆದಿಲ್ಲ. ಅಂತಹ ಕ್ರಷರ್‌ ಮತ್ತು ಕ್ವಾರಿ ಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸ ಲಾಗುತ್ತಿದೆಯೇ ವಿನಃ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ. ರಾಜಕೀಯ ವ್ಯಕ್ತಿಗಳ ಪ್ರಭಾವ ವಿಲ್ಲದೇ ಇಷ್ಟೊಂದು ರಾಜಾರೋಷವಾಗಿ ಗಣಿಗಾರಿಕೆ ನಡೆಸಲು ಸಾಧ್ಯವೇ ಇಲ್ಲ. ನನಗೆ ಲಭ್ಯ ಮಾಹಿತಿ ಪ್ರಕಾರ, ಆಡಳಿತರೂಢ ಪಕ್ಷದ ಕ್ವಾರಿಗಳೇ ಅಧಿ ಕ ಸಂಖ್ಯೆಯಲ್ಲಿವೆ ಎಂದು ಆರೋಪಿಸಿದರು.

ಘಟನೆ ನಡೆದು ಇಷ್ಟು ದಿನಗಳಾಗಿದ್ದು, ಜಿಲ್ಲಾ ಧಿಕಾರಿಗಳು ನಾಳೆಯಿಂದ ಗಣಿಗಾರಿ ಕೆಗಳ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿ ಗಣಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊ ಳ್ಳಬೇಕು. ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿರುವುದಾಗಿ ಆರೋಪಗಳು ಕೇಳಿಬರುತ್ತಿವೆ. ಪ್ರಕರಣದ ಸತ್ಯ ಹೊರ ಬರಬೇಕು. ಜತೆಗೆ, ಬೇನಾಮಿ ಗಣಿಗಾರಿಕೆಗಳ
ಕುರಿತ ಅಂಶಗಳು ಗೊತ್ತಾಗಬೇಕು ಎಂದರು.

ಓದಿ : “ಮಕ್ಕಳಿಗ್ಯಾಕವ್ವ ಮದುವೆ’ ಬೀದಿ ನಾಟಕ ಪ್ರದರ್ಶನ

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.