ಬರಗೂರು-ಮದಲೂರು ರಸ್ತೆ ಕಾಮಗಾರಿ ಆರಂಭ

ಉದಯವಾಣಿ ವರದಿಗೆ ಸ್ಪಂದಿಸಿದ ಮುಖ್ಯ ಎಂಜಿನಿಯರ್ ‌ವೀರಭದ್ರಪ್ಪ

Team Udayavani, Jan 31, 2021, 5:39 PM IST

Baragoor-Madalur road works start

ಬರಗೂರು: ಬರಗೂರು ಮಾರ್ಗವಾಗಿ ಮದಲೂರು ವರೆಗಿನ ಡಾಂಬರೀಕರಣ ರಸ್ತೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲದಿರುವುದು ನಮ್ಮ ಗಮನಕ್ಕೆ ಬಂದಿದ್ದು ಇನ್ನು ನಾಲ್ಕೆçದು ದಿನಗಳಲ್ಲಿ ಕೆಲಸ ಪ್ರಾರಂಭಿಸಿ ತುರ್ತಾಗಿ ಕಾಮಗಾರಿ ಮುಗಿಸುವಂತೆ ಬೆಂಗಳೂರು ಎಸ್‌ಎಸ್‌ಡಿಪಿ ಚೀಫ್ ಎಂಜಿನಿಯರ್‌ ವೀರಭದ್ರಪ್ಪ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಶಿರಾ ತಾಲೂಕು ಬರಗೂರಿನಿಂದ ಮದಲೂರು ಮಾರ್ಗವಾಗಿ ಕೈಗೊಂಡಿರುವ ಸುಮಾರು 17.7 ಕೋಟಿ ರೂ. ವೆಚ್ಚದ ಕಾಮಗಾರಿ ಕುಂಟಿತಗೊಂಡು ಸಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ರಸ್ತೆ ಕಾಮಗಾರಿ ಕುಂಟಿತಗೊಂಡಿರುವ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು.
ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳಿಗೆ ಕನ್ನಡ ಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ದೂರವಾಣಿ ಕರೆ ಮಾಡಿ ದೂರು ನೀಡಿರುವುದು ನಮ್ಮ ಗಮನಕ್ಕೆ ಬಂದ ಕಾರಣ ರಸ್ತೆ ಕಾಮಗಾರಿ ಸ್ಥಳ ಪರಿಶೀಲಿಸಿಲಾಗಿದೆ.

2020ರ ಜನವರಿ ಯಲ್ಲಿ ಈ ಕಾಮಗಾರಿ ಪ್ರಾರಂಭವಾಗಿತ್ತು. ಕೊರೊನಾ ಸೇರಿದಂತೆ ಹಲವು ಸಮಸ್ಯೆ ಗಳಿಂದ ಕಾಮಗಾರಿಗೆ ಅಡ್ಡಿಯಾಗಿತ್ತು. ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಕುಂಟಿತಗೊಂಡಿದೆ. ರಸ್ತೆ ಕಾಮಗಾರಿಯಲ್ಲಿ ಇನ್ನೂ ಹಲವು ಲೋಪಗಳಿದ್ದು ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭಿಸಿ ಕಾಮಗಾರಿ ತುರ್ತಾಗಿ ಪೂರ್ಣಗೊಳಿ ಸಲಾಗುವುದೆಂದು ತಿಳಿಸಿದರು.

ಇದನ್ನೂ ಓದಿ:ಸುರಕ್ಷತೆಗಾಗಿ ಹೆಲ್ಮೆಟ್‌ಕಡ್ಡಾಯ: ಶಿವಮೂರ್ತಿ

ಬೆಂಗಳೂರು ಎಸ್‌ಎಸ್‌ಡಿಪಿ ಸಹಾಯಕ ಎಂಜಿನಿಯರ್‌ ಶ್ರೀನಿವಾಸ್‌, ಮಧುಗಿರಿ ಲೋಕೋಪ ಯೋಗಿ ಇಲಾಖೆ ಎಂಜಿನಿಯರ್‌ ಪ್ರಕಾಶ್‌, ಶಿರಾ ಲೋಕೋಪಯೋಗಿ ಇಲಾಖೆ ಉಪವಿಭಾಗದ ಎಇಇ ಮಲ್ಲೇಶ್‌, ಸಹಾಯಕ ಎಂಜಿನಿಯರ್‌ ಗೋವಿಂದಪ್ಪ, ಸ್ವಾಮಿ ನಾಯಕ್‌, ಗುತ್ತಿಗೆದಾರ ಪರವಾಗಿ ಸಂತೋಷ್‌ ಇತರರು ಇದ್ದರು

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.