ಗದಗ ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಶ


Team Udayavani, Feb 1, 2021, 1:58 PM IST

Modern touches to Gadag railway station

ಗದಗ: ಈಗಾಗಲೇ ಗದಗ ಜಿಲ್ಲೆ ಬಿಂಕದಕಟ್ಟಿ ಮೃಗಾಲಯ, ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ಹಾಗೂ ಭೀಷ್ಮ ಕೆರೆ ಆವರಣದಲ್ಲಿರುವ 111 ಅಡಿ ಮುಗಿಲೆತ್ತರದ ಬಸವೇಶ್ವರ ಮೂರ್ತಿಯಿಂದಾಗಿ ಪ್ರವಾಸಿಗರನ್ನು ಸೆಳೆಯುತ್ತಿದೆ. ಇನ್ನು ಈ ಸಾಲಿಗೆ ಇದೀಗ ಗದಗ ರೈಲ್ವೆ ನಿಲ್ದಾಣ ಹೊಸದಾಗಿ ಸೇರ್ಪಡೆಯಾಗಿದೆ. ಗದಗ ಜಂಕ್ಷನ್‌ನಲ್ಲಿ ಇತ್ತೀಚೆಗೆ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ.

ಅದರೊಂದಿಗೆ ರೈಲ್ವೆ ಇಲಾಖೆ ಕಾರ್ಯವೈಖರಿ ಸಾರುವ ಪ್ರಾತ್ಯಕ್ಷಿಕೆ, ಕಿರು ಉದ್ಯಾನ ಹಾಗೂ ವರ್ಣರಂಜಿತ ವನ್ಯಜೀವಿಗಳಚಿತ್ರಗಳು ನೋಡುಗರ ಕಣ್ಮನ ಸೆಳೆಯುತ್ತವೆ.  ಗದಗ ರೈಲ್ವೆ ನಿಲ್ದಾಣದ ಮೊದಲನೇ ಪ್ಲಾಟ್‌ ಫಾರಂಗೆ ಹೊಂದಿಕೊಂಡಂತೆ ಸುಮಾರು ಮೂರು ಗುಂಟೆ ಜಾಗೆಯಲ್ಲಿ ಅತ್ಯಾಕರ್ಷಕವಾಗಿ ಕಿರು ಉದ್ಯಾನ ನಿರ್ಮಿಸಲಾಗಿದೆ.

ಉದ್ಯಾನದಲ್ಲಿ ಸ್ವರ ಮಾಂತ್ರಿಕ ಪಂ| ಭೀಮಸೇನ್‌ ಜೋಶಿ ಅವರ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ. ಅದರ ಹಿಂಭಾಗದ ಗೋಡೆಯಲ್ಲಿ ಪಂ| ಪುಟ್ಟರಾಜ ಕವಿ ಗವಾಯಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು, ಸಂಗೀತ ಪರಿಕರ ಚಿತ್ರಿಸಲಾಗಿದೆ. ಈ ಮೂಲಕ ಸಂಗೀತ ಲೋಕಕ್ಕೆ ಗದಗಿನ ಕೊಡುಗೆ ಸಾರುವ ಪ್ರಯತ್ನ ಮಾಡಲಾಗಿದೆ.

ಜೊತೆಗೆ ಪ್ರಯಾಣಿಕರು ಕೂರಲು ಹುಲ್ಲಿನ ಹಾಸಿಗೆ, ಹೂವಿನ ಗಿಡಗಳು, ರಾತ್ರಿ ವೇಳೆ ಇಲ್ಲಿನ ಪರಿಸರದ ಅಂದ ಹೆಚ್ಚಿಸಲು ಹೊಸ ಮಾದರಿಯ ವಿದ್ಯುತ್‌ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ರೈಲ್ವೆ ಹಳಿಗೆ ಬಳಸಿದ ಹಳೆಯ ಕಟ್ಟಿಗೆಗಳಿಂದ ನಿಲ್ಲಿಸಿ, ರೈಲ್ವೆ ಲಾಂಚನ ನಿರ್ಮಿಸಿರುವುದು ಸೆಲ್ಫಿ ಸ್ಪಾಟ್‌ ಆಗಿ ಪರಿವರ್ತಿಸಲಾಗಿದೆ.

ಇದನ್ನೂ ಓದಿ:ಚರ್ಚೆಗೆ ಕಾರಣವಾದ ಅರವಿಂದ ಪಾಟೀಲ ಮೌನ

ಪ್ರಮುಖ ಆಕರ್ಷಣೆ

ರೈಲ್ವೆ ಇಲಾಖೆ ಕಾರ್ಯವೈಖರಿ ಸಾರು ರೈಲ್ವೆ ಪ್ರಾತ್ಯಕ್ಷಿಕೆ ಗದಗ ನಿಲ್ದಾಣದ ಪ್ರಮುಖ ಆಕರ್ಷಣೆಯಾಗಿದೆ. ಸುಮಾರು 5×3 ಅಡಿ ವಿಸ್ತ್ರೀರ್ಣದಲ್ಲಿ ಅಚ್ಚುಕಟ್ಟಾದ ಪ್ರಾತ್ಯಕ್ಷಿಕೆ ನಿರ್ಮಿಸಲಾಗಿದೆ. ಒಂದು ನಿಲ್ದಾಣದಿಂದ ಮತ್ತೂಂದು ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹಳಿಗಳು, ಪುಟ್ಟ ರೈಲು, ಸುಸ್ಸಜ್ಜಿತ ನಿಲ್ದಾಣ, ರೈಲ್ವೆ ಹಳಿಗಳನ್ನು ಸಂಧಿಸುವ ರಸ್ತೆ, ರೈಲ್ವೆ ಗೇಟ್‌, ಬೆಟ್ಟಗುಡ್ಡ, ಅರಣ್ಯದಲ್ಲಿ ಸ್ವತ್ಛಂದವಾಗಿ ವಿಹರಿಸುವ ವನ್ಯಜೀವಿಗಳ ಆಟಿಕೆಗಳಿಂದ ಆಕರ್ಷಣೀಯವಾಗಿ ಪ್ರಾತ್ಯಕ್ಷಿಕೆ ನಿರ್ಮಿಸಲಾಗಿದೆ. ರೈಲ್ವೆ ಇಲಾಖೆ ಕಾರ್ಯಕ್ಷಮತೆ ಹಾಗೂ ಪ್ರಯಾಣಿಕರ ಜವಾಬ್ದಾರಿಯನ್ನೂ ಮನವರಿಕೆ ಮಾಡಿಕೊಡುವುದು ಇದರ ಉದ್ದೇಶ ಎನ್ನುತ್ತಾರೆ ಇಲಾಖೆ ಅಧಿ ಕಾರಿಗಳು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.