ಕಿರುಕುಳ ನೀಡುತ್ತಿ ದೆ ಕಾಡಾನೆ ಅಭಯಾರಣ್ಯಕ್ಕಟ್ಟುವಲ್ಲಿ ಯಶಸ್ವಿ

ಸಕ್ರೆಬೈಲು ಆನೆ ಬಿಡಾರದ 12, ಅರಣ್ಯ ಇಲಾಖೆಯ 25 ಸಿಬ್ಬಂದಿ ಕಾರ್ಯಾಚರಣೆ

Team Udayavani, Feb 5, 2021, 6:26 PM IST

5-19

ಶಿವಮೊಗ್ಗ: ಉಂಬ್ಳೆಬೈಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟು ಗ್ರಾಮಸ್ಥರಿಗೆ ಕಿರುಕುಳ ನೀಡುತ್ತಿದ್ದ ಕಾಡಾನೆಗಳನ್ನು ಭದ್ರಾ ಅಭಯಾರಣ್ಯದೊಳಗೆ ಓಡಿಸಲು ಅರಣ್ಯ ಇಲಾಖೆ ಹಾಗೂ ಸಕ್ರೆಬೈಲು ಆನೆ ಬಿಡಾರದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಉಂಬ್ಳೆಬೈಲು ಭಾಗದ ಹಾಲ್‌ಲಕ್ಕವಳ್ಳಿ ಪ್ರದೇಶದಲ್ಲಿ ಆನೆಗಳು ಬೀಡುಬಿಟ್ಟಿದ್ದವು. ಬುಧವಾರ ಉಂಬ್ಳೆಬೈಲು, ಕೈದೊಟ್ಲು ನಡುವಿನ ರಸ್ತೆ ಮೂಲಕ ಚೆಕ್‌ಪೋಸ್ಟ್‌ ಮತ್ತು ಕಾಕನಹಸೂಡಿ ರಸ್ತೆ ನಡುವೆ ಎನ್‌.ಆರ್‌. ಪುರ ರಸ್ತೆ ದಾಟಿಸಿ ಭದ್ರಾ ಅಭಯಾರಣ್ಯ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ಬೆಳಗ್ಗೆಯಿಂದ ಅಭಯಾರಣ್ಯದ ದಟ್ಟ ಕಾಡಿನೊಳಗೆ ಸೇರಿಸಿದ್ದು ಮತ್ತೆ ವಾಪಾಸ್‌ ಬರದಂತೆ ಕಾಕನಹಸೂಡಿ ಬಳಿ ತಾತ್ಕಾಲಿಕವಾಗಿ ಬೀಡು ಬಿಡಲಾಗಿದೆ. ಬುಧವಾರ ಯಾವುದೇ ಆನೆಗಳನ್ನು ಬಳಸದೇ ಸಿಬ್ಬಂದಿ ಮೂಲಕವೇ ಹಿಮ್ಮೆಟಿಸಲಾಗಿತ್ತು. ಗುರುವಾರ ಸಕ್ರೆಬೈಲು ಆನೆಗಳನ್ನು ಗಡಿಯಲ್ಲಿ ಇರಿಸಲಾಗಿದೆ. ಸಕ್ರೆಬೈಲು ಆನೆಬಿಡಾರದ 12 ಮಂದಿ, ಅರಣ್ಯ ಇಲಾಖೆಯ 25 ಸಿಬ್ಬಂದಿ ಪಾಲ್ಗೊಂಡಿದ್ದರು.

ಉಂಬ್ಳೆಬೈಲು ಅರಣ್ಯ ಪ್ರದೇಶ ಬಫರ್‌ ಝೋನ್‌ ವ್ಯಾಪ್ತಿಯಲ್ಲಿದ್ದು 20ಕ್ಕೂ ಹೆಚ್ಚು ಹಳ್ಳಿಗಳಿವೆ. ಹೇರಳವಾಗಿ ಭತ್ತ, ಬಾಳೆ, ಅಡಕೆ, ತೆಂಗು ಬೆಳೆಯಲಾಗುತ್ತಿದ್ದು ಕೆರೆಗಳು ಸಹ ಇವೆ. ಕಾಡಾನೆಗಳಿಗೆ ಉತ್ತಮ ಆಹಾರ ಸಿಗುತ್ತಿದ್ದುದರಿಂದ ಅವುಗಳು ಈ ಭಾಗದಲ್ಲಿ ಬೀಡು ಬಿಟ್ಟು ರೈತರಿಗೆ ನಷ್ಟ ಮಾಡುತ್ತಿದ್ದವು. ಇದರಿಂದ ಬೇಸತ್ತ ಜನ ಆನೆ ಹಿಡಿದು ಬೇರೆಡೆ ಬಿಡಲು ಮನವಿ ಮಾಡಿದ್ದರು. ಆನೆ ಹಿಡಿಯುವ ಕಾರ್ಯಾಚರಣೆ ಬಹಳ ವೆಚ್ಚದಾಯಕವಾದ್ದರಿಂದ ಸರಕಾರ ಓಡಿಸಲು ಅನುಮತಿ ನೀಡಿತ್ತು.

ತಾತ್ಕಾಲಿಕ ಕ್ರಮ ಬೇಡ: ಆನೆಗಳನ್ನು ಅರಣ್ಯ ಪ್ರದೇಶಗಳಿಗೆ ಓಡಿಸಿರುವುದು ತಾತ್ಕಾಲಿಕ ರಿಲೀಫ್‌ ನೀಡಿದ್ದು ಅವುಗಳನ್ನು ಬೇರೆಡೆ ಸ್ಥಳಾಂತರ ಮಾಡದಿದ್ದರೆ ಮತ್ತೆ ಬರುತ್ತವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಮನುಷ್ಯನಿಗೆ ಗಡಿ ಇದೆ. ಆನೆಗಳಿಗೆ ಅದ್ಯಾವುದೂ ತಿಳಿಯುವುದಿಲ್ಲ ಎಂಬುದು ಗ್ರಾಮಸ್ಥರ ವಾದ. ಕಾಡಾನೆಗಳು ನೆಲೆಸಿರುವ ಜಾಗದಲ್ಲಿ ಬೇರೆ ಆನೆಗಳು ಬಂದರೆ ಅವು ಮತ್ತೆ ಆ ಕಡೆ ಸುಳಿಯುವುದಿಲ್ಲ. ಆದ್ದರಿಂದ ಸದ್ಯಕ್ಕೆ ಬರುವುದಿಲ್ಲ ಎಂಬುದು ಆನೆಗಳ ತಜ್ಞರ ಅಭಿಮತ.

ಟ್ರಂಚ್‌ ಬೇಕು: ಆನೆಗಳನ್ನು ಓಡಿಸಿರುವುದು ತಾತ್ಕಾಲಿಕ ಕ್ರಮವಾಗಿದೆ. ಮತ್ತೆ ಬರಬಹುದು. ಭದ್ರಾ ಅಭಯಾರಣ್ಯದ ಗಡಿಯಲ್ಲಿ ಸೋಲಾರ್‌ ಬೇಲಿ ಹಾಕಿದರೆ ಇದಕ್ಕೆಲ್ಲ ಕಡಿವಾಣ ಬೀಳಲಿದೆ. ಈ ಹಿಂದೆ ಎಲಿಫಂಟ್‌ ಪ್ರೂಫ್‌ ಫೆನ್ಸಿಂಗ್‌ ಮಾಡಲಾಗಿತ್ತು. ಆದರೆ ಅದನ್ನೂ ದಾಟಿಕೊಂಡು ಆನೆಗಳು ಬರುತ್ತಿವೆ. ನಮ್ಮ ಭಾಗದಲ್ಲಿ 33 ಕಿ.ಮೀ ಕಂದಕ ನಿರ್ಮಾಣ ಮಾಡಲು 2.80 ಕೋಟಿ ವೆಚ್ಚದ ಯೋಜನೆಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವನ್ಯಜೀವಿ ವಲಯ ಹಾಗೂ ನಮ್ಮ ಕಡೆಯಿಂದ ಬೇಲಿ ಹಾಗೂ ಕಂದಕ ನಿರ್ಮಾಣವಾದರೆ ಶಾಶ್ವತ ಪರಿಹಾರ ಸಿಗಬಹುದು ಎನ್ನುತ್ತಾರೆ ಉಂಬ್ಳೆಬೈಲು ವಲಯ ಆರ್‌ಎಫ್‌ಒ ಆರ್‌.ಟಿ. ಮಂಜುನಾಥ್‌. ಅರಣ್ಯ ಪ್ರದೇಶದ ಆಯಕಟ್ಟಿನ ಜಾಗಗಳಲ್ಲಿ ಆನೆಗಳು ಒಳಬರುತ್ತವೆ. ಅಂತಹ ಪ್ರದೇಶಗಳನ್ನು ಈಗಾಗಲೇ ಗುರುತಿಸಿದ್ದು ಜಮೀನು, ಅರಣ್ಯ ಪ್ರದೇಶದ ಕೆಲವು ಕಡೆ ಈ ಟ್ರಂಚ್‌ಗಳು ಕಾರ್ಯರೂಪಕ್ಕೆ ಬರಲಿವೆ.

ಓದಿ : ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ : ಕಾರಣ ನಿಗೂಢ

ಟಾಪ್ ನ್ಯೂಸ್

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.