ಐಕಳ ಕಂಬಳ ಕರೆಯಲ್ಲಿ ಬೋಳದಗುತ್ತು ರಾಕೆಟ್ ಬೊಲ್ಲ- ಧೋನಿ ಕೋಣಗಳ ದಾಖಲೆ ಓಟ


Team Udayavani, Feb 7, 2021, 9:11 AM IST

ಐಕಳ ಕಂಬಳ ಕರೆಯಲ್ಲಿ ಬೋಳದಗುತ್ತು ರಾಕೆಟ್ ಬೊಲ್ಲ- ಧೋನಿ ಕೋಣಗಳ ದಾಖಲೆ ಓಟ

ಬೊಲ್ಲ- ಧೋನಿ

ಮಂಗಳೂರು: ಕ್ರಿಕೆಟ್ ಲೋಕದ ಸೂಪರ್ ಸ್ಟಾರ್ ಮಹೇಂದ್ರ ಸಿಂಗ್ ಧೋನಿ ಎಂತಹ ಓಟಗಾರ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ವಿಕೆಟ್ ಗಳ ನಡುವೆ ಧೋನಿ ರಾಕೆಟ್ ನಂತೆ ಓಡುತ್ತಾರೆ. ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಧೋನಿ ಎಂಬ ಹೆಸರಿನ ಕೋಣವಿದೆ. ಅದರ ಜೊತೆಗಾರ ರಾಕೆಟ್ ಬೊಲ್ಲ. ಈ ಜೋಡಿ ಕೋಣಗಳ ರಾಕೆಟ್ ವೇಗದ ಓಟ ಇದೀಗ ಹೊಸ ದಾಖಲೆ ಬರೆದಿದೆ.

ಶನಿವಾರ ಮಂಗಳೂರಿನ ಐಕಳದಲ್ಲಿ ನಡೆದ ಕಾಂತಬಾರೆ- ಬೂದಬಾರೆ ಜೋಡುಕರೆ ಕಂಬಳಲ್ಲಿ ಬೋಳದಗುತ್ತು ಸತೀಶ್ ಶೆಟ್ಟಿ ಅವರ ಕೋಣಗಳಾದ ಬೊಲ್ಲ ಮತ್ತು ಧೋನಿ ಹೊಸ ದಾಖಲೆಗೆ ಪಾತ್ರವಾಗಿದೆ. ಬೈಂದೂರು ವಿಶ್ವನಾಥ್ ಓಡಿಸಿದ ಈ ಕೋಣಗಳು ಕೇವಲ ‘9.14 ಸೆಕೆಂಡ್’ ನಲ್ಲಿ ನೂರು ಮೀಟರ್ ಕ್ರಮಿಸಿ ಹೊಸ ಕಂಬಳ ದಾಖಲೆ ಬರೆದಿವೆ.

2020ರಲ್ಲಿ ಇದೇ ಐಕಳ ಕಂಬಳದಲ್ಲಿ ಶ್ರೀನಿವಾಸ್ ಗೌಡ ಅವರು ಇರುವೈಲು ಪಾಣಿಲ ಬಾಡ ಪೂಜಾರಿ ಅವರ ಕೋಣಗಳನ್ನು 9.55 ಸೆಕೆಂಡ್ (ನೂರು ಮೀಟರ್ ಗೆ ಪರಿವರ್ತಿಸಿದಾಗ) ನಲ್ಲಿ ಕ್ರಮಿಸಿ ಹೊಸ ದಾಖಲೆ ಬರೆದಿದ್ದರು. ನಂತರ ಅಕ್ಕೇರಿ ಸುರೇಶ್ ಶೆಟ್ಟಿ 9.37 ಸೆಕೆಂಡ್, ಇರ್ವತ್ತೂರು ಆನಂದ 9.57 ಸೆಕೆಂಡ್ ನಲ್ಲಿ ಓಡಿಸಿ ದಾಖಲೆ ಮಾಡಿದ್ದರು.

ಇದನ್ನೂ ಓದಿ:ಮೋದಿ ಜತೆಗಿನ ಚಿತ್ರ ನನ್ನ ಜೀವನದ ಅತ್ಯುತ್ತಮ ಕ್ಷಣಗಳಲ್ಲೊಂದು: ಗ್ರಿಲ್ಸ್‌

ಇದೀಗ ಬೈಂದೂರು ವಿಶ್ವನಾಥ್ ಅವರು ಬೊಲ್ಲ ಮತ್ತು ಧೋನಿ ಕೋಣಗಳೊಂದಿಗೆ 142.5 ಮೀಟರ್ ದೂರವನ್ನು ಕೇವಲ 11.44 ಸೆಕೆಂಡ್ ನಲ್ಲಿ ಕ್ರಮಿಸಿದ್ದಾರೆ. ಈ ವೇಗವನ್ನು 100 ಮೀಟರ್ ಗೆ ಹೋಲಿಸಿದಾಗ 9.15 ಸೆಕೆಂಡ್ ನಲ್ಲಿ ಓಟ ಪೂರೈಸಿದಂತಾಗುತ್ತದೆ. ಇದೀಗ ಹೊಸ ದಾಖಲೆಯಾಗಿದೆ.

ಕಳೆದ ಕೆಲವು ವರ್ಷಗಳಿಂದ ನೇಗಿಲು ಹಿರಿಯ ವಿಭಾಗದಲ್ಲಿ ಸಾಧನೆ ಮಾಡುತ್ತಿರುವ ಬೋಳದಗುತ್ತು ಸತೀಶ್ ಶೆಟ್ಟಿಯವರ ಕೋಣಗಳು ಕಳೆದ ಬಾರಿಯು ದಾಖಲೆ ಓಟ ಓಡಿದ್ದವು. ಆಗ ಧೋನಿಯ ಜೊತೆಗೆ ಕಾಲೆ ಎಂಬ ಕೋಣ ಸಾಥ್ ನೀಡಿತ್ತು. ಆ ಓಟ 9.37 ಸೆಕೆಂಡ್ ನಲ್ಲಿ ಬಂದಿತ್ತು.

ಸೂಪರ್ ಸ್ಟಾರ್ ‘ಚೆನ್ನ’ ನಿಗೆ ನಡೆಯಿತು ಸನ್ಮಾನ

ಚೆನ್ನ

ಕಂಬಳ ಕ್ಷೇತ್ರದಲ್ಲಿ ಅತೀ ಹೆಚ್ಚು ಪದಕ ಪಡೆದ ಕಂಬಳ ಲೋಕದ ಸೂಪರ್ ಸ್ಟರ್ ಕೋಣ ‘ಚೆನ್ನ’ ನಿಗೆ ಐಕಳ ಕಂಬಳದಲ್ಲಿ ಸನ್ಮಾನ ಮಾಡಲಾಯಿತು. ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಮಾಲಕತ್ವದ ಚೆನ್ನ ಕೋಣದ ಸಾಧನೆಗಾಗಿ ಸನ್ಮಾನಿಸಿ, ಬೆಳ್ಳಿ ಸರವನ್ನು ಹಾಕಲಾಯಿತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.