ಎರಡನೇ ಹಂತದ ಲಸಿಕೆಗೆ ಜಿಲ್ಲಾಡಳಿತ ಸಜ್ಜು

ಮೊದಲ ಹಂತದಲ್ಲಿ ಶೇ.61 ಪ್ರಗತಿ­ ! ಲಸಿಕೆ ಪಡೆದವರಲ್ಲಿ ಹಾವೇರಿ ಫಸ್ಟ್‌, ಸವಣೂರು ಲಾಸ್ಟ್‌

Team Udayavani, Feb 8, 2021, 6:50 PM IST

corona

ಹಾವೇರಿ: ಕೊರೊನಾ ತಡೆಗಟ್ಟುವ ಹಿನ್ನೆಲೆ ದೇಶದ ಮಹತ್ವಾಕಾಂಕ್ಷಿ ಕೋವಿಶೀಲ್ಡ್‌ ಮೊದಲ ಹಂತದ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 5313 ಕೊರೊನಾ ವಾರಿಯರ್ಗೆ ಲಸಿಕೆ ನೀಡುವ ಮೂಲಕ ಶೇ.61 ಪ್ರಗತಿ ಸಾಧಿಸಲಾಗಿದ್ದು, ಫೆ.9 ರಿಂದ ಎರಡನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ.

ಕೋವಿಶೀಲ್ಡ್‌ ಲಸಿಕೆ ನೀಡುವ ಯೋಜನೆಗೆ ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಪಡೆದವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿಲ್ಲ. ಎಲ್ಲರೂ ಆರೋಗ್ಯವಾಗಿದ್ದು, ಲಸಿಕೆ ಪಡೆದ ದಿನದಿಂದಲೇ ಅವರು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಎರಡನೇ ಡೋಸ್‌ ತೆಗೆದುಕೊಳ್ಳಲು ಸಜ್ಜಾಗಿದ್ದು, ಕಾತುರದಿಂದ ಎದುರು ನೋಡುತ್ತಿದ್ದಾರೆ.

5313 ಜನರಿಗೆ ಲಸಿಕೆ: ಮೊದಲ ಹಂತದ ಲಸಿಕೆ ಪಡೆಯಲು ಜಿಲ್ಲೆಯಲ್ಲಿ ನೋಂದಾಯಿತ 8691 ಜನರ ಪೈಕಿ ಬ್ಯಾಡಗಿ ತಾಲೂಕು-390, ಹಾನಗಲ್ಲ-606, ಹಾವೇರಿ-1278, ಹಿರೇಕೆರೂರು-1021, ರಾಣಿಬೆನ್ನೂರು-1183, ಸವಣೂರು-269, ಶಿಗ್ಗಾವಿ- 566 ಸೇರಿದಂತೆ ಒಟ್ಟು 5313 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ.61 ಪ್ರಗತಿ ಸಾ ಧಿಸಲಾಗಿದೆ. ಲಸಿಕೆ ಪಡೆದವರ ಪೈಕಿ ಹಾವೇರಿ ತಾಲೂಕು ಮೊದಲ ಸ್ಥಾನದಲ್ಲಿದ್ದರೆ, ಸವಣೂರು ಕೊನೆಯ ಸ್ಥಾನದಲ್ಲಿದೆ.

ಲಸಿಕೆಯಿಂದ ಆತ್ಮಸ್ಥೆçರ್ಯ: ಮೊದಲ ಹಂತದ ಕೋವಿಶೀಲ್ಡ್‌ ಲಸಿಕೆ ಪಡೆದ ಕೆಲವರಲ್ಲಿ ಅಲ್ಪ ಪ್ರಮಾಣದ ಜ್ವರ, ಮೈ ಕೈ ನೋವು ಕಾಣಿಸಿಕೊಂಡಿದ್ದು ಬಿಟ್ಟರೆ ಇನ್ನುಳಿದಂತೆ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ. ಕೊರೊನಾ ಲಸಿಕೆ ಪಡೆದಿದ್ದರಿಂದ ಆರೋಗ್ಯ ಸಿಬ್ಬಂದಿ ಆತಂಕ ದೂರವಾಗಿ ಕೆಲಸ ಮಾಡಲು ಮತ್ತಷ್ಟು ಉತ್ಸಾಹ ಮೂಡಿಸಿದೆ. ಮೊದ ಮೊದಲು ಲಸಿಕೆ ಪಡೆಯಲು ಹಿಂಜರಿದಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಸ್ವತಃ ಮುಂದೆ ಬಂದು ಲಸಿಕೆ ಪಡೆದು ಇತರರನ್ನು ಪ್ರೇರೇಪಿಸುತ್ತಿದ್ದಾರೆ.

ಇದನ್ನೂ ಓದಿ :ಪೊಲೀಸರಿಗೆ ಸೇವಾ ಮನೋಭಾವ ಅಗತ್ಯ

ಲಸಿಕೆ ಕುರಿತು ಜಾಗೃತಿ: ಕೋವಿಶೀಲ್ಡ್‌ ಲಸಿಕೆ ಪಡೆದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಆತಂಕದಿಂದ ಹಲವರು ಲಸಿಕೆ ಪಡೆಯಲು ನೋಂದಾಯಿಸಿಕೊಂಡಿದ್ದರೂ ಲಸಿಕೆ ಪಡೆಯಲು ಹಿಂಜಯುತ್ತಿದ್ದಾರೆ. ಇನ್ನು ಕೆಲವರು ಉದಾಸೀನತೆ ತೋರುತ್ತಿದ್ದು, ಸಣ್ಣ ಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವವರು ಲಸಿಕೆಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿತು ಎಂಬ ಆತಂಕದಿಂದ ಲಸಿಕೆ ಪಡೆಯದೇ ದೂರ ಉಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನೋಂದಾಯಿಸಿಕೊಂಡಿದ್ದರೂ ಸಲಿಕೆ ಹಾಕಿಸಿಕೊಳ್ಳದವರನ್ನು ಸಂಪರ್ಕಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಲಸಿಕೆ ಬಗ್ಗೆ ಇರುವ ಆತಂಕ ದೂರ ಮಾಡಿಸಲು ಆರೋಗ್ಯ ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ತಿಳಿವಳಿಕೆ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವರಿಕೆ ಮಾಡಲಾಗುತ್ತಿದ್ದು, ಫೆ.9ರಿಂದ ಎರಡನೇ ಡೋಸ್‌ ನೀಡಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.