ಪೇಜಾವರ-ಸಿದ್ಧಗಂಗಾ ಶ್ರೀ ನೆನಪಿಗೆ ಸ್ಮೃತಿ ವನ : ಬಜೆಟ್‌ನಲ್ಲಿ ಘೋಷಣೆಗೆ ಶಿಫಾರಸು


Team Udayavani, Feb 12, 2021, 6:20 AM IST

ಪೇಜಾವರ-ಸಿದ್ಧಗಂಗಾ ಶ್ರೀ ನೆನಪಿಗೆ ಸ್ಮೃತಿ ವನ : ಬಜೆಟ್‌ನಲ್ಲಿ ಘೋಷಣೆಗೆ ಶಿಫಾರಸು

ಬೆಂಗಳೂರು : ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಸ್ಮರಣಾರ್ಥ ಉಡುಪಿಯಲ್ಲಿ ಮತ್ತು ಸಿದ್ಧಗಂಗಾ ಶ್ರೀಗಳ ನೆನಪಿನಲ್ಲಿ ತುಮಕೂರಿನಲ್ಲಿ “ಸ್ಮತಿ ವನ’ ನಿರ್ಮಿಸುವಂತೆ ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿ ಶಿಫಾರಸು ಮಾಡಿದೆ.

ಇದಲ್ಲದೆ ಜೀವವೈವಿಧ್ಯ ಮಂಡಳಿ, ಪರಿಸರ -ಅರಣ್ಯ ಮತ್ತಿತರ ಇಲಾಖೆಗಳ ಮೂಲಕ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ, ಜೀವ ವೈವಿಧ್ಯ ವನ-ಹಸುರು ವಲಯ ರಕ್ಷಣೆ, ದೇಸೀ ಜಾನುವಾರು ತಳಿ ಸಂರಕ್ಷಣೆ, ಬಯೋಗ್ಯಾಸ್‌ ಘಟಕಗಳ ಸ್ಥಾಪನೆ ಸಹಿತ ಹಲವು ಹಸುರು ಯೋಜನೆಗಳನ್ನು ಮಂಡಳಿ ಶಿಫಾರಸು ಮಾಡಿದೆ.

ಹಾಸನದ ಗೆಂಡೆಕಟ್ಟೆಯಲ್ಲಿ ರಾಷ್ಟ್ರಮಟ್ಟದ “ಜೀವವೈವಿಧ್ಯ ವನ’ ರೂಪಿಸಬೇಕು. ರಾಜ್ಯಾದ್ಯಂತ ನೂರು ಸಣ್ಣ ಕೆರೆಗಳನ್ನು ಆಯ್ಕೆ ಮಾಡಿ, ಹೂಳೆತ್ತಿ, ಸುತ್ತಲೂ ಹಸುರು ವಲಯ ನಿರ್ಮಿಸಿ, ಸ್ಥಳೀಯರ ಸಹಭಾಗಿತ್ವದೊಂದಿಗೆ ನಿರ್ವಹಿಸಬೇಕು. ಈಗಾಗಲೇ ಜಾರಿಯಾಗಿರುವ ಕಾನು ಸಂರಕ್ಷಣ ಯೋಜನೆಯನ್ನು ಮಲೆನಾಡು, ಕರಾವಳಿಯ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಿ, ಅಲ್ಲಿರುವ ಅಪೂರ್ಣ ಕಾನು-ದೇವರಕಾಡು ಪ್ರದೇಶಗಳನ್ನು ಸಂರಕ್ಷಿಸುವ ಯೋಜನೆ ಜಾರಿಗೆ ತರಬೇಕು ಎಂದು ಶಿಫಾರಸು ಮಾಡಿದೆ.

“ಸುಸ್ಥಿರ ಅಭಿವೃದ್ಧಿ ಆಶಯ’ದ ಉದ್ದೇಶ  ಗಳನ್ನು ಸಾಧಿ ಸುವ ನಿಟ್ಟಿನಲ್ಲಿ ವರದಿ ಸಲ್ಲಿ ಸಲು ಮುಖ್ಯ ಮಂತ್ರಿ ಸೂಚಿ ಸಿದ್ದರು. ಅದಕ್ಕೆ ಪೂರಕವಾಗಿ ಶಿಫಾರಸು ಮಾಡಲಾಗಿದೆ. ಜನರ ಸಹ ಭಾಗಿತ್ವ ದಲ್ಲಿ ಯೋಜನೆ ಜಾರಿಗೊಳಿಸಲು ಸಲಹೆ ಮಾಡಿದ್ದೇವೆ.
– ಅನಂತ ಹೆಗಡೆ ಅಶೀಸರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ

ಬಯೋಗ್ಯಾಸ್‌ ಘಟಕ ಯೋಜನೆ
ನಗರಗಳ ಹಸಿತ್ಯಾಜ್ಯ ವಿಲೇವಾರಿಗೆ ಬಯೋಗ್ಯಾಸ್‌ ಘಟಕವು ಅತ್ಯಂತ ಕಡಿಮೆ ವೆಚ್ಚದ, ಸರಳ ಮತ್ತು ಪರಿಸರ ಪೂರಕ ಮಾರ್ಗವಾಗಿದೆ. ಇದರಿಂದ ತ್ಯಾಜ್ಯದ ಸಮಸ್ಯೆಯೂ ತಗ್ಗಿ, ಅಡುಗೆಗಾಗಿ ಬಳಸಲು ಇಂಧನವೂ ದೊರಕುತ್ತದೆ. ರಾಜ್ಯದ ಎಲ್ಲ ಮಹಾನಗರ ಮತ್ತು ನಗರ ಪಾಲಿಕೆಗಳಲ್ಲಿ ಹಸಿತ್ಯಾಜ್ಯದಿಂದ ಬಯೋಗ್ಯಾಸ್‌ ತಯಾರಿಸುವ ಘಟಕಗಳನ್ನು ಖಾಸಗಿ-ಸಾರ್ವಜನಿಕ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಸ್ಥಾಪಿಸಬೇಕು. ಜತೆಗೆ ಸುಮಾರು 1 ಲಕ್ಷ ರೈತ ಕುಟುಂಬಗಳಿಗೆ ದೀಪ ಮತ್ತು ನೀರು ಕಾಯಿಸುವ ಉದ್ದೇಶದ ಸೋಲಾರ್‌ ಘಟಕ ಸ್ಥಾಪಿಸಲು ಅನುಕೂಲವಾಗುವಂತೆ ಕನಿಷ್ಠ ಶೇ. 50ರಷ್ಟು ಸಹಾಯಧನ ನೀಡುವ “ಸುಸ್ಥಿರ ಇಂಧನ ಅಭಿವೃದ್ಧಿ’ ಯೋಜನೆಯನ್ನು ಜಾರಿಗೆ ತರಬೇಕು ಎಂದು ಶಿಫಾರಸು ಮಾಡಿದೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.