ಎರಡನೇ ಟೆಸ್ಟ್: ಮಹತ್ವದ ಟಾಸ್ ಗೆದ್ದ ವಿರಾಟ್, ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ


Team Udayavani, Feb 13, 2021, 8:58 AM IST

IndvsEng second test at chennai

ಚೆನ್ನೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಚೆನ್ನೈ ಸಜ್ಜಾಗಿದೆ. ಎಂ. ಚಿದಂಬರಂ ಸ್ಟೇಡಿಯಂ ನಲ್ಲಿ ಉಭಯ ತಂಡಗಳು ಸರಣಿಯ ಎರಡನೇ ಪಂದ್ಯವಾಡುತ್ತಿದೆ. ಇಂಗ್ಲೆಂಡ್ ತಂಡ ಮೊದಲ ಪಂದ್ಯ ಗೆದ್ದ ಹುಮ್ಮಸ್ಸಿನಲ್ಲಿದ್ದರೆ, ಟೀಂ ಇಂಡಿಯಾ ತಿರುಗೇಟು ನೀಡಲು ಕಾಯುತ್ತಿದೆ.

ಚಿಪಾಕ್ ಅಂಗಳದಲ್ಲಿ ಟಾಸ್ ಗೆದ್ದ ವಿರಾಟ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ನಾಲ್ಕು ಬದಲಾವಣೆಯಾಗಿದ್ದು, ಟೀಂ ಇಂಡಿಯಾದಲ್ಲೂ ಬದಲವಾಣೆ ಮಾಡಲಾಗಿದೆ. ಭಾರತದ ಪರ ಅಕ್ಷರ್ ಪಟೇಲ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರೆ, ಬಹಳ ಸಮಯದ ಬಳಿಕ ಕುಲದೀಪ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ವೇಗಿ ಮೊಹಮದ್ ಸಿರಾಜ್ ಇಂದು ಇಶಾಂತ್ ಗೆ ಸಾಥ್ ನೀಡಲಿದ್ದಾರೆ. ವೇಗಿ ಬುಮ್ರಾಗೆ ವಿಶ್ರಾಂತಿ ನೀಡಲಾಗದೆ. ನದೀಂ ಮತ್ತು ವಾಷಿಂಗ್ಟನ್ ಸುಂದರ್ ಕೈಬಿಡಲಾಗಿದೆ.

ಇದನ್ನೂ ಓದಿ:ಐಪಿಎಲ್‌ ಹರಾಜು; 292 ಕ್ರಿಕೆಟಿಗರಿಗೆ ಸೀಮಿತ

ಪ್ರೇಕ್ಷಕರಿಗೆ ಅವಕಾಶ: ಇಂದಿನ ಪಂದ್ಯದಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಚೆನ್ನೈನಲ್ಲೇ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಾವುದೇ ಪ್ರೇಕ್ಷಕರಿಗೆ ಅವಕಾಶ ನೀಡಿರಲಿಲ್ಲ.

ಇಂಗ್ಲೆಂಡ್‌ ತಂಡದಲ್ಲಿ 4 ಬದಲಾವಣೆ: ಸಾಮಾನ್ಯವಾಗಿ ಗೆಲುವಿನ ತಂಡವನ್ನು ಬದಲಿಸದೇ ಇರುವುದು ಕ್ರಿಕೆಟ್‌ ಸಂಪ್ರದಾಯ. ಆದರೆ 227 ರನ್‌ ಜಯಭೇರಿ ಮೊಳಗಿಸಿದ ಇಂಗ್ಲೆಂಡ್‌ ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ ಒಂದಲ್ಲ, ಎರಡಲ್ಲ, ಬರೋಬ್ಬರಿ 4 ಬದಲಾವಣೆಗಳನ್ನು ಮಾಡಿದೆ! ಕಳೆದ ಪಂದ್ಯದ ಬೌಲಿಂಗ್‌ ಹೀರೋಗಳಾದ ಜೇಮ್ಸ್‌ ಆ್ಯಂಡರ್ಸನ್‌, ಜೋಫ್ರಾ ಆರ್ಚರ್‌, ಡಾಮಿನಿಕ್‌ ಬೆಸ್‌ ಅವರನ್ನು ಇಂಗ್ಲೆಂಡ್‌ ಕೈಬಿಟ್ಟಿದೆ. ವಿಕೆಟ್‌ ಕೀಪರ್‌ ಜಾಸ್‌ ಬಟ್ಲರ್‌ ತವರಿಗೆ ಮರಳಿದ್ದಾರೆ.

ಇವರಲ್ಲಿ ಆ್ಯಂಡರ್ಸನ್‌ ಮತ್ತು ಬೆಸ್‌ ಅವರನ್ನು ರೊಟೇಶನ್‌ ಪದ್ಧತಿ ಹಾಗೂ ಹೆಚ್ಚಿನ ಒತ್ತಡದಿಂದ ಮುಕ್ತಗೊಳಿಸುವ ಸಲುವಾಗಿ ಹೊರಗಿಡಲಾಗಿದೆ. ಇವರ ಬದಲು ಸ್ಟುವರ್ಟ್‌ ಬ್ರಾಡ್‌ ಮತ್ತು ಮೊಯಿನ್‌ ಅಲಿ ಅವರನ್ನು ಸೇರಿಸಿ ಕೊಳ್ಳಲಾಗಿದೆ. ವೇಗಿ ಆರ್ಚರ್‌ ಗಾಯಾಳಾದ ಕಾರಣ ತಂಡದಿಂದ ಬೇರ್ಪಟ್ಟಿದ್ದಾರೆ. ಇವರ ಸ್ಥಾನಕ್ಕೆ ಆಲ್‌ರೌಂಡರ್‌ ಕ್ರಿಸ್‌ ವೋಕ್ಸ್‌ ವೇಗಿ ಓಲೀ ಸ್ಟೋನ್‌ ಆಯ್ಕೆಯಾಗಿದ್ದಾರೆ. ಬಟ್ಲರ್‌ ಬದಲು ಬೆನ್‌ ಫೋಕ್ಸ್‌ ವಿಕೆಟ್‌ ಕೀಪಿಂಗ್‌ ನಡೆಸಲಿದ್ದಾರೆ.

ತಂಡಗಳು

ಭಾರತ: ರೋಹಿತ್‌ ಶರ್ಮ, ಶುಭಮನ್‌ ಗಿಲ್‌, ಚೇತೇಶ್ವರ್‌ ಪೂಜಾರ, ವಿರಾಟ್‌ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್‌ ಪಂತ್‌, ಆರ್‌. ಅಶ್ವಿ‌ನ್‌, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌, ಇಶಾಂತ್‌ ಶರ್ಮ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್‌: ಡೊಮಿನಿಕ್‌ ಸಿಬ್ಲಿ, ರೋರಿ ಬರ್ನ್ಸ್, ಡೇನಿಯಲ್‌ ಲಾರೆನ್ಸ್‌, ಜೋ ರೂಟ್‌ (ನಾಯಕ), ಓಲೀ ಪೋಪ್‌, ಸ್ಟೋಕ್ಸ್‌, ಬೆನ್‌ ಫೋಕ್ಸ್‌, ಮೊಯಿನ್‌ ಅಲಿ, ಸ್ಟುವರ್ಟ್‌ ಬ್ರಾಡ್‌, ಓಲೀ ಸ್ಟೋನ್‌, ಜಾಕ್‌ ಲೀಚ್

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.