![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 13, 2021, 3:34 PM IST
ಚೆನ್ನೈ: ಕಳೆದ ಕೆಲ ಟೆಸ್ಟ್ ಪಂದ್ಯಗಳಲ್ಲಿ ಲಯ ಕಂಡುಕೊಳ್ಳಲು ವಿಫಲವಾಗಿದ್ದ ಆರಂಭಿಕ ಆಟಗಾರ ರೋಹಿತ್ ಶರ್ಮ ಚೆನ್ನೈನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ್ದಾರೆ. ಇದೇ ವೇಳೆ ಹಿಟ್ ಮ್ಯಾನ್ ರೋಹಿತ್ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ.
ರೋಹಿತ್ ಶರ್ಮ ಇಂಗ್ಲೆಂಡ್ ವಿರುದ್ಧ ಮೂರು ಮಾದರಿ ಕ್ರಿಕೆಟ್ (ಟೆಸ್ಟ್, ಟಿ20, ಏಕದಿನ) ನಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದರು. ಒಟ್ಟು ನಾಲ್ಕು ಎದುರಾಳಿ ದೇಶಗಳ ವಿರುದ್ಧ ರೋಹಿತ್ ಈ ಸಾಧನೆ ಮಾಡಿದ್ದಾರೆ. ( ಶ್ರೀಲಂಕಾ, ವೆಸ್ಟ್ ಇಂಡೀಸ್, ದ.ಆಫ್ರಿಕಾ ಮತ್ತು ಇಂಗ್ಲೆಂಡ್) ಈ ದಾಖಲೆ ಮಾಡಿದ ಏಕೈಕ ಆಟಗಾರ ರೋಹಿತ್.
ಇದನ್ನೂ ಓದಿ:ಕುಸಿದ ಟೀಂ ಇಂಡಿಯಾಗೆ ನೆರವಾದ ರೋಹಿತ್: ಚೆಪಾಕ್ ನಲ್ಲಿ ಹಿಟ್ ಮ್ಯಾನ್ ಭರ್ಜರಿ ಶತಕ
ರೋಹಿತ್ ಇಂದು ಟೆಸ್ಟ್ ಕ್ರಿಕೆಟ್ ನ ಏಳನೇ ಶತಕ ಬಾರಿಸಿದರು. ಎಲ್ಲಾ ಏಳು ಶತಕಗಳು ಭಾರತದಲ್ಲೇ ಬಂದಿವೆ. ಈ ದಾಖಲೆ ಬರೆದ ಮೊದಲ ಭಾರತೀಯ ರೋಹಿತ್.
ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನಕ್ಕೇರಿದರು. 13 ಇನ್ನಿಂಗ್ಸ್ ನಲ್ಲಿ ರೋಹಿತ್ ನಾಲ್ಕು ಶತಕ ಬಾರಿಸಿದರೆ, ಮೊದಲ ಸ್ಥಾನದಲ್ಲಿರುವ ಆಸೀಸ್ ನ ಮಾರ್ನಸ್ ಲಬುಶೇನ್ 23 ಇನ್ನಿಂಗ್ಸ್ ನಲ್ಲಿ ಐದು ಶತಕ ಬಾರಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಭಾರತೀಯ ಆರಂಭಿಕ ಆಟಗಾರರ ಪಟ್ಟಿಯಲ್ಲಿ ರೋಹಿತ್ ಮೂರನೇ ಸ್ಥಾನಕ್ಕೇರಿದರು. ರೋಹಿತ್ ಇಂದು ಆರಂಭಿಕ ಆಟಗಾರನಾಗಿ 35 ನೇ ಅಂತಾರಾಷ್ಟ್ರೀಯ ಶತಕ ಗಳಿಸಿದರು. 45 ಶತಕ ಸಿಡಿಸಿರುವ ಸಚಿನ್ ಮೊದಲ ಸ್ಥಾನದಲ್ಲಿದ್ದರೆ, 36 ಶತಕಗಳೊಂದಿಗೆ ಸೆಹವಾಗ್ ಎರಡನೇ ಸ್ಥಾನದಲ್ಲಿದ್ದಾರೆ.
ದ್ವಿತೀಯ ಟೆಸ್ಟ್ ನ ಮೊದಲ ದಿನದಾಟದಲ್ಲಿ 70 ಓವರ್ ಅಂತ್ಯಕ್ಕೆ ಭಾರತ ತಂಡ ಮೂರು ವಿಕೆಟ್ ನಷ್ಟಕ್ಕೆ 233 ರನ್ ಗಳಿಸಿದೆ. ರೋಹಿತ್ ಶರ್ಮಾ ಅಜೇಯ 153 ರನ್ ಗಳಿಸಿದರೆ, ಉಪನಾಯಕ ಅಜಿಂಕ್ಯ ರಹಾನೆ 59 ರನ್ ಗಳಿಸಿ ಆಡುತ್ತಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.