ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್
Team Udayavani, Feb 14, 2021, 3:10 PM IST
ಕಲಬುರಗಿ: ಶಿಥಿಲಾವಸ್ಥೆಯಲ್ಲಿರುವ 180 ವರ್ಷಗಳ ಹಿಂದಿನ ಕಲಬುರಗಿ ತಾಲೂಕು ತಹಶೀಲ್ದಾರ ಕಚೇರಿಯಲ್ಲಿ ರಾಶಿಗಟ್ಟಲೇ ಇದ್ದ ಕಸದ ತ್ಯಾಜ್ಯವನ್ನು ತಹಶಿಲ್ದಾರರೇ ಮುಂದೆ ನಿಂತು ಸಿಬ್ಬಂದಿಗಳೊಂದಿಗೆ ಸ್ವಚ್ಚತಾ ಕಾರ್ಯ ಕೈಗೊಂಡರು.
ನಗರದ ಹೃದಯ ಭಾಗ ಸೂಪರ್ ಮಾರ್ಕೆಟ್ ಮಲ್ಲಿರುವ ಕಚೇರಿ ವಿಶಾಲವಾದ ಜಾಗವಿದೆ. ಹಳೆಯ ಕಟ್ಟಡ ಹಾಗೂ ಸೂಕ್ತ ನಿರ್ವಹಣೆ ಇಲ್ಲದಿದ್ದಕ್ಕೆ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದು ಗಬ್ಬೆದ್ದು ನಾರುತ್ತಿತ್ತು. ಇತ್ತೀಚೆಗೆ ಕಟ್ಟಡ ಮೇಲ್ಚಾವಣಿ ಮಹಿಳಾ ಸಿಬ್ಬಂದಿ ಮೇಲೆ ಕುಸಿದು ಬಿದ್ದಿತ್ತು. ಆದರೆ ಕಳೆದ ಫೆ. 8ರಂದು ಶಿಗ್ಗಾಂವಿಯಿಂದ ವರ್ಗಾವಣೆಯಾಗಿ ಕಲಬುರಗಿ ತಹಶೀಲ್ದಾರರಾಗಿ ಕಾರ್ಯಭಾರ ವಹಿಸಿಕೊಂಡಿರುವ ಪ್ರಕಾಶ ಕುದರಿ ಅವರು ಕಚೇರಿ ಹಾಗೂ ಆವರಣದಲ್ಲಿನ ಕಸದ ರಾಶಿಯ ಸ್ವಚ್ಚತಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಕಚೇರಿ ಆವರಣದಲ್ಲೇ ತಹಶೀಲ್ದಾರರ ವಸತಿ ಗೃಹವಿದೆ. ಆದರೆ ಏಳೆಂಟು ವರ್ಷಗಳಿಂದ ಬಳಕೆ ಮಾಡದ ಕಾರಣ ಅನಾಥವಾಗದೆ. ಗೃಹವನ್ನು ಸ್ವಚ್ಛತೆ ಮಾಡಿಸಿ ಬಳಕೆ ಮಾಡಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಕೇವಲ ಕಚೇರಿ ಆವರಣ ಹಾಗೂ ಕಟ್ಟಡ ಸ್ಚಚ್ಚಗೊಳಿಸಿದರೆ ಸಾಲದು. ಬಹಳ ದಿನಗಳಿಂದ ಇತ್ಯರ್ಥಗೊಳ್ಳದೇ ಇರುವ ಅರ್ಜಿ ಗಳನ್ನು ವಿಲೇವಾರಿ ಮಾಡುವುದು, ಒಟ್ಟಾರೆ ಆಡಳಿತದಲ್ಲಿ ಪಾರದರ್ಶಕತೆ ತರಲು ಶ್ರಮಿಸಲಾಗುವುದು ಎಂದು ತಹಶಿಲ್ದಾರ ಪ್ರಕಾಶ ಕುದರಿ ತಿಳಿಸಿದರು.
ಕಚೇರಿ ಬಾಳಿಕೆ ಕುರಿತಾಗಿ ಲೋಕೋಪಯೋಗಿ ಇಲಾಖೆಯಿಂದ ವರದಿ ಪಡೆದು ನೆಲಸಮ ಮಾಡುವ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗುವುದು. ನೆಲಸಮಗೊಳಿಸಲು ಪ್ರಾಚ್ಯ ವಸ್ತು ಇಲಾಖೆ ಅನುಮತಿ ನೀಡಲಾಗುತ್ತದೆಯೋ ಎಂಬುದನ್ನು ಕಾದು ನೋಡಬೇಕು. ತಹಶಿಲ್ದಾರ ಕಚೇರಿಯ ಮಿನಿ ವಿಧಾನಸೌಧ ಬೇರೆಡೆ ಹೊಸದಾಗಿ ನಿರ್ಮಿಸಲು ಮೂರ್ನಾಲ್ಕು ಕಡೆ ಸ್ಥಳ ಗುರುತಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದ ಎನ್ ಸಿಸಿ ಕಚೇರಿ ಸ್ಥಳಾಂತರವಾಗುತ್ತಿರುವುದರಿಂದ ಈ ಸ್ಥಳದಲ್ಲೇ ತಹಶಿಲ್ದಾರ ಕಚೇರಿ ನಿರ್ಮಾಣವಾಗಬೇಕು ಇಲ್ಲವೇ ಈಗಿರುವ ತಹಶಿಲ್ದಾರ ಕಚೇರಿ ಆವರಣದಲ್ಲೇ ಕಚೇರಿ ಸ್ಥಾಪನೆಯಾದರೆ ಸೂಕ್ತ ಎಂಬುದು ಸಾರ್ವಜನಿಕರ ಹಾಗೂ ತಮ್ಮ ಅಭಿಪ್ರಾಯವಾಗಿದೆ ಎಂದು ತಹಶಿಲ್ದಾರ ಪ್ರಕಾಶ ಕುದರಿ ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.