ಉಪಚುನಾವಣೆ ಟಿಕೆಟ್‌ ಯಾರಿಗೆ?

| ಅಭ್ಯರ್ಥಿಗಳನ್ನು ಘೋಷಿಸದ ಪಕ್ಷಗಳು | ಟಿಕೆಟ್‌ ವಿಷಯದಲ್ಲಿ ಹೆಚ್ಚಿದ ಕುತೂಹಲ | ಕಾದು ನೋಡುವ ತಂತ್ರಕ್ಕೆ ಪಕ್ಷಗಳ ಮೊರೆ

Team Udayavani, Feb 16, 2021, 4:48 PM IST

ಉಪಚುನಾವಣೆ ಟಿಕೆಟ್‌ ಯಾರಿಗೆ?

ಬೀದರ: ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅತ್ಯಂತ ಪ್ರತಿಷ್ಠೆಯ ಕಣವಾಗಿರುವಬಸವಕಲ್ಯಾಣ ಉಪ ಚುನಾವಣೆ ಸದ್ಯ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೇಂದ್ರ ಚುನಾವಣೆ ಆಯೋಗವು ಶೀಘ್ರ ಚುನಾವಣೆಗೆ ಮುಹೂರ್ತ ನಿಗದಿ ಮಾಡಲಿದೆ. ಆದರೆ, ಈವರೆಗೂ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಹಾಗಾಗಿಟಿಕೆಟ್‌ ಯಾರಿಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಿದ್ದು, ಚರ್ಚೆಗೆ ಗ್ರಾಸವಾಗಿದೆ.

ಶಾಸಕ ದಿ| ಬಿ. ನಾರಾಯಣರಾವ್‌ ಅವರ ಅಕಾಲಿಕ ನಿಧನದಿಂದ ತೆರವಾಗಿರುವಬಸವಣ್ಣನ ಕರ್ಮಭೂಮಿ ಬಸವಕಲ್ಯಾಣಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.ಗ್ರಾಮ ಪಂಚಾಯತ ಮಿನಿ ಸಮರದಬಳಿಕ ಕಲ್ಯಾಣದ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ಸಿಗಬಹುದೆಂದು ಅಂದಾಜಿಸಲಾಗಿತ್ತು. ಇದಕ್ಕಾಗಿ ಆಂತರಿಕವಾಗಿ ಬಿರುಸಿನ ತಯ್ನಾರಿಗಳು ನಡೆಯುತ್ತಿದೆ. ಆದರೆ, ಬಿಜೆಪಿ ಮತ್ತುಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳುಪರಸ್ಪರ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದ್ದು, ಚುನಾವಣಾ ಆಯೋಗದ ದಿನಾಂಕ ಘೋಷಣೆಯನ್ನೇ ಎದುರು ನೋಡುತ್ತಿವೆ.

ಜೆಡಿಎಸ್‌ ಸ್ಪರ್ಧೆ ಬಗ್ಗೆಯೇ ಇನ್ನೂ ಘೋಷಣೆ ಆಗಬೇಕಿದೆ.ಶಿರಾ ಮತ್ತು ಆರ್‌ಆರ್‌ ನಗರ ಉಪಚುನಾವಣೆಯಲ್ಲಿ ಜಯಭೇರಿ ಬಾರಿಸಿಹುಮಸ್ಸಿನಲ್ಲಿರುವ ಕೆಸರಿಪಡೆ ಬಸವಕಲ್ಯಾಣಕ್ಷೇತ್ರದಲ್ಲಿ ಕಮಲ ಅರಳಿಸಲು ಈಗಾಗಲೇರಣ ತಂತ್ರ ರೂಪಿಸುತ್ತಿದ್ದರೆ ಕಾಂಗ್ರೆಸ್‌ ಸಹಶತಾಯಗತಾಯ ಮತ್ತೂಮ್ಮೆ ಕ್ಷೇತ್ರವನ್ನು “ಕೈ’ವಶದಲ್ಲಿ ಇಟ್ಟಿಕೊಳ್ಳಲು ಸಜ್ಜಾಗುತ್ತಿದೆ. ಸದ್ಯದ ರಾಜಕೀಯ ಬೆಳವಣಿಗೆಯಿಂದ ಕದನದ ಕುತೂಹಲ ಹೆಚ್ಚಿದೆಯಾದರೂ ಅಭ್ಯರ್ಥಿಗಳ ಹೆಸರು ಅಂತಿಮ ಆಗದಿರುವುದು ಗೊಂದಲ ಮೂಡಿಸಿದೆ.

ಆಡಳಿತಾರೂಢ ಬಿಜೆಪಿಯಿಂದ ಸಿಎಂ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರ ಸ್ಪರ್ಧೆ ಕುರಿತುವ್ಯಾಪಕ ಚರ್ಚೆಗಳು ನಡೆದಿದ್ದವು. ಆದರೆ, ಸದ್ಯ ಮಸ್ಕಿ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿರುವ ಹಿನ್ನಲೆ ವಿಜಯೇಂದ್ರ ಅವರ ಸ್ಪರ್ಧೆ ಅನುಮಾನ. ಆದರೂ ಕೊನೆ ಕ್ಷಣದಲ್ಲಿನಿರ್ಣಯಗಳು ಬದಲಾವಣೆ ಆದರೂಆಶ್ಚರ್ಯ ಪಡಬೇಕಿಲ್ಲ. ಇನ್ನೂ ಸ್ಥಳೀಯರಿಗೆಟಿಕೆಟ್‌ ನೀಡಬೇಕೆಂಬ ಮಾತುಗಳು ಕೇಳಿಬರುತ್ತಿದ್ದು, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜಿಪಂ ಸದಸ್ಯ ಗುಂಡು ರೆಡ್ಡಿ,ಮುಖಂಡರಾದ ಶರಣು ಸಲಗಾರ, ಸಂಜಯ ಪಟವಾರಿ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ, ಪ್ರಬಲ ವ್ಯಕ್ತಿಯನ್ನೇ

ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ವರಿಷ್ಠರು ಘೋಷಿಸಿರುವದರಿಂದ ಯಾರಿಗೆ ಮಣೆಹಾಕುತ್ತದೆ ಎಂಬ ಕುತೂಹಲ ಹೆಚ್ಚಿದೆ.ಇನ್ನೂ ಕೈ ವಶದಲ್ಲಿದ್ದ ಕ್ಷೇತ್ರವನ್ನುಉಳಿಸಿಕೊಳ್ಳಲು ಕಾಂಗ್ರೆಸ್‌ ಸಹ ಅಳೆದುತೂಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಿದೆ. ದಿ| ನಾರಾಯಣರಾವ್‌ ಅವರ ಪತ್ನಿ ಮಲ್ಲಮ್ಮಅಥವಾ ಮಾಜಿ ಸಿಎಂ ದಿ. ಧರಂಸಿಂಗ್‌ ಅವರ ಪುತ್ರರಾದ ಎಂಎಲ್‌ಸಿ ವಿಜಯಸಿಂಗ್‌ ಇವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಈ ಬಗ್ಗೆ ಕೈ ಪಾಳಯದ ನಾಯಕರು ಮಾತ್ರ ಈ ವಿಷಯದಲ್ಲಿ ಮೌನಕ್ಕೆ ಶರಣಾಗಿದ್ದಾರೆ

 

­-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.