ಅಜವಾನಕ್ಕಿಲ್ಲ ಮಾರುಕಟ್ಟೆ: ರೈತ ಕಂಗಾಲು

ಔಷಧಿ ಗುಣವುಳ್ಳ ಬೆಳೆಗೆ ರಾಜ್ಯದಲ್ಲಿಲ್ಲ ಮಾರಾಟ ಕೇಂದ್ರ,ಪ್ರತಿ ಕ್ವಿಂಟಲ್‌ಗೆ 20-25 ಸಾವಿರ ರೂ. ಬೆಲೆ

Team Udayavani, Feb 17, 2021, 5:54 PM IST

ಅಜವಾನಕ್ಕಿಲ್ಲ ಮಾರುಕಟ್ಟೆ: ರೈತ ಕಂಗಾಲು

ಹುನಗುಂದ: ಔಷಧಿ ಗುಣವುಳ್ಳ ಕಡಿಮೆ ಖರ್ಚಿನಲ್ಲಿ ರೈತರಿಗೆ ಹೆಚ್ಚಿನ ಆದಾಯ ತರುವ ಬೆಳೆ ಅಜವಾನ್‌. ಆದರೆ, ತಾಲೂಕಿನ ನೂರಾರು ಎಕರೆಯಲ್ಲಿ ಬೆಳೆದ ಅಜವಾನ್‌ ಮಾರಾಟಕ್ಕೆ ಸೂಕ್ತ ಸ್ಥಳೀಯ ಮಾರುಕಟ್ಟೆಯ ಸೌಲಭ್ಯವಿಲ್ಲದೇ ರೈತರು ಕಂಗಾಲಾಗಿದ್ದಾರೆ.

ತಾಲೂಕಿನಲ್ಲಿ ಆಂದಾಜು 20-30 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯುವ ಅಜವಾನ್‌ಗೆರಾಜ್ಯದಲ್ಲಿ ಸೂಕ್ತ ಮಾರುಕಟ್ಟೆಗಳೇ ಇಲ್ಲ. ಇಲ್ಲಿಯ ಬೆಳೆಗಾರರು ಹೊರರಾಜ್ಯದ ಮಾರುಕಟ್ಟೆಯನ್ನು ಅವಲಂಬಿಸುವಂತಾಗಿದೆ.

ಧನ್ನೂರ ಗ್ರಾಮ ರೈತ ವಿಜಯಕುಮಾರ ಕೂಡ್ಲಪ್ಪ ಹುದ್ದಾರ ಎಂಬುವರು ಕಳೆದ ನಾಲ್ಕು ವರ್ಷಗಳಿಂದ ಅಜಿವಾನ್‌ ಬೆಳೆ ಬೆಳೆಯುತ್ತಿದ್ದು, ಪ್ರತಿ ವರ್ಷ 10ರಿಂದ 12 ಎಕರೆ ಜಮೀನನಲ್ಲಿ ಸುಮಾರು 15 ರಿಂದ 20 ಕ್ವಿಂಟಲ್‌ ಅಜವಾನ್‌ ಬೆಳೆಯುತ್ತಿದ್ದಾರೆ.

ಉತ್ಕೃಷ್ಟ ಇಳುವರಿ ಬರುತ್ತಿದ್ದರೂ ಸ್ಥಳೀಯ ಮಾರುಕಟ್ಟೆಯ ಸಮಸ್ಯೆ ಇರುವುದರಿಂದ ಹೊರರಾಜ್ಯ ಆಂಧ್ರಪ್ರದೇಶದ ಕರ್ನೂಲ್‌ ಮಾರುಕಟ್ಟೆಗೆತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆಸೃಷ್ಟಿಯಾಗಿದೆ. ಇದರಿಂದ ಬೆಳೆದ ಬೆಳೆಯಅರ್ಧದಷ್ಟು ಹಣ ಟ್ರಾನ್ಸ್‌ಪೊàರ್ಟ್‌ಗೆ ಖರ್ಚಾಗಲಿದೆ ಎನ್ನುತ್ತಾರೆ ರೈತರು.

ಅಜವಾನ್‌ ಮುಂಗಾರು ಬೆಳೆ: ಸಾಂಬರ್‌ ಪದಾರ್ಥ ಬೆಳೆಯಾದ ಅಜವಾನ್‌ ಬೆಳೆಯನ್ನು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲಾಗುತ್ತದೆ. ಬಿತ್ತನೆಯ ಸಂದರ್ಭದಲ್ಲಿ ಉತ್ತಮ ಮಳೆ ಅವಶ್ಯಕತೆಯಿದೆ.ಬಿತ್ತನೆ ಬಳಿಕ ಮಳೆಯಾಗದಿದ್ದರೂ ಉತ್ತಮ ಇಳುವರಿ ಬರುತ್ತದೆ. ಚಳಿಗಾಲದಲ್ಲಿ ಬೆಳೆ ಕಟಾವಿಗೆಬರುತ್ತದೆ. ಪ್ರತಿ ಎಕರೆಗೆ 3ರಿಂದ 3.5 ಕ್ವಿಂಟಲ್‌ ಇಳುವರಿ ಸಿಗಲಿದೆ. ನಾಲ್ಕು ವರ್ಷದಿಂದ 10 ಎಕರೆ ಜಮೀನನಲ್ಲಿ 20 ಕ್ವಿಂಟಲ್‌ ಅಜವಾನ್‌ ಬೆಳೆದಿದ್ದೇವೆ. 2.50ರಿಂದ 3 ಲಕ್ಷ ಆದಾಯ ಪಡೆದುಕೊಂಡಿದ್ದೇನೆ. ಉಳಿದ ಬೆಳೆಯಲ್ಲಿ ನಷ್ಟ ಅನುಭವಿಸಿದರೂ ಕೂಡಾ ಅಜವಾನ್‌ ಬೆಳೆ ಪ್ರತಿ ವರ್ಷ ಕೈ ಹಿಡಿಯುತ್ತಿದೆ. ಆದರೆ, ಈ ವರ್ಷ 12 ಎಕರೆ ಜಮೀನನಲ್ಲಿ ಬಿತ್ತನೆ ಮಾಡಿದ್ದೆ. ಆದರೆ, ಅತೀಯಾದ ಮಳೆಯಿಂದ ಸ್ವಲ್ಪ ಪ್ರಮಾಣದ ಇಳುವರಿ ಕಡಿಮೆಯಾಗಿದ್ದರೂ ಸಹ 15ರಿಂದ 16 ಕ್ವಿಂಟಲ್‌ ಅಜಿವಾನ್‌ ಇಳುವರಿ ಬಂದಿದೆ ಎನ್ನುತ್ತಾರೆ ರೈತರು.

ಅಜವಾನ್‌ಗೆ ಉತ್ತಮ ಬೆಲೆ: ಅಜವಾನ್‌ನನ್ನು ಔಷಧಿಯ ವಸ್ತು ತಯಾರಿಕೆಯಲ್ಲಿ ಬಳಕೆ ಮಾಡುತ್ತಿರುವುದರಿಂದ ಅಜವಾನ್‌ ಬೆಲೆ ಹೆಚ್ಚಾಗಿದ್ದು, ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ 20ರಿಂದ 25ಸಾವಿರ ರೂ.ಗೆ ಮಾರಾಟವಾಗಲಿದೆ.

ಮಾರುಕಟ್ಟೆಯ ಸಮಸ್ಯೆ: ಅಜವಾನ್‌ ಬೆಳೆಯನ್ನು ತಾಲೂಕಿನಲ್ಲಿಯೇ ಮೊದಲಿಗೆ ಧನ್ನೂರ ಗ್ರಾಮದ ರೈತ ವಿಜಯಕುಮಾರ ಹುದ್ದಾರ ಬೆಳೆದಿದ್ದು ವಿಶೇಷ. ಅವರು ಅಜವಾನ್‌ನನ್ನು ಹೆಚ್ಚಿನ ಇಳುವರಿಯಲ್ಲಿ ಬೆಳೆದಿರುವುದನ್ನು ಕಂಡು ತಾಲೂಕಿನ ಹಿರೇಬಾದವಾಡಗಿ,ಬೇವಿನಮಟ್ಟಿ, ಚಿಕ್ಕಬಾದವಾಡಗಿ, ಚಿತ್ತವಾಡಗಿ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ನೂರಾರು ಎಕರೆಯಲ್ಲಿ ಬೆಳೆಯುತ್ತಾರೆ. ಆದರೆ, ರಾಜ್ಯದಲ್ಲಿಯೇ ಮಾರುಕಟ್ಟೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ. ಅಜವಾನ್‌ ಮಾರುಕಟ್ಟೆ ಸ್ಥಾಪಿಸುವಂತೆ ರೈತರ ಒತ್ತಾಯವಾಗಿದೆ.

ಅಜವಾನ್‌ ಬೆಳೆ ಅತಿ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಇಳುವರಿ ಪಡೆಯುವ ಬೆಳೆ. ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಂಗಳೂರನಲ್ಲೂ ಅಜವಾನ್‌ ಮಾರುಕಟ್ಟೆಯಿಲ್ಲ. ಆಂಧ್ರದ ಕರ್ನೂಲ ಮಾರುಕಟ್ಟೆಗೆ ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. -ವಿಜಯಕುಮಾರ ಕೆ ಹುದ್ದಾರ್‌, ಧನ್ನೂರದ ಅಜವಾನ್‌ ಬೆಳೆಗಾರ

ಅಜವಾನ್‌ ಬೆಳೆಗೆ ಬೆಳಗಾವಿ ವಿಭಾಗದಲ್ಲೂ ಮಾರುಕಟ್ಟೆಯ ವ್ಯವಸ್ಥೆಯಿಲ್ಲ. ಈಕುರಿತು ಸರ್ಕಾರದ ಗಮನಕ್ಕೆ ತರಬೇಕು. ಈ ಕುರಿತು ಕೃಷಿ ಮಾರಾಟ ಮಂಡಳಿಯೊಂದಿಗೆ ಮಾತನಾಡುತ್ತೇನೆ. -ನಜೀರ ಅಹ್ಮದ್‌ ಲಕ್ಕುಂಡಿ, ಜಿಲ್ಲಾ ವ್ಯವಸ್ಥಾಪಕರು ಎಪಿಎಂಸಿ ಬಾಗಲಕೋಟೆ.

 

-ಮಲ್ಲಿಕಾರ್ಜುನ ಎಂ ಬಂಡರಗಲ್ಲ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.