ಹತ್ತು ವರ್ಷಗಳ ಬೇಡಿಕೆ ಈ ಬಾರಿ ಈಡೇರಲಿ

ಜನಾಗ್ರಹಕ್ಕೆ ಇದು ಸಕಾಲ; ಜನಪ್ರತಿನಿಧಿಗಳಿಗೂ ಒಳ್ಳೆಯ ಅವಕಾಶ

Team Udayavani, Feb 20, 2021, 4:20 AM IST

ಹತ್ತು ವರ್ಷಗಳ ಬೇಡಿಕೆ ಈ ಬಾರಿ ಈಡೇರಲಿ

ಪುತ್ತೂರು ಪ್ರಮುಖ ವಾಣಿಜ್ಯ ಕೇಂದ್ರ. ಉಪವಿಭಾಗವಾಗಿ ಬೆಳೆದ ಊರು ಜಿಲ್ಲೆಯಾಗಿ ರೂಪುಗೊಳ್ಳಬೇಕೆಂಬುದು 10 ವರ್ಷಗಳ ಹಳೆಯ ಬೇಡಿಕೆ. ಪ್ರತಿ ಬಾರಿ ಯಾವುದೋ ಕಾರಣಕ್ಕೆ ಪ್ರಸ್ತಾವ ಬದಿಗೆ ಸರಿಯುತ್ತಿತ್ತು. ಬಾರಿ ಪುತ್ತೂರು ಜಿಲ್ಲೆ ಅಸ್ತಿತ್ವಕ್ಕೆ ಬರಬೇಕೆಂಬುದು ಜನಾಗ್ರಹ. ಜನರ ಆಗ್ರಹಕ್ಕೆ ಇಂದಿನಿಂದ ದನಿಯಾಗುತ್ತಿದೆ ಉದಯವಾಣಿ ಸುದಿನದ ಅಭಿಯಾನ “ಪುತ್ತೂರು ಜಿಲ್ಲೆಯಾಗಲಿ-ಇದು ಜನಾಗ್ರಹ’.

 

ಪುತ್ತೂರು: ವಿಜಯನಗರ ಹೊಸ ಜಿಲ್ಲೆಯಾಗಿ ಘೋಷಣೆ ಆಗಿರುವುದು ಹಾಗೂ ಹೊಸ ಬಜೆಟ್‌ ಮಂಡನೆಗೆ ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಬೆನ್ನಲ್ಲೇ, ಪುತ್ತೂರು ಜಿಲ್ಲೆಯಾಗಬೇಕೆಂಬ ಆಗ್ರಹ ಜೋರಾಗತೊಡಗಿದೆ.

ಸಾರ್ವಜನಿಕ ಚರ್ಚೆ ಆರಂಭವಾಗಿದ್ದು, ಹತ್ತು ವರ್ಷಗಳಿಂದ ಕೇಳಿಬರುತ್ತಿದ್ದ ಆಗ್ರಹ ಈಗ ಮತ್ತಷ್ಟು ಬಲಗೊಂಡಿದೆ.  ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ಹಾಗೂ ಮಂಗಳೂರು ಉಪ ವಿಭಾಗದ ಬಂಟ್ವಾಳ ತಾಲೂಕುಗಳನ್ನು ಹೊಸ ಜಿಲ್ಲೆಗೆ ಸೇರಿಸಬಹುದೆಂಬ ಲೆಕ್ಕಾಚಾರವಿದೆ. ಅರ್ಹತೆ, ಅಗತ್ಯತೆ ಆಧಾರದಲ್ಲೇ ಗ್ರಾಮಾಂತರ ಜಿಲ್ಲೆಯಾಗಬೇಕೆಂಬ ಬೇಡಿಕೆಯನ್ನು ಜನಪ್ರತಿನಿಧಿಗಳ ಮೂಲಕ ಸರಕಾರದ ಮುಂದೆ ಸಲ್ಲಿಸಲಾಗಿದೆ. ಬಹಿರಂಗ ಹೋರಾಟ ಮಾತ್ರ ಬಾಕಿ ಇದೆ. ಅಪೇಕ್ಷಿತ ಬೇಡಿಕೆಗೆ ಈ ಬಾರಿಯ ಬಜೆಟಿನಲ್ಲಿ ಮನ್ನಣೆ ಸಿಗಲಿದೆ ಎಂಬ ನಿರೀಕ್ಷೆ ನಾಗರಿಕರದ್ದು.

ಪುತ್ತೂರು ತಾಲೂಕು ಕೇಂದ್ರ :

ಬ್ರಿಟಿಷ್‌ ಕಾಲದ ಸೌತ್‌ ಕೆನರಾ ಜಿಲ್ಲೆಯಲ್ಲಿ ಉಪ್ಪಿನಂಗಡಿ ತಾಲೂಕು ಕೇಂದ್ರವಾಗಿತ್ತು. ನೆರೆ ಭೀತಿ ಕಾರಣದಿಂದ 1927ರಲ್ಲಿ ಉಪ್ಪಿನಂಗಡಿ ತಾಲೂಕು ಕೇಂದ್ರವನ್ನು ಪುತ್ತೂರಿಗೆ ವರ್ಗಾ ಯಿಸಲಾಗಿತ್ತು. ಅಲ್ಲಿಂದ ಪುತ್ತೂರು ತಾಲೂಕು ಕೇಂದ್ರವಾಗಿ ಇಂದಿಗೆ 93 ವರ್ಷಗಳು ತುಂಬಿವೆ. ಈಗ ಪುತ್ತೂರು ನಗರ ಹತ್ತೂರಿನ ಕೇಂದ್ರವಾಗಿದೆ. ಅನೇಕ ಗ್ರಾಮಗಳು ನಗರಗಳಾಗಿ ಬೆಳೆಯುವ ಹಂತದಲ್ಲಿವೆ. ಒಂದು ಜಿಲ್ಲೆಗೆ ಅಗತ್ಯವಿರುವ ಪೂರಕ ಬೆಳವಣಿಗೆಗಳು ಆಗಿವೆ. ಹಾಗಾಗಿ ಪುತ್ತೂರು ಉಪವಿಭಾಗದ ನಾಗರಿಕರು ಜಿಲ್ಲೆಯ ಬೇಡಿಕೆಯನ್ನು ಮಂಡಿಸತೊಡಗಿದ್ದಾರೆ.

ರಾಮನಗರಕ್ಕಿಂತ ಪುತ್ತೂರು ಹಿರಿದು :

ಈ ಹಿಂದೆ ರಚಿಸಲಾದ ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಿಂತ ಅಧಿಕ ವಿಸ್ತೀರ್ಣ, ಜನಸಂಖ್ಯೆಯನ್ನು ಪ್ರಸ್ತಾವಿತ ಪುತ್ತೂರು ಜಿಲ್ಲಾ ವ್ಯಾಪ್ತಿ ಒಳಗೊಂಡಿದೆ ಹೊಂದಿದೆ ಎನ್ನುವುದು ಜಿಲ್ಲಾ ಕೇಂದ್ರದ ಬೇಡಿಕೆಗೆ ಇರುವ ಮುಖ್ಯ ಸಂಗತಿ. ರಾಮನಗರ ಜಿಲ್ಲೆಯ ಜನಸಂಖ್ಯೆ 10.5 ಲಕ್ಷ ಇದೆ. ಚಿಕ್ಕಬಳ್ಳಾಪುರ ಜಿಲ್ಲೆ 10 ಲಕ್ಷ ಜನಸಂಖ್ಯೆ ಹೊಂದಿದೆ. 2011ರ ಜನಗಣತಿ ಪ್ರಕಾರ ಪುತ್ತೂರು ಜಿಲ್ಲಾ ವ್ಯಾಪ್ತಿಗೆ ಸೇರಬಹುದಾದ ಐದು ತಾಲೂಕುಗಳ ಒಟ್ಟು ಜನಸಂಖ್ಯೆ 10.15 ಲಕ್ಷ ಇದೆ. 3,979 ಚದರ ಕಿ. ಮೀ. ವಿಸ್ತೀರ್ಣ ಹೊಂದಿದೆ. ಈ ಅಂಕಿ-ಅಂಶವನ್ನು ಪರಿಗಣಿಸಿದರೆ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಿಂತ ಪ್ರಸ್ತಾವಿತ ಪುತ್ತೂರು ಜಿಲ್ಲೆ ದೊಡ್ಡದಿದೆ. ಪುತ್ತೂರು ತಾಲೂಕನ್ನು ಆವರಿಸಿರುವ ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳವನ್ನು ಸೇರಿಸಿ ಪುತ್ತೂರನ್ನು ಜಿಲ್ಲಾ ಕೇಂದ್ರವನ್ನಾಗಿ ರೂಪಿಸಬಹುದು.

ದ.ಕ. ಜಿಲ್ಲಾ ಕೇಂದ್ರ ಮಂಗಳೂರಿನಿಂದ 56 ಕಿ.ಮೀ. ದೂರದಲ್ಲಿರುವ ಪುತ್ತೂರು ಸಾಹಿತ್ಯಿಕ, ಸಾಂಸ್ಕೃತಿಕ, ರಾಜಕೀಯ, ಕೃಷಿ, ಶಿಕ್ಷಣ, ಕ್ರೀಡೆ ಕ್ಷೇತ್ರಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದೆ. ಆಸ್ಪತ್ರೆಗಳು, ಶೈಕ್ಷಣಿಕ ಕೇಂದ್ರಗಳು, ಬ್ಯಾಂಕ್‌, ಉಪವಿಭಾಗ ಕಚೇರಿ, ನ್ಯಾಯಾಲಯ ಸೇರಿದಂತೆ ಹಲವು ಸರಕಾರಿ, ಖಾಸಗಿ ಸಂಸ್ಥೆಗಳು ಹೊಂದಿರುವ ಪುತ್ತೂರು ಮಂಗಳೂರಿನ ಅನಂತರದ ಅತಿ ದೊಡ್ಡ ವಾಣಿಜ್ಯ ಪಟ್ಟಣವಾಗಿದೆ.

ಕೇಂದ್ರ ಸ್ಥಾನ :

ಕೇರಳದ ಗಡಿ, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಕಡಬ, ವಿಟ್ಲ ಗಡಿ ಭಾಗಕ್ಕೆ ಅಂಟಿಕೊಂಡಿರುವ ಪುತ್ತೂರು ತಾಲೂಕು ಮಾಣಿ- ಮೈಸೂರು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ರಾಜಧಾನಿಗೆ ಸಂಪರ್ಕ ಕಲ್ಪಿಸುತ್ತಿದೆ. ತನ್ನ ಗಡಿ ವ್ಯಾಪ್ತಿಯ ನಾಲ್ಕು ತಾಲೂಕುಗಳಿಗೆ ಕೇಂದ್ರ ಸ್ಥಾನವಾಗಲು ಅರ್ಹತೆ ಹೊಂದಿದೆ. ಪ್ರಗತಿ ಹಾಗೂ ಸಂಪರ್ಕದ ದೃಷ್ಟಿಯಲ್ಲಿ ಮಂಗಳೂರು ಅನಂತರದ ಸ್ಥಾನದಲ್ಲಿರುವ ಪುತ್ತೂರು ಗ್ರಾಮಾಂತರ ಜಿಲ್ಲೆಯಾಗಲು ಎಲ್ಲ ಅರ್ಹತೆ ಹೊಂದಿದೆ.

ಜಿಲ್ಲೆಯ ಎರಡನೆ ಮಹಿಳಾ ಠಾಣೆ, ಪುತ್ತೂರು ಸುಳ್ಯ, ಕಡಬ, ಬೆಳ್ತಂಗಡಿಯನ್ನು ಒಳಗೊಂಡ ಸಹಾಯಕ ಆಯುಕ್ತರ ಉಪವಿಭಾಗ ಕಚೇರಿ, 3 ತಾಲೂಕು ವ್ಯಾಪ್ತಿಗೆ ಸೇರಿರುವ ಆರ್‌ಟಿಓ ಕಚೇರಿ, ಪ್ರಾಥಮಿಕ ಶಿಕ್ಷಣದಿಂದ ಎಂಜಿನಿಯರ್‌ ತನಕ ವ್ಯಾಸಾಂಗದ ಶಿಕ್ಷಣ ಸಂಸ್ಥೆಗಳು ಇಲ್ಲಿವೆ. ದಿನವೊಂದಕ್ಕೆ 20 ಸಾವಿರಕ್ಕೂ ಅಧಿಕ ಮಂದಿ ವಿವಿಧ ವ್ಯವಹಾರಗಳಿಗಾಗಿ ನಗರಕ್ಕೆ ಪ್ರವೇಶಿಸುತ್ತಾರೆ. ಕಾಸರಗೋಡು, ಕೊಡಗು ಜಿಲ್ಲೆಯಿಂದಲೂ ವಾಣಿಜ್ಯ, ಶಿಕ್ಷಣ, ವೈದ್ಯಕೀಯ ನೆಲೆಯಲ್ಲಿ ಪುತ್ತೂರನ್ನು ಆಶ್ರಯಿಸುವವರ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದೆ.

ಐದು ತಾಲೂಕಿನ ವ್ಯಾಪ್ತಿ :

ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳನ್ನು ಒಳಗೊಂಡ ಪುತ್ತೂರು ಗ್ರಾಮಾಂತರ ಜಿಲ್ಲೆ ರಚಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದಕ್ಕೆ ಪೂರಕವಾಗಿ ಆಗಬೇಕಾದ ಅಗತ್ಯತೆಗಳನ್ನು ಈಡೇರಿಸಲು ಆದ್ಯತೆ ನೀಡಲಾಗಿದೆ.ಸಂಜೀವ ಮಠಂದೂರು, ಶಾಸಕರು, ಪುತ್ತೂರು

 

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.